TV9 Karnataka Summit 2023; ಟ್ರಾಫಿಕ್ ಸಮಸ್ಯೆಯಿಂದ ಶಾಲಾಮಕ್ಕಳಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಉಪಾಯ ಕಂಡುಕೊಳ್ಳಬೇಕು: ಡಿಕೆ ಶಿವಕುಮಾರ್

ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023: ಶಾಲಾ ವೇಳೆಯನ್ನು ಬದಲಾಯಿಸುವುದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ, ಬೆಳಗ್ಗೆ 7 ಗಂಟೆಗೆ ಇಲ್ಲವೇ 10:30ಕ್ಕೆ ಶಾಲೆಗಳನ್ನು ಅರಂಭಿಸಲಾಗದು. ಒಂದು ಪರಿಹಾರವಂತೂ ಬೇಕೇಬೇಕು ಅಂತ ಹೇಳಿದ ಶಶಿಕುಮಾರ್ ಸರ್ಕಾರದ ಕಡೆಯಿಂದ ಶಾಲಾ ಮುಖ್ಯಸ್ಥರನ್ನು, ಪೋಷಕನ್ನು ಮತ್ತು ಸಂಬಂಧಪಟ್ಟ ಉಳಿದವರನ್ನು ಕರೆಸಿ ಅಭಿಪ್ರಾಯ ಸಂಗ್ರಹಿಸುವ ಯೋಚನೆ ಏನಾದರೂ ಇದೆಯಾ ಅಂತ ಉಪ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು.

|

Updated on: Sep 15, 2023 | 4:19 PM

ಬೆಂಗಳೂರು: ಕನಸಿನ ಕರುನಾಡು ಕರ್ನಾಟಕ ಸ್ಟೇಟ್ ಸಮ್ಮಿಟ್-2023 (TV9 Karnataka Summit 2023) ರಲ್ಲಿ ಭಾಗವಹಿಸಿ ಮಾತಾಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ನಗರದಲ್ಲಿ ಪ್ರತಿನಿತ್ಯ ಉಂಟಾಗುವ ಟ್ರಾಫಿಕ್ ಜಾಮ್ ಸಮಸ್ಯೆಯ ಬಗ್ಗ ಕಳವಳ ವ್ಯಕ್ತಪಡಿಸಿದರು. ಶಾಲಾ ಮಕ್ಕಳಿಗೆ ಇದರಿಂದ ತುಂಬಾ ತೊಂದರೆಯಾಗುತ್ತಿರುವ ಸಂಗತಿಯನ್ನು ಅವರು ಅಂಗೀಕರಿಸಿದರು. ಖಾಸಗಿ ಶಾಲೆಯೊಂದರ ಮುಖ್ಯಸ್ಥರಾಗಿರುವ ಶಶಿಕುಮಾರ್ (Shashi Kumar), ನ್ಯಾಯಾಲಯ ಸಹ ವಿಷಯದ ಬಗ್ಗೆ ಕಳವಳ ವ್ಯಕ್ತಪಡಿಸಿದೆ, ಶಾಲಾ ವೇಳೆಯನ್ನು ಬದಲಾಯಿಸುವುದರಿಂದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ಸಿಕ್ಕಬಹುದೇ ಅಂತ ಪೋಷಕರ, ಶಾಲೆಗಳ ಮುಖ್ಯಸ್ಥರ ಅಭಿಪ್ರಾಯ ಸಂಗ್ರಹಿಸುವುದು ಒಳ್ಳೆಯದು ಅಂತ ಹೇಳಿದೆ. ಆದರೆ, ಶಾಲಾ ವೇಳೆಯನ್ನು ಬದಲಾಯಿಸುವುದು ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ, ಬೆಳಗ್ಗೆ 7 ಗಂಟೆಗೆ ಇಲ್ಲವೇ 10:30ಕ್ಕೆ ಶಾಲೆಗಳನ್ನು ಅರಂಭಿಸಲಾಗದು. ಒಂದು ಪರಿಹಾರವಂತೂ ಬೇಕೇಬೇಕು ಅಂತ ಹೇಳಿದ ಶಶಿಕುಮಾರ್ ಸರ್ಕಾರದ ಕಡೆಯಿಂದ ಶಾಲಾ ಮುಖ್ಯಸ್ಥರನ್ನು, ಪೋಷಕರನ್ನು ಮತ್ತು ಸಂಬಂಧಪಟ್ಟ ಉಳಿದವರನ್ನು ಕರೆಸಿ ಅಭಿಪ್ರಾಯ ಸಂಗ್ರಹಿಸುವ ಯೋಚನೆ ಏನಾದರೂ ಇದೆಯಾ ಅಂತ ಉಪ ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದರು. ಅವರ ಸಲಹೆಯನ್ನು ಸ್ವಾಗತಿಸಿದ ಶಿವಕುಮಾರ್ ಶಿಕ್ಷಣ ಸಚಿವ ಮತ್ತು ತಾವು ವಿಷಯ ಚರ್ಚಿಸಿ ಸಂಬಂಧಪಟ್ಟವರನ್ನೆಲ್ಲ ಕರೆಸಿ ಮಾತಾಡುವುದಾಗಿ ಹೇಳಿದರು. ಶಾಲಾ ವೇಳೆ ಬದಲಾಯಿಸುವದು ಸಾಧ್ಯವಿಲ್ಲ, ಯಾವುದಾದರೂ ಪರ್ಯಾಯ ವ್ಯವಸ್ಥೆ ಯೋಚಿಸಬೇಕು ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್