ಸಾರಿಗೆ ಮುಷ್ಕರ; ಬಸ್​ಗಳಿಲ್ಲದೆ ಪರದಾಡುತ್ತಿದ್ದ ತಲ್ಸೇಮಿಯಾ ರೋಗಿಗೆ ನೆರವಾದ ಟಿವಿ9

ದಿಕ್ಕಿಲ್ಲದೆ ನಿಂತಿದ್ದ ತಮಿಳುನಾಡು ಮೂಲದ ತಲ್ಸೇಮಿಯಾ ರೋಗಿಯನ್ನು ಆಸ್ಪತ್ರೆ ತಲುಪಲು ಟಿವಿ9 ಸಿಬ್ಬಂದಿ ಸಹಾಯ ಮಾಡಿದ್ದಾರೆ. ತಮಿಳುನಾಡಿನ ಜೋಲಾರ್ ಪೇಟ್​ಯಿಂದ ಬಂದಿದ್ದ ತಲ್ಸೇಮಿಯಾ ಭಾದಿತ ಯುವಕ ವಿನೋದ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾದು ನಿಂತಿದ್ದ.

ಸಾರಿಗೆ ಮುಷ್ಕರ; ಬಸ್​ಗಳಿಲ್ಲದೆ ಪರದಾಡುತ್ತಿದ್ದ ತಲ್ಸೇಮಿಯಾ ರೋಗಿಗೆ ನೆರವಾದ ಟಿವಿ9
ತಲ್ಸೇಮಿಯಾ ರೋಗಿಗೆ ನೆರವಾದ ಟಿವಿ9
Follow us
|

Updated on:Apr 12, 2021 | 10:08 AM

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸರ್ಕಾರಿ ಸಾರಿಗೆ ನೌಕರರು ಕಳೆದ 6 ದಿನಗಳಿಂದ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಜನ ಸಾಮಾನ್ಯರು ಅನೇಕ ಕಷ್ಟಗಳನ್ನು ಎದುರಿಸುವಂತಾಗಿದೆ. ದುಪ್ಪಟ್ಟು ಹಣ ವ್ಯಯ ಮಾಡುವಂತಾಗಿದೆ. ಇಂದೂ ಕೂಡ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ತಲ್ಸೇಮಿಯಾ ರೋಗಿಯೊಬ್ಬ ಆಸ್ಪತ್ರೆಗೆ ಹೋಗಲು ಬಸ್ ಇಲ್ಲದೆ ಪರದಾಡುತ್ತಿದ್ದು ರೋಗಿಯ ಸಂಕಷ್ಟ ನೋಡಲಾಗದೆ ಟಿವಿ9 ಸಹಾಯ ಮಾಡಿದೆ.

ದಿಕ್ಕಿಲ್ಲದೆ ನಿಂತಿದ್ದ ತಮಿಳುನಾಡು ಮೂಲದ ತಲ್ಸೇಮಿಯಾ ರೋಗಿಯನ್ನು ಆಸ್ಪತ್ರೆ ತಲುಪಲು ಟಿವಿ9 ಸಿಬ್ಬಂದಿ ಸಹಾಯ ಮಾಡಿದ್ದಾರೆ. ತಮಿಳುನಾಡಿನ ಜೋಲಾರ್ ಪೇಟ್​ಯಿಂದ ಬಂದಿದ್ದ ತಲ್ಸೇಮಿಯಾ ಭಾದಿತ ಯುವಕ ವಿನೋದ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಬಸ್​ಗಾಗಿ ಕಾದು ನಿಂತಿದ್ದ. ಎಷ್ಟೇ ಹೊತ್ತಾದರೂ ಬಸ್ ಬಾರದ ಹಿನ್ನೆಲೆಯಲ್ಲಿ ಆಸ್ಪತ್ರೆ ತಲುಪಲು ಆಟೋ ಮೊರೆ ಹೋಗಿದ್ದಾನೆ. ಆದರೆ ಮುಷ್ಕರದ ಬಿಸಿಯ ಲಾಭ ಪಡೆಯಲು ಮುಂದಾದ ಆಟೋ ಚಾಲಕ ಚಾಮರಾಜಪೇಟೆಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್​ಗೆ ತೆರಳಲು 200 ರೂ. ಕೇಳಿದ್ದಾನೆ. ಈ ವೇಳೆ ಮಧ್ಯಪ್ರವೇಶಿಸಿದ ಟಿವ9 ವರದಿಗಾರ 80 ರೂ. ಗೆ ಮಾತನಾಡಿ ಆಟೋ ಹತ್ತಿಸಿ ಕಳುಹಿಸಿಕೊಟ್ಟಿದ್ದಾರೆ. ಆದರೆ 200 rರೂಪಾಯಿ ಕೊಡುವಂತೆ ಅರ್ಧ ದಾರಿಯಲ್ಲೇ ಯುವಕನನ್ನು ಇಳಿಸಿ ಆಟೋ ಚಾಲಕ ಹೊರಟು ಹೋಗಿದ್ದಾನೆ.

Tv9 Helps thalassemia patient

ತಲ್ಸೇಮಿಯಾ ರೋಗಿಗೆ ನೆರವಾದ ಟಿವಿ9

ಬಳಿಕ ಮತ್ತೆ ಯುವಕ ನಡೆದುಕೊಂಡೇ ಬಿಎಂಟಿಸಿ ಬಸ್ ನಿಲ್ದಾಣಕ್ಕೆ ಟಿವಿ9 ವರದಿಗಾರನನ್ನು ಹುಡುಕಿಕೊಂಡು ಬಂದಿದ್ದಾನೆ. ಆಟೋಗೆ ಕೊಡುವಷ್ಟು ದುಡ್ಡಿಲ್ಲದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲೇ ಅಸ್ವಸ್ಥ ಸ್ಥಿತಿಯಲ್ಲಿ ಪರದಾಡುತ್ತಿದ್ದ ಯುವಕನನ್ನು ನೋಡಿದ ಟಿವಿ9 ವರದಿಗಾರ ತಕ್ಷಣ ಅಸ್ವಸ್ಥ ಯುವಕನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಟಿವಿ9 ಕ್ಯಾಬ್​ನಲ್ಲೇ ರೋಗಿಯನ್ನು ಬ್ಲಡ್ ಬ್ಯಾಂಕ್ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಸದ್ಯ ಹಣದ ಮೋಹಕ್ಕೆ ಬಿದ್ದ ಆಟೋ ಚಾಲಕನ ರೋಗಿ ಎಂದೂ ಲೆಕ್ಕಿಸದೆ ನಡು ರಸ್ತೆಯಲ್ಲೇ ಬಿಟ್ಟು ಹೋಗಿದ್ದು ಇದೆಂಥಾ ಅಮಾನವೀಯ ನಡೆ ಎಂಬಂತಾಗಿದೆ.

ಇದನ್ನೂ ಓದಿ: ‘ಕಂದನ ಉಳಿಸು ಕರ್ನಾಟಕ’ ಟಿವಿ9 ಅಭಿಯಾನಕ್ಕೆ ಸ್ಪಂದಿಸಿದ ಪ್ರಧಾನಿ ಕಾರ್ಯಾಲಯ

(TV9 Kannada Reporter Helps Thalassemia Patient to go For Hospital During Bus Strike in Bengaluru)

Published On - 10:07 am, Mon, 12 April 21

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ