AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ದೀದಿ ಸರ್ಕಾರ ವಜಾ; ಕರ್ನಾಟಕದಲ್ಲಿ ದಾಖಲೆ ಮದ್ಯ ಮಾರಾಟ

ರಾಜ್ಯಪಾಲ ಆರ್.ಎನ್.ರವಿ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರವನ್ನು ವಜಾಗೊಳಿಸಿದ್ದಾರೆ. ಆ ಮೂಲಕ ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆದಿವೆ. ಇನ್ನು ಇತ್ತ ಗಾಳಿ, ಮಳೆಯಿಂದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ ಆಗಿದೆ. ಮೀಟರ್​ ದರ ಹೆಚ್ಚಳಕ್ಕೆ ಬೆಂಗಳೂರು ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ.

TV9 Kannada News Live: ದೀದಿ ಸರ್ಕಾರ ವಜಾ; ಕರ್ನಾಟಕದಲ್ಲಿ ದಾಖಲೆ ಮದ್ಯ ಮಾರಾಟ
ಮಮತಾ ಬ್ಯಾನರ್ಜಿ, ಮದ್ಯImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:May 07, 2026 | 9:04 PM

Share

ಬೆಂಗಳೂರು, ಮೇ 07: ಪಶ್ಚಿಮ ಬಂಗಾಳದ (West Bengal) ರಾಜಕೀಯ ವಿದ್ಯಮಾನಗಳಲ್ಲಿ ಭಾರಿ ಸಂಚಲನ ಮೂಡಿದ್ದು, ರಾಜ್ಯಪಾಲ ಆರ್.ಎನ್. ರವಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರ ಮತ್ತು ಸಚಿವ ಸಂಪುಟವನ್ನು ವಜಾಗೊಳಿಸಿದ್ದಾರೆ. ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಟಿಎಂಸಿ ಹಿನ್ನಡೆ ಅನುಭವಿಸಿದ್ದರೂ, ಮಮತಾ ಬ್ಯಾನರ್ಜಿ ತಾವು ಸೋತಿಲ್ಲ ಮತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಚುನಾವಣೆಯಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಕ್ಷೇತ್ರಗಳನ್ನು ಕದ್ದಿದ್ದಾರೆಂದು ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಹೀಗಾಗಿ ಅವರು ಅಧಿಕಾರ ಬಿಟ್ಟುಕೊಡಲು ನಿರಾಕರಿಸಿದ್ದರಿಂದ, ರಾಜ್ಯಪಾಲರು ಸಂವಿಧಾನದ ಅಧಿಕಾರ ಬಳಸಿ ಸರ್ಕಾರವನ್ನೇ ವಿಸರ್ಜಿಸಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ.

ಮುಖ್ಯಾಂಶಗಳು

  • ಪಶ್ಚಿಮ ಬಂಗಾಳ ಸರ್ಕಾರ ವಿಸರ್ಜಿಸಿದ ರಾಜ್ಯಪಾಲ: ಮಮತಾ ಬ್ಯಾನರ್ಜಿ ಸರ್ಕಾರ ವಜಾ
  • ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್: ತಪ್ಪಿದ ಅನಾಹುತ
  • ಎಲ್‌ಪಿಜಿ ದರ ಏರಿಕೆ ಬೆನ್ನಲ್ಲೇ ಮೀಟರ್ ದರ ಹೆಚ್ಚಳಕ್ಕೆ ಮುಂದಾದ ಆಟೋ ಚಾಲಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್: ತಪ್ಪಿದ ಅನಾಹುತ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯ ಉಂಟಾದ ಹಿನ್ನೆಲೆ ತುರ್ತು ಲ್ಯಾಂಡಿಂಗ್ ಮಾಡಿರುವಂತಹ ಘಟನೆ ನಡೆದಿದೆ. ಏಕನಾಥ್ ಶಿಂಧೆ ಅವರು ಮುಂಬೈನಿಂದ ತಮ್ಮ ತವರು ಜಿಲ್ಲೆಯಾದ ಸತಾರಾಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣಿಸುತ್ತಿದ್ದರು. ಈ ವೇಳೆ ಏಕಾಏಕಿ ಭಾರಿ ಗಾಳಿ ಮತ್ತು ಗುಡುಗು ಸಹಿತ ಮಳೆ ಆರಂಭವಾಗಿದೆ. ಇದರಿಂದಾಗಿ ಏಕನಾಥ್ ಶಿಂಧೆ ಅವರ ವಿಮಾನ ಪಯಣಕ್ಕೆ ಅಡ್ಡಿ ಉಂಟಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದ ಸಂಪುಟವನ್ನು ವಿಸರ್ಜಿಸಿದ ರಾಜ್ಯಪಾಲ; ಮಮತಾ ಬ್ಯಾನರ್ಜಿ ಈಗ ಮಾಜಿ ಸಿಎಂ

ಪೈಲಟ್ ತಕ್ಷಣವೇ ಎಚ್ಚೆತ್ತುಕೊಂಡು ಹೆಲಿಕಾಪ್ಟರ್ ಅನ್ನು ಸುರಕ್ಷಿತವಾಗಿ ವಾಪಸ್ ಮುಂಬೈಗೆ ತಿರುಗಿಸಿ, ಜುಹು ಏರೋಡ್ರೋಮ್‌ನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದ್ದಾರೆ. ಪ್ರತಿಕೂಲ ಹವಾಮಾನದಿಂದಾಗಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ಪೈಲಟ್‌ನ ಸಮಯಪ್ರಜ್ಞೆಯಿಂದ ತಪ್ಪಿದೆ. ಘಟನೆ ಬಳಿಕ ಶಿಂಧೆ ಅವರು ರಸ್ತೆ ಮಾರ್ಗದ ಮೂಲಕ ತಮ್ಮ ಪ್ರಯಾಣ ಬೆಳೆಸಿದರು.

ಬೆಂಗಳೂರು ಆಟೋ ಪ್ರಯಾಣಿಕರಿಗೆ ಶಾಕ್: ಮೀಟರ್​ ದರ ಹೆಚ್ಚಳಕ್ಕೆ ಚಾಲಕ ಸಂಘಟನೆಗಳ ಮನವಿ

ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಮತ್ತೆ ಏರಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಆಟೋ ಎಲ್‌ಪಿಜಿ ದರ ಸತತ ಏರಿಕೆ ಬೆನ್ನಲ್ಲೇ ಆಟೋ ಚಾಲಕ ಸಂಘಟನೆಗಳು, ಆಟೋ ಮೀಟರ್ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿವೆ. ಸದ್ಯ ಬೆಂಗಳೂರಿನಲ್ಲಿ ಆಟೋ ಕನಿಷ್ಠ ದರ 2 ಕಿ.ಮೀಗೆ 30 ರೂಪಾಯಿ ಇದೆ. ಇದನ್ನು 50 ರೂಪಾಯಿಗೆ ಹೆಚ್ಚಿಸಬೇಕು ಎಂಬುದು ಚಾಲಕರ ಪ್ರಮುಖ ಬೇಡಿಕೆಯಾಗಿದೆ.

ಇದನ್ನೂ ಓದಿ: ಕಬ್ಬನ್ ಪಾರ್ಕ್‌ನಲ್ಲಿ ಮಾವು ಮೇಳಕ್ಕೆ ವಾಕರ್ಸ್ ಅಸೋಸಿಯೇಷನ್ ವಿರೋಧ: ಏಕೆ?

ಇತ್ತೀಚಿನ ದಿನಗಳಲ್ಲಿ ಆಟೋ ಎಲ್‌ಪಿಜಿ ಬೆಲೆಯು ಪ್ರತಿ ಲೀಟರ್‌ಗೆ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದಾಗಿ ದೈನಂದಿನ ಜೀವನ ನಡೆಸುವುದು ಕಷ್ಟವಾಗುತ್ತಿದೆ ಎಂದು ಚಾಲಕರು ಅಳಲು ತೋಡಿಕೊಂಡಿದ್ದಾರೆ. ಇನ್ನು ಈ ಬಗ್ಗೆ ಈಗಾಗಲೇ ಆಟೋ ಚಾಲಕರ ಸಂಘಟನೆಗಳು ಸಾರಿಗೆ ಸಚಿವರಿಗೂ ಮನವಿ ಸಲ್ಲಿಸಲು ಸಿದ್ಧತೆ ನಡೆಸಿವೆ.

ಕರ್ನಾಟಕದಲ್ಲಿ ದಾಖಲೆ ಮದ್ಯ ಮಾರಾಟ: 3,688 ಕೋಟಿ ರೂ ಆದಾಯ

ಕರ್ನಾಟಕದ ಅಬಕಾರಿ ಇಲಾಖೆಯ ಇತಿಹಾಸದಲ್ಲಿ ಏಪ್ರಿಲ್ ತಿಂಗಳು ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಕಳೆದ ತಿಂಗಳು ನಡೆದ ಭರ್ಜರಿ ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಬರೋಬ್ಬರಿ 3,688 ಕೋಟಿ ರೂ ಆದಾಯ ಹರಿದುಬಂದಿದೆ. ಇದು ಕಳೆದ 13 ವರ್ಷಗಳ ಇತಿಹಾಸದಲ್ಲೇ ಒಂದೇ ತಿಂಗಳಲ್ಲಿ ಸಂಗ್ರಹವಾದ ಗರಿಷ್ಠ ಆದಾಯವಾಗಿದೆ. ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಲ್ಲಿ ಇಷ್ಟೊಂದು ಬೃಹತ್ ಪ್ರಮಾಣದ ವಹಿವಾಟು ಒಂದೇ ತಿಂಗಳಲ್ಲಿ ನಡೆದಿರುವುದು ಇದೇ ಮೊದಲು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:03 pm, Thu, 7 May 26

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!