TV9 Karnataka Summit 2023; ಗ್ಯಾರಂಟಿಗಳ ಜಾರಿಯಿಂದ ರಾಜ್ಯ ದಿವಾಳಿಯಾಗೋದು ಸಾಧ್ಯವೇ ಇಲ್ಲ: ಸಿದ್ದರಾಮಯ್ಯ

ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023: ರಾಜ್ಯದ ಎಲ್ಲ ಸಮುದಾಯಗಳ ನಡುವೆ ಶಾಂತಿ ಸೌಹಾರ್ದತೆ ನೆಲೆಸುವಂತೆ ಮಾಡುವುದರ ಜೊತೆಗೆ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಸಮಾಜಕ್ಕೆ ಉತ್ತಮ ಸೇವೆ ಒದಗಿಸುತ್ತಿರುವ ಮತ್ತು ಟಿವಿ9 ಶೃಂಗಸಭೆ ಆಯೋಜಿಸಿರುವ ಟಿವಿ9 ವಾಹಿನಿಯ ಇಡೀ ತಂಡಕ್ಕೆ ಅವರು ಧನ್ಯವಾದ ಸಲ್ಲಿಸಿದರು.

|

Updated on: Sep 15, 2023 | 1:56 PM

ಬೆಂಗಳೂರು: ನಗರದ ಲಲಿತ ಅಶೋಕ ಹೋಟೆಲ್ ನಲ್ಲಿ ಏರ್ಪಡಿಸಲಾಗಿರುವ ‘ಕನಸಿನ ಕರುನಾಡು ಟಿವಿ9 ಸಮ್ಮಿಟ್ 2023’ (TV9 Karnataka Summit 2023) ಉದ್ಘಾಟಿಸಿ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಸರ್ಕಾರ ಘೋಷಿಸಿರುವ 5 ಗ್ಯಾರಂಟಿಗಳ (5 guarantees) ಅನುಷ್ಠಾನದಿಂದ ರಾಜ್ಯ ದಿವಾಳಿಯಾಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಆತ್ಮವಿಶ್ವಾಸದಿಂದ ಹೇಳಿದರು. ಗ್ಯಾರಂಟಿಗಳನ್ನು ಜಾರಿಗೊಳಿಸಿದ ಬಳಿಕ ರಾಜ್ಯ ದಿವಾಳಿಯಾಗುತ್ತದೆ, ಅಭಿವೃದ್ಧಿ ಕೆಲಸಗಳು ನಿಂತುಹೋಗುತ್ತವೆ ಅಂತ ವಿರೋಧ ಪಕ್ಷಗಳ ಜನರ ಮನಸ್ಸಿನಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸಿದ್ದವು. ಆದರೆ, ಅಂಥದ್ದೇನೂ ಆಗದು, ತಮ್ಮ ಸರ್ಕಾರ ಎಲ್ಲ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತದೆ, ಯಾವುದೇ ಅಭಿವೃದ್ಧಿ ಯೋಜನೆಯನ್ನು ಕೈ ಬಿಡುವುದಿಲ್ಲ ಮತ್ತು ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುತ್ತದೆ ಎಂದು ಟಿವಿ9 ಶೃಂಗಸಭೆಯಲ್ಲಿ ಸ್ಪಷ್ಟಪಡಿಸುವುದಾಗಿ ಸಿದ್ದರಾಮಯ್ಯ ಹೇಳಿದರು. ರಾಜ್ಯದ ಎಲ್ಲ ಸಮುದಾಯಗಳ ನಡುವೆ ಶಾಂತಿ ಸೌಹಾರ್ದತೆ ನೆಲೆಸುವಂತೆ ಮಾಡುವುದರ ಜೊತೆಗೆ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದಕ್ಕೆ ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಸಮಾಜಕ್ಕೆ ಉತ್ತಮ ಸೇವೆ ಒದಗಿಸುತ್ತಿರುವ ಮತ್ತು ಟಿವಿ9 ಶೃಂಗಸಭೆ ಆಯೋಜಿಸಿರುವ ಟಿವಿ9 ವಾಹಿನಿಯ ಇಡೀ ತಂಡಕ್ಕೆ ಅವರು ಧನ್ಯವಾದ ಸಲ್ಲಿಸಿದರು. ರಾಜದ ನಾನಾ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ