AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ; ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್?

ತಮಿಳುನಾಡು ರಾಜಕೀಯದಲ್ಲಿ ಹೊಸ ಶಕೆ ಆರಂಭವಾಗಿದ್ದು, ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರ ರಚನೆಗೆ ಸಜ್ಜಾಗಿದೆ. ಇನ್ನು ತಮಿಳುನಾಡು ಸರ್ಕಾರ ರಚನೆ ಕುರಿತು ಬಿಎಲ್​​ ಸಂತೋಷ್ ಮಾರ್ಮಿಕ ಪೋಸ್ಟ್ ಮಾಡಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸದ್ಯದ ಪ್ರಮುಖ ಸುದ್ದಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Kannada News Live: ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚಿಸುವುದು ನಿಶ್ಚಿತ; ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್?
ವಿಜಯ್, ಜಿಬಿಎImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:May 08, 2026 | 5:36 PM

Share

ಬೆಂಗಳೂರು, ಮೇ 08: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಶಕೆಯನ್ನು ಬರೆಯಲು ಹೊರಟಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷಕ್ಕೆ ಇದೀಗ ಸರ್ಕಾರ ರಚನೆಯ ಹಾದಿ ಸುಗಮವಾಗಿದೆ. ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ತಲುಪಲು ಎಡಪಕ್ಷಗಳು ಮತ್ತು ಮೈತ್ರಿ ಪಕ್ಷಗಳು ವಿಜಯ್​​ಗೆ ಸಾಥ್ ನೀಡಿವೆ. ಆ ಮೂಲಕ ಅಗತ್ಯ ಶಾಸಕರ ಬೆಂಬಲ ಗಳಿಸಿರುವ ವಿಜಯ್, ತಮಿಳುನಾಡಿನ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಇದೀಗ ನಿಶ್ಚಿತವಾಗಿದೆ.

ಮುಖ್ಯಾಂಶಗಳು

  • ತಮಿಳುನಾಡಿನಲ್ಲಿ ವಿಜಯ್ ಸರ್ಕಾರ ರಚನೆಯ ಹಾದಿ ಸುಗಮ
  • ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಬಗ್ಗೆ ಸಂತೋಷ್ ಪೋಸ್ಟ್​​
  • ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್?

ತಮಿಳುನಾಡಿನ ಒಟ್ಟು 234 ವಿಧಾನಸಭಾ ಕ್ಷೇತ್ರಗಳ ಪೈಕಿ 108 ಸ್ಥಾನಗಳಲ್ಲಿ ಈಗಾಲೇ ವಿಜಯ್ ದೊಡ್ಡ ಮಟ್ಟದ ಯಶಸ್ಸು ಸಾಧಿಸಿದ್ದಾರೆ. ಪೆರಂಬೂರ್‌ ಹಾಗೂ ತಿರುಚ್ಚಿ ಪೂರ್ವ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ವಿಜಯ್ ಎರಡೂ ಕಡೆ ಜಯಗಳಿಸಿದ್ದು, ಶಾಸಕರ ಎಣಿಕೆಯ ನಿಯಮದಂತೆ ಸದ್ಯಕ್ಕೆ ಅವರ ಪಕ್ಷದ ಬಲ 107ಕ್ಕೆ ಸ್ಥಿರವಾಗಿದೆ.

ಇದನ್ನೂ ಓದಿ: ವಿಜಯ್​ಗಿರೋ ಆಯ್ಕೆಗಳ ಬಗ್ಗೆ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಸೂರಜ್ ಹೆಗ್ಡೆ ಹೇಳಿದ್ದಿಷ್ಟು

ಸಿಪಿಐ ಪಕ್ಷವು ಟಿವಿಕೆಗೆ ಬೇಷರತ್ ಬೆಂಬಲ ಘೋಷಿಸಿದ್ದು, ಇದರೊಂದಿಗೆ ಸಿಪಿಐ(ಎಂ) ಹಾಗೂ ವಿಸಿಕೆ ಪಕ್ಷಗಳು ಸಹ ವಿಜಯ್ ಬೆನ್ನಿಗೆ ನಿಂತಿವೆ. ಪ್ರಸ್ತುತ ಟಿವಿಕೆಯ 107 ಸ್ಥಾನಗಳೊಂದಿಗೆ ಕಾಂಗ್ರೆಸ್‌ನ 5, ವಿಸಿಕೆಯ 2, ಸಿಪಿಐನ 2 ಹಾಗೂ ಸಿಪಿಐ(ಎಂ)ನ 2 ಸ್ಥಾನಗಳು ಸೇರಿದಂತೆ ಒಟ್ಟು ಬಲ 118ಕ್ಕೆ ಏರಿದೆ ಆಗಿದೆ.

ತಮಿಳುನಾಡು ಸರ್ಕಾರ ರಚನೆ ಕುರಿತು ಬಿಎಲ್​​ ಸಂತೋಷ್ ಮಾರ್ಮಿಕ ಪೋಸ್ಟ್

ತಮಿಳುನಾಡಿನಲ್ಲಿ ನೂತನ ಸರ್ಕಾರ ರಚನೆಯ ಕಸರತ್ತು ಗರಿಗೆದರಿರುವ ಬೆನ್ನಲ್ಲೇ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್​​ ಸಂತೋಷ್ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಪೋಸ್ಟ್ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಇದನ್ನೂ ಓದಿ: TV9 Kannada News Live: ರಾಜ್ಯದಲ್ಲಿ SIR ವಿರೋಧಿ ಸಂಘಟನೆಗಳ ಜೊತೆ ಸಿಎಂ ಮೀಟಿಂಗ್‌! ಇಲ್ಲಿದೆ ಈ ಹೊತ್ತಿನ ಪ್ರಮುಖ ಸುದ್ದಿಗಳು

ತಮಿಳುನಾಡಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾರ್ಮಿಕವಾಗಿ ಪ್ರತಿಕ್ರಿಯಿಸಿರುವ ಅವರು, “ತಮಿಳುನಾಡಿನಲ್ಲಿ ಅಂತಿಮವಾಗಿ ಯಾರು ಸರ್ಕಾರ ರಚಿಸುತ್ತಾರೆ ಎಂಬುದನ್ನು ಕಾಲವೇ ನಿರ್ಧರಿಸುತ್ತದೆ. ಆದರೆ ಒಂದು ವಿಷಯ ಮಾತ್ರ ಖಚಿತ, ಈ ಎಲ್ಲಾ ಬೆಳವಣಿಗೆಗಳ ಕೊನೆಯಲ್ಲಿ ಕಾಂಗ್ರೆಸ್ ಪಕ್ಷವು ಮುಖಕ್ಕೆ ಮೊಟ್ಟೆ ಹೊಡೆಸಿಕೊಳ್ಳುವ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ,” ಎಂದಿದ್ದಾರೆ.

ಜಿಬಿಎ ಚುನಾವಣೆಗೆ ಮುಹೂರ್ತ ಫಿಕ್ಸ್: ಜೂನ್ 14 ರಿಂದ 24ರ ನಡುವೆ ಬೆಂಗಳೂರಿನಲ್ಲಿ ಮತದಾನ?

ಬಹು ನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಲಕ್ಷಣಗಳು ಗೋಚರಿಸಿದ್ದು, ಜೂನ್ 14 ರಿಂದ ಜೂನ್ 24ರ ನಡುವೆ ಮತದಾನ ನಡೆಯುವ ಸಾಧ್ಯತೆಯಿದೆ. ರಾಜ್ಯ ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಿತು. ಜೂನ್ 30ರ ಒಳಗಾಗಿ ಚುನಾವಣೆ ಪ್ರಕ್ರಿಯೆ ಮುಗಿಸಿ ವರದಿ ನೀಡುವಂತೆ ಸುಪ್ರೀಂಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಆಯೋಗವು ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ಮಳೆಗಾಲ ಮತ್ತು ಶಾಲಾ-ಕಾಲೇಜುಗಳ ಆರಂಭದ ಸಮಯವನ್ನು ಗಮನದಲ್ಲಿಟ್ಟುಕೊಂಡು ಅಂತಿಮ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:06 pm, Fri, 8 May 26

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ