AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ವರದಿ ಫಲಶೃತಿ: ಗೌರಿ ಗಣೇಶ ಹಬ್ಬಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ

ಬೆಂಗಳೂರು ಗ್ರಾಮಾಂತರದಲ್ಲಿ ಕೋಲಾರ ಸೇರಿದಂತೆ ಹಲವು ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಮೂರು ನಾಲ್ಕು ತಿಂಗಳಿಂದ ಗೌರವಧನ ಬಂದಿಲ್ಲ. ಹೀಗಾಗಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪರದಾಡಿದ್ದರು. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಇಲಾಖೆ ಅಂಗನವಾಡಿ ಕಾರ್ಯ ಕರ್ತೆಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದೆ.

ಟಿವಿ9 ವರದಿ ಫಲಶೃತಿ: ಗೌರಿ ಗಣೇಶ ಹಬ್ಬಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ
ಟಿವಿ9 ವರದಿ ಫಲಶೃತಿ: ಗೌರಿ ಗಣೇಶ ಹಬ್ಬಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ
ನವೀನ್ ಕುಮಾರ್ ಟಿ
| Edited By: |

Updated on: Sep 05, 2024 | 1:26 PM

Share

ದೇವನಹಳ್ಳಿ, ಸೆಪ್ಟೆಂಬರ್​​ 05: ಕಳೆದ ಮೂರು ನಾಲ್ಕು ತಿಂಗಳಿಂದ ಗೌರವಧನ ಬಾರದೆ ಅಂಗನವಾಡಿ (Anganwadi) ಕಾರ್ಯಕರ್ತೆಯರು ಪರದಾಡುತ್ತಿದ್ದ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ್ದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ನಮಗೆ ಸಂಬಳ ಬಂದರೆ ಇನ್ನೂ ಅನುಕೂಲವಾಗುತ್ತೆ ಅಂತ ಅಂಗನವಾಡಿ ಕಾರ್ಯಕರ್ತೆಯರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕೋಲಾರ ಸೇರಿದಂತೆ ಹಲವು ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನದ ಜೊತೆಗೆ ಮೊಟ್ಟೆ ಬಿಲ್ ಪಾವತಿಯಾಗದ ಕಾರಣ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪರದಾಟ ಅನುಭವಿಸುತ್ತಿದ್ದರು. ಹೀಗಾಗೆ ಅಂಗನವಾಡಿ ಕಾರ್ಯಕರ್ತೆಯರ ಪರದಾಟದ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡುತ್ತಿದ್ದಂತೆ ಎಚ್ಚೆತ್ತ ಮಹಿಳಾ ಮತ್ತು ಮಕ್ಕಳ ಇಲಾಖೆ ಇದೀಗ ಅಂಗನವಾಡಿ ಕಾರ್ಯ ಕರ್ತೆಯರಿಗೆ ಒಂದು ತಿಂಗಳ ಗೌರವಧನ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಯಾದಗಿರಿಯಲ್ಲಿ ಅಂಗನವಾಡಿಯ ಕರ್ಮಕಾಂಡ ಬಯಲು: ಕಾರ್ಯಕರ್ತೆಯಿಂದ ಕಾಳಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ

ಜೊತೆಗೆ ಉಳಿದು ಎರಡು ಮೂರು ತಿಂಗಳ ಸಂಬಳವು ಶೀಘ್ರದಲ್ಲೇ ಬಿಡುಗಡೆ ಮಾಡುವ ಭರವಸೆ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನೂ ಗೌರಿ ಗಣೇಶ ಹಬ್ಬಕ್ಕೆ ಸಂಬಳವಿಲ್ಲದೆ ಪರದಾಡುತ್ತಿದ್ದ ನಮಗೆ ಟಿವಿನೈನ್ ವರದಿಯಿಂದ ಒಂದು ತಿಂಗಳ ಸಂಬಳ ಬಿಡುಗಡೆಯಾಗಿದ್ದಕ್ಕೆ ಟಿವಿ9 ಗೆ ಧನ್ಯವಾದ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ವಿಳಂಬ

ವಿಜಯಪುರ: ಜಿಲ್ಲೆಯಲ್ಲಿ ಕೂಡ ಅಂಗವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕರಿಗೆ ಕಳೆದ ಎರಡು ತಿಂಗಳುಗಳಿಂದ ಸಂಬಳ ಇಲ್ಲದೇ ಪರದಾಡುವಂತಾಗಿದೆ. ಅಂಗನವಾಡಿಯಲ್ಲಿ ಕೆಲಸ ಮಾಡುತ್ತಿದ್ದು ಇದೇ ಸಂಬಳ ನೆಚ್ಚಿಕೊಂಡು ಸಂಸಾರ ನಡೆಸುತ್ತಿರುವ ಇವರಿಗೆ ಸರ್ಕಾರದಿಂದ ಎರಡು ತಿಂಗಳುಗಳಿಂದ ಸಂಬಳ ಬಂದಿಲ್ಲ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಕೈ ಸೇರದ 3 ತಿಂಗಳ ಗೌರವ ಧನ, 1 ವರ್ಷದಿಂದ ಸರ್ಕಾರ ಅನುದಾನ ನೀಡಿಲ್ಲ ಎಂದ ಅಧಿಕಾರಿಗಳು

ಹಾಗೂ ಹೀಗೂ ಮಾಡಿಕೊಂಡು ಬದುಕಿನ ಬಂಡಿಯನ್ನು ಎಳೆಯುತ್ತಿದ್ದಾರೆ. ಇದರ ನಡುವೆ ವಿಜಯಪುರ ಜಿಲ್ಲೆಯಲ್ಲಿನ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಹೊಸ ಸಂಕಷ್ಟ ಎದುರಾಗಿದೆ. ಜಿಲ್ಲೆಯಲ್ಲಿರುವ ಬಾಡಿಗೆ ಕಟ್ಟಡದಲ್ಲಿ ನಡೆಸುವ ಅಂಗನವಾಡಿ ಕೇಂದ್ರಗಳನ್ನು ಖಾಲಿ ಮಾಡುವಂತೆ ಕಟ್ಟಡಗಳ ಮಾಲೀಕರು ಒತ್ತಡ ಹಾಕುತ್ತಿದ್ದರು. ಪ್ರತಿ ತಿಂಗಳು ಅಂಗನವಾಡಿ ಕೇಂದ್ರಗಳ ಬಾಡಿಗೆ ಭರಿಸಿ ಇಲ್ಲವೇ ಕಟ್ಟಡ ಖಾಲಿ ಮಾಡಿ ಎಂದು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ