
ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರು, ರೈತರು, ದಲಿತರು ಹಾಗೂ ಕಳಸಾ-ಬಂಡೂರಿ ಮತ್ತು ಕಾವೇರಿ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಒಟ್ಟು 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕರ್ನಾಟಕ ಸಚಿವ ಸಂಪುಟ (cabinet) ತೀರ್ಮಾನಿಸಿದೆ. ಇದರಲ್ಲಿ ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ 7 ಪ್ರಕರಣಗಳೂ ಸೇರಿವೆ. ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸರ್ಕಾರವು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಕಿರುಕುಳ ನೀಡುತ್ತಿದ್ದು, ಮುಸ್ಲಿಮರ ಮೇಲಿನ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ಕ್ರಿಮಿನಲ್ಗಳ ಪರ ಎಂಬ ಕೆಟ್ಟ ಸಂದೇಶ ನೀಡುತ್ತಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಕಿಡಿಕಾರಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಕ್ಯಾಬಿನೆಟ್ ಉಪಸಮಿತಿಯ ಶಿಫಾರಸಿನಂತೆ ಕಾನೂನಾತ್ಮಕವಾಗಿ ಮತ್ತು ಸುದೀರ್ಘ ಚರ್ಚೆಯ ಬಳಿಕವೇ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಮೇ 22 ರಿಂದ ಮುಂದಿನ ಒಂದು ವಾರ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಗಂಟೆಗೆ 30-40 ಕಿ.ಮೀ ವೇಗ ಸಹಿತ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಮುಂದಿನ ಕೆಲವು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಹೊತ್ತಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯವು ಕುಸಿಯುತ್ತಿರುವುದರ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಅತಿಯಾಗಿ ಆತಂಕಪಡುವ ಅಗತ್ಯವಿಲ್ಲ ಎಂದು 16ನೇ ಹಣಕಾಸು ಆಯೋಗದ ಅಧ್ಯಕ್ಷ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಪನಗರಿಯಾ ಹೇಳಿದ್ದಾರೆ. ರೂಪಾಯಿ ಮೌಲ್ಯ ಪ್ರತಿ ಡಾಲರ್ಗೆ 100 ರೂಪಾಯಿಗಳ ಗಡಿ ದಾಟಿದರೂ ಅದು ಕೇವಲ ಒಂದು ಸಂಖ್ಯೆಯಷ್ಟೇ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಒಂದು ವೇಳೆ ಕೃತಕವಾಗಿ ರೂಪಾಯಿ ಮೌಲ್ಯವನ್ನು ರಕ್ಷಿಸಲು ಹೋದರೆ ದೇಶದ ಫಾರೆಕ್ಸ್ ನಿಧಿ ಖಾಲಿಯಾಗುವ ಅಪಾಯವಿದೆ ಎಚ್ಚರಿಸಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಕ್ವಾಲಿಫೈಯರ್ 1 ಪಂದ್ಯಕ್ಕೆ ಅರ್ಹತೆ ಪಡೆಯಲಿದೆ. ಇನ್ನು ಪಂದ್ಯದಲ್ಲಿ ಆರ್ಸಿಬಿ ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮಹತ್ತರ ಇತಿಹಾಸ ಸೃಷ್ಟಿಸುವ ಸನಿಹದಲ್ಲಿದ್ದಾರೆ.
ಇದನ್ನೂ ಓದಿ: SRH vs RCB: ಕೊನೆಯ ಲೀಗ್ ಪಂದ್ಯದಲ್ಲಿ ಆರ್ಸಿಬಿಗೆ ಸನ್ರೈಸರ್ಸ್ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
ಇಂದು ವಿರಾಟ್ ಕೊಹ್ಲಿ ಕೇವಲ 58 ರನ್ ಗಳಿಸಿದರೆ, ಐಪಿಎಲ್ ಇತಿಹಾಸದಲ್ಲೇ ಸತತ 4 ಸೀಸನ್ಗಳಲ್ಲಿ 600ಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಕಿಂಗ್ ಕೊಹ್ಲಿ ಈ ಹಿಂದೆ 2023ರಲ್ಲಿ 639, 2024ರಲ್ಲಿ 741 ಮತ್ತು 2025ರಲ್ಲಿ 657 ರನ್ ಗಳಿಸಿದ್ದರು. ಸದ್ಯ ನಡೆಯುತ್ತಿರುವ ಆವೃತ್ತಿಯಲ್ಲಿ 13 ಪಂದ್ಯಗಳಲ್ಲಿ ಅವರು 542 ರನ್ ಗಳಿಸಿದ್ದಾರೆ. ಈಗಾಗಲೇ ಕ್ರಿಸ್ ಗೇಲ್, ಡೇವಿಡ್ ವಾರ್ನರ್ ಮತ್ತು ಕೆ.ಎಲ್. ರಾಹುಲ್ ಸತತ ಮೂರು ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರಾದರೂ, ಸತತ ನಾಲ್ಕು ಬಾರಿ ಯಾರೂ ಈ ಮೈಲಿಗಲ್ಲು ತಲುಪಿಲ್ಲ. ಇಂದು ಕೊಹ್ಲಿ ಆ ಅಪರೂಪದ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ನಟಿ ಮತ್ತು ಸಂಸದೆ ಕಂಗನಾ ರಣಾವತ್ ಅವರು ಮಂಗಳಸೂತ್ರ ಹಾಗೂ ಹಸಿರು ಬಳೆಗಳನ್ನು ಧರಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆನ್ನಲ್ಲೇ ಅವರು ರಹಸ್ಯವಾಗಿ ಮದುವೆಯಾಗಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಈ ಬಗ್ಗೆ ಸ್ವತಃ ಕಂಗನಾ ರಣಾವತ್ ಅವರು ಸ್ಪಷ್ಟನೆ ನೀಡಿದ್ದು, ಇದು ಸಿನಿಮಾ ಚಿತ್ರೀಕರಣವೊಂದರ ಪಾತ್ರದ ಗೆಟಪ್ ಆಗಿದ್ದು, ಇದನ್ನ ಯಾರೋ ಫೋಟೋ ಕ್ಲಿಕ್ಕಿಸಿದ್ದಾರೆ. ನಾನು ಎಂದಿಗೂ ಗುಟ್ಟಾಗಿ ಮದುವೆಯಾಗುವುದಿಲ್ಲ ಎಂದು ವದಂತಿಗಳಿಗೆ ತೆರೆ ಎಳೆದಿದ್ದಾರೆ. (ಈ ಸುದ್ದಿಯ ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ)
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.