AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಬಯಲು ಮಾಡ್ತಿದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಕರಾಳ ಬಣ್ಣ..

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಕೌರ್ಯ ಮೆರೆಯುತ್ತಿದೆ. ಈ ನಡುವೆ ಖಾಸಗಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಎಂತವರನ್ನೂ ಬೆಚ್ಚಿ ಬೀಳಿಸುವಂತಿದೆ. ಟಿವಿ9 ರಹಸ್ಯ ಕಾರ್ಯಾಚರಣೆಯಲ್ಲಿ ಖಾಸಗಿ ಆಸ್ಪತ್ರೆಗಳ ಅಸಲಿಯತ್ತು, ವಸ್ತುಸ್ಥಿತಿ ಬೆತ್ತಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ನೆಗಡಿ, ಕೆಮ್ಮು, ಜ್ವರ ಇದ್ರೆ ರೋಗಿಯನ್ನ ಹತ್ತಿರಕ್ಕೇ ಸೇರಿಸಲ್ಲ. ಕೊವಿಡ್ ರೋಗಿ ಬಿಡಿ, ಕೊವಿಡ್ ಅಲ್ಲದ ರೋಗಿಗೂ ಇಲ್ಲಿ ಡೋಂಟ್ ಕೇರ್. ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಸುಮಾರು 10 ಆಸ್ಪತ್ರೆಗಳನ್ನು ಅಲೆದಾಟಿ ಟಿವಿ9 ರಿಯಾಲಿಟಿ ಚೆಕ್​ ನಡೆಸಿ ಆಸ್ಪತ್ರೆಗಳ ಬಂಡವಾಳ […]

ಟಿವಿ9 ಬಯಲು ಮಾಡ್ತಿದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಕರಾಳ ಬಣ್ಣ..
ಆಯೇಷಾ ಬಾನು
| Edited By: |

Updated on:Jul 10, 2020 | 3:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಕೌರ್ಯ ಮೆರೆಯುತ್ತಿದೆ. ಈ ನಡುವೆ ಖಾಸಗಿ ಆಸ್ಪತ್ರೆಗಳ ಅಮಾನವೀಯ ವರ್ತನೆ ಎಂತವರನ್ನೂ ಬೆಚ್ಚಿ ಬೀಳಿಸುವಂತಿದೆ. ಟಿವಿ9 ರಹಸ್ಯ ಕಾರ್ಯಾಚರಣೆಯಲ್ಲಿ ಖಾಸಗಿ ಆಸ್ಪತ್ರೆಗಳ ಅಸಲಿಯತ್ತು, ವಸ್ತುಸ್ಥಿತಿ ಬೆತ್ತಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ನೆಗಡಿ, ಕೆಮ್ಮು, ಜ್ವರ ಇದ್ರೆ ರೋಗಿಯನ್ನ ಹತ್ತಿರಕ್ಕೇ ಸೇರಿಸಲ್ಲ. ಕೊವಿಡ್ ರೋಗಿ ಬಿಡಿ, ಕೊವಿಡ್ ಅಲ್ಲದ ರೋಗಿಗೂ ಇಲ್ಲಿ ಡೋಂಟ್ ಕೇರ್.

ಬೆಳಗ್ಗೆ 10 ಗಂಟೆಯಿಂದ ಸಂಜೆ 5ರವರೆಗೆ ಸುಮಾರು 10 ಆಸ್ಪತ್ರೆಗಳನ್ನು ಅಲೆದಾಟಿ ಟಿವಿ9 ರಿಯಾಲಿಟಿ ಚೆಕ್​ ನಡೆಸಿ ಆಸ್ಪತ್ರೆಗಳ ಬಂಡವಾಳ ಬಯಲು ಮಾಡಿದೆ. ಇಲ್ಲಿ ಬಿಬಿಎಂಪಿ ಲೆಟರ್ ಕೊಟ್ರೆ ಮಾತ್ರ ಆಸ್ಪತ್ರೆಗೆ ದಾಖಲಾಗಬಹುದು. ಒಂದು ಕೊವಿಡ್ ಟೆಸ್ಟ್ ಗೆ 5 ಸಾವಿರ ಖರ್ಚಂತೆ. ಸರ್ಕಾರಿ ಆಸ್ಪತ್ರೆಯಲ್ಲಿ ಫ್ರೀ.. ಖಾಸಗಿಯಲ್ಲಿ ಸುಲಿಗೆ ಮಾಡಲಾಗುತ್ತಿದೆ. ಚಿಕಿತ್ಸೆ ಬಯಸಿ ಖಾಸಗಿ ಆಸ್ಪತ್ರೆಗೆ ಹೋದ್ರೆ ಸಾವೇ ಗತಿ.

ಸಿಎಂ ಮಾತು ನಿಜವಾಗುತ್ತಾ? ಖಾಸಗಿ ಆಸ್ಪತ್ರೆಗಳು ಸುಲಿಗೆಗೆ ಇಳಿದ್ರೆ ಸಹಿಸೋದಿಲ್ಲ ಎಂಬ ಸಿಎಂ ಮಾತು ನಿಜವಾಗುತ್ತಾ?ಸಿಎಂ ಹೇಳಿಕೆ ನಂತರವಾದ್ರೂ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಪರಿಸ್ಥಿತಿ ಬದಲಾಗುತ್ತಾ? ಅಡ್ಮಿಟ್ ಮಾಡಿಕೊಳ್ಳದಿದ್ರೆ, ಚಿಕಿತ್ಸೆ ನೀಡದಿದ್ರೆ ದೂರು ಕೊಡಿ ಅಂತ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ರು. ಆದರೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ಆದೇಶ ಮೀರಿ ನಿಂತಿವೆ. ಹಾಗಿದ್ರೆ ಸರ್ಕಾರದ ಆದೇಶ ಪಾಲಿಸದ ಆಸ್ಪತ್ರೆಗಳ ವಿರುದ್ಧ ನಿಜಕ್ಕೂ ಕ್ರಮ ಜರುಗುತ್ತಾ? ಎಂಬ ಪ್ರಶ್ನೆ ಎದ್ದಿದೆ.

ಕೊವಿಡ್ ಭೀತಿಯ ನಡುವೆ ಅನ್ಯ ರೋಗಿಗಳ ಪರಿಸ್ಥಿತಿ ಹೇಗಿದೆ ಗೊತ್ತಾ? ಸರ್ಕಾರ ನೋಟಿಸ್ ಕೊಟ್ಟ ನಂತರವೂ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳದ್ದು ಅದೇ ದರ್ಪವಾಗಿದೆ. ಬಾಗಿಲಿಗೆ ಹೋದ ರೋಗಿಗಳನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಒಳಗೆ ಸೇರಿಸಲ್ಲ. ರೋಗಿಗಳು ನರಕಯಾತನೆ ಅನುಭವಿಸ್ತಿದ್ರೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡ್ತಿಲ್ಲ. ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಅಸಲಿಯತ್ತು ಟಿವಿ9 ರಹಸ್ಯ ಕಾರ್ಯಾಚರಣೆಯಲ್ಲಿ ಬಯಲಾಗಿದೆ. ಸಣ್ಣ ನೆಗಡಿ, ಜ್ವರ, ಕೆಮ್ಮು ಬಂದಿದ್ರೂ ಟ್ರೀಟ್ ಮೆಂಟ್ ಸಿಗೋದು ಕನಸಿನ ಮಾತೇ ಆಗಿದೆ.

[lazy-load-videos-and-sticky-control id=”rFNwcZ_MuwA”]

Published On - 9:29 am, Fri, 10 July 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ