AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪರಿಚಿತ ವಾಹನಕ್ಕೆ ಪಟ್ಟಣ ಪಂಚಾಯ್ತಿ ಸದಸ್ಯ ಬಲಿ

ವಿಜಯಪುರ ಜಿಲ್ಲೆ ಕೊಲ್ಹಾರದ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಟ್ಟಣ ಪಂಚಾಯ್ತಿ ಸದಸ್ಯನೊಬ್ಬ ಅಸುನೀಗಿದ್ದಾನೆ. ಬೈಕ್​ನಲ್ಲಿ ತೆರಳ್ತಿದ್ದ ವೇಳೆ ಸುರೇಶ ಕಾಳೆ ಎಂಬಾತನಿಗೆ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈರುಳ್ಳಿ ತುಂಬಿದ್ದ ಲಾರಿ ಪಲ್ಟಿ: ಬಾಗಲಕೋಟೆ ಜಿಲ್ಲೆ ಬಾದಾಮಿಯ ಕೋಣಮ್ಮನ ಗುಡಿ ಬಳಿ ಈರುಳ್ಳಿ ತುಂಬಿದ್ದ ಲಾರಿಯೊಂದು ಪಲ್ಟಿ ಹೊಡೆದಿದೆ. ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಲಾರಿ ಮಗುಚಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಲ್ಟಿ […]

ಅಪರಿಚಿತ ವಾಹನಕ್ಕೆ ಪಟ್ಟಣ ಪಂಚಾಯ್ತಿ ಸದಸ್ಯ ಬಲಿ
ಸಾಧು ಶ್ರೀನಾಥ್​
|

Updated on: Dec 02, 2019 | 2:45 PM

Share

ವಿಜಯಪುರ ಜಿಲ್ಲೆ ಕೊಲ್ಹಾರದ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಟ್ಟಣ ಪಂಚಾಯ್ತಿ ಸದಸ್ಯನೊಬ್ಬ ಅಸುನೀಗಿದ್ದಾನೆ. ಬೈಕ್​ನಲ್ಲಿ ತೆರಳ್ತಿದ್ದ ವೇಳೆ ಸುರೇಶ ಕಾಳೆ ಎಂಬಾತನಿಗೆ ವಾಹನ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಈರುಳ್ಳಿ ತುಂಬಿದ್ದ ಲಾರಿ ಪಲ್ಟಿ: ಬಾಗಲಕೋಟೆ ಜಿಲ್ಲೆ ಬಾದಾಮಿಯ ಕೋಣಮ್ಮನ ಗುಡಿ ಬಳಿ ಈರುಳ್ಳಿ ತುಂಬಿದ್ದ ಲಾರಿಯೊಂದು ಪಲ್ಟಿ ಹೊಡೆದಿದೆ. ರಸ್ತೆ ಡಿವೈಡರ್​ಗೆ ಡಿಕ್ಕಿ ಹೊಡೆದು ಲಾರಿ ಮಗುಚಿಕೊಂಡಿದ್ದು, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಲ್ಟಿ ಹೊಡೆದ ಲಾರಿ ಬಾದಾಮಿ ಮಾರ್ಗವಾಗಿ ಹಾಸನಕ್ಕೆ ಹೊರಟಿತ್ತು.

ದೇಗುಲದ ಹುಂಡಿಗೆ ಕನ್ನ: ತುಮಕೂರು ತಾಲೂಕಿನ ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೆನಹಳ್ಳಿ ಗ್ರಾಮಗಳಲ್ಲಿ ದುಷ್ಕರ್ಮಿಗಳು ದೇವಾಲಯದ ಹುಂಡಿ ಹಣಕ್ಕೆ ಕನ್ನ ಹಾಕಿದ್ದಾರೆ. ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿ ಸುಮಾರು 2 ಲಕ್ಷ ಹಣ ಕದ್ದೊಯ್ದಿದ್ದಾರೆ. ಅಲ್ಲದೆ, ಲಕ್ಷ್ಮೀ ಮಾರಮ್ಮ ದೇವಾಲಯದಲ್ಲಿ ಅಂದಾಜು 1ಲಕ್ಷ ರೂಪಾಯಿ ದೋಚಿದ್ದಾರೆ.

ನಕಲಿ ಲೈನ್​ಮನ್’​ಗಳು ಅರೆಸ್ಟ್: ನಕಲಿ ಅಂಕಪಟ್ಟಿ ನೀಡಿ ಸರ್ಕಾರಿ ಹುದ್ದೆ ಗಿಟ್ಟಿಸಿದ್ದ ನಾಲ್ವರನ್ನ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ನಕಲಿ ಅಂಕಪಟ್ಟಿ ನೀಡಿ ಕಪಿಟಿಸಿಎಲ್​ನಲ್ಲಿ ಲೈನ್‌ಮನ್​ಗಳಾಗಿ ಬಂಧಿತ ಆರೋಪಿಗಳು ಸೇರಿದ್ರು. ಸದ್ಯ ನಾಲ್ವರು ವಂಚಕರ ವಿರುದ್ಧ ದೂರು ದಾಖಲಾಗಿದೆ.

ಸಮಸ್ಯೆ ಪರಿಹಾರಕ್ಕೆ ಪ್ರತಿಭಟನೆ: ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಗಲ್​ನಲ್ಲಿ ವಿವಿಧ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಮೋರ್ಚಾ ಪ್ರತಿಭಟನೆ ನಡೆಸಿದೆ. ಕುಡಿಯೋ ನೀರು ಸೇರಿ ಮೂಲ ಸೌಲಭ್ಯಗಳ ಕೊರತೆಯಿದೆ. ಹೀಗಿದ್ರೂ ಯಾರೂ ಸಮಸ್ಯೆ ಆಲಿಸ್ತಿಲ್ಲ ಅಂತಾ ಗರಂ ಆದ್ರು. ಬಳಿಕ ತಾಲೂಕು ಪಂಚಾಯ್ತಿ ಸಿಇಒ ಸಮಸ್ಯೆ ಪರಿಹಾರದ ಭರವಸೆ ಕೊಟ್ರು.

ಅಪಾಯದ ರಸ್ತೆಗೆ ಬೇಕಿದೆ ದುರಸ್ತಿ: ಬೀದರ್ ತಾಲೂಕಿನ ಯಾಕತಪುರ-ತಡಪಳ್ಳಿ ಗ್ರಾಮಗಳನ್ನ ಸಂಪರ್ಕಿಸೋ ರಸ್ತೆ ಅಪಾಯಕ್ಕೆ ಆಹ್ವಾನ ನೀಡ್ತಿದೆ. ಸೇತುವೆ ಮಧ್ಯೆ ರಸ್ತೆ ಕುಸಿದಿದ್ದು, ಕೆಲ ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದಾರೆ. ವೇಗವಾಗಿ ಬರೋ ವಾಹನಗಳಿಗೂ ರಸ್ತೆ ಕಂಟಕವಾಗಿದ್ದು, ಸ್ಥಳೀಯರು ರಸ್ತೆ ದುರಸ್ತಿಗೆ ಆಗ್ರಹಿಸಿದ್ದಾರೆ.

ಕುಡುಕರ ಅಡ್ಡೆಯಾದ ‘ಹಸಿರ ಸಿರಿ’: ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯ ಪ್ರದೇಶದ ಅನೈತಿಕ ತಾಣವಾಗಿ ಮಾರ್ಪಾಡಾಗ್ತಿದೆ. ಹಸಿರ ಸಿರಿ ಹೊದ್ದು ಜೋಗಿಮಟ್ಟಿ ಪ್ರವಾಸಿಗರನ್ನ ಸೆಳೆಯುತ್ತಿದೆ. ಆದ್ರೆ ಪ್ರವೇಶ ದ್ವಾರದ ಬಳಿಯಿರೋ ಬಯಲು ಕುಡುಕರ ಅಡ್ಡೆಯಾಗಿದೆ. ಹೀಗಾಗಿ ಅಧಿಕಾರಿಗಳು ಕುಡುಕರಿಗೆ ಕಡಿವಾಣ ಹಾಕಬೇಕಿದೆ ಅಂತಾ ಪರಿಸರ ಪ್ರಿಯರು ಒತ್ತಾಯಿಸಿದ್ದಾರೆ.

ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಗೆ ಆಯ್ಕೆ: ದಾವಣಗೆರೆ ನಗರದ ಕ್ರೀಡಾ ಹಾಸ್ಟೆಲ್‌ನ ಕುಸ್ತಿಪಟುವೊಬ್ಬರು ಅಂತಾರಾಷ್ಟ್ರೀಯ ಕುಸ್ತಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಕುಸ್ತಿಪಟು ಅರ್ಜುನ್ ರಾಷ್ಟ್ರೀಯ ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಈ ಸಾಧನೆ ಮಾಡಿದ್ದಾರೆ. ಪಂಜಾಬ್‌ನ ಅಮೃತಸರದಲ್ಲಿ ನಡೆದ ಕುಸ್ತಿಸ್ಪರ್ಧೆಯಲ್ಲಿ ಹರಿಯಾಣದ ಅಜಯ್ ವಿರುದ್ಧ 8-0 ಅಂತರದಲ್ಲಿ ಜಯಿಸಿದ್ದಾರೆ.

ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಸಮ್ಮೇಳನ: ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿಂದು ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಸಮ್ಮೇಳನ ನಡೆಯಿತು. ಈ ವೇಳೆ ಸದ್ಯ ಸ್ಥಿತಿಯಲ್ಲಿ ಬ್ಯಾಂಕಿಂಗ್ ಕ್ಷೇತ್ರ ಎದುರಿಸುತ್ತಿರೋ ಸಮಸ್ಯೆ ಮತ್ತು ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲಾಯ್ತು. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಬ್ಯಾಂಕ್ ಸಿಬ್ಬಂದಿ ಸಮ್ಮೇಳನದಲ್ಲಿ ಭಾಗಿಯಾಗಿದ್ರು.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್