AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್ ಮೋದಿ ಜೊತೆಗೆ ನರೇಂದ್ರ ಮೋದಿ ಇರುವ ಚಿತ್ರ ಟ್ವೀಟ್ ಮಾಡಿ ಇದಕ್ಕೇನರ್ಥ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ

2018ರಲ್ಲಿ ದಾವೋಸ್​ನಲ್ಲಿ‌ ನಡೆದ ವಿಶ್ವ ಆರ್ಥಿಕ‌ ಶೃಂಗ ಸಭೆಯಲ್ಲಿ‌ ಪ್ರಧಾನಿ ನರೇಂದ್ರ ಮೋದಿ ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಪೋಟೊವನ್ನು ಹೇಗೆ ವ್ಯಾಖ್ಯಾನಿಸುವುದು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನೀರವ್ ಮೋದಿ ಜೊತೆಗೆ ನರೇಂದ್ರ ಮೋದಿ ಇರುವ ಚಿತ್ರ ಟ್ವೀಟ್ ಮಾಡಿ ಇದಕ್ಕೇನರ್ಥ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ
ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Nov 18, 2021 | 7:36 PM

Share

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಬಿಟ್​ಕಾಯಿನ್ ಹಗರಣ ದಿನದಿಂದ ದಿನಕ್ಕೆ ಹೊಸ ಆಯಾಮಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ವಿಚಾರವಾಗಿ ಗುರುವಾರ ಬಿಜೆಪಿ ಮತ್ತು ಕಾಂಗ್ರೆಸ್​ ನಡುವೆ ಟ್ವೀಟ್​ವಾರ್ ನಡೆದಿದೆ. ಬಿಜೆಪಿ ಪ್ರಸ್ತಾಪಿಸಿದ ವಿಷಯಗಳಿಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ನೀರವ್ ಮೋದಿ ಜೊತೆಗೆ ನರೇಂದ್ರ ಮೋದಿ ಇರುವ ಗ್ರೂಪ್ ಫೋಟೊ ಒಂದನ್ನು ಟ್ವೀಟ್ ಮಾಡಿ ಇದಕ್ಕೇನು ಅರ್ಥ ಎಂದು ಪ್ರಶ್ನಿಸಿದ್ದಾರೆ. ಬಿಟ್‌ಕಾಯಿನ್ ಹಗರಣದ ಮುಖ್ಯ ಆರೋಪಿ ಶ್ರೀಕೃಷ್ಣನ ಗೆಳೆಯ ಹೇಮಂತ್ ಮುದ್ದಪ್ಪ ನನ್ನ ಮಗನೊಂದಿಗೆ ಇದ್ದಾನೆ ಎಂದು ಬಿಜೆಪಿ ಆರೋಪಿಸಿದೆ. ಹಾಗಿದ್ದರೆ 2018ರಲ್ಲಿ ದಾವೋಸ್​ನಲ್ಲಿ‌ ನಡೆದ ವಿಶ್ವ ಆರ್ಥಿಕ‌ ಶೃಂಗ ಸಭೆಯಲ್ಲಿ‌ ಪ್ರಧಾನಿ ನರೇಂದ್ರ ಮೋದಿ ಜೊತೆಗಿರುವ ಬ್ಯಾಂಕ್ ಲೂಟಿಕೋರ ನೀರವ್ ಮೋದಿಯ ಪೋಟೊವನ್ನು ಹೇಗೆ ವ್ಯಾಖ್ಯಾನಿಸುವುದು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಮ್ಮ ಭ್ರಷ್ಟಾಚಾರ ಮುಚ್ಚಿಹಾಕಲು‌ ಅಗಲಿ ಹೋಗಿರುವ ನನ್ನ ಮಗನ ಹೆಸರನ್ನು ಬಿಜೆಪಿ ಎಳೆದು ತಂದಿದೆ. ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ಬಿಟ್​ಕಾಯಿನ್ ಹಗರಣದ ಬಗ್ಗೆ ಸುಪ್ರೀಮ್ ಕೋರ್ಟ್ ನ್ಯಾಯಾಧೀಶರಿಂದ‌ ನ್ಯಾಯಾಂಗ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆ. ನನ್ನ ಮಗ ರಾಕೇಶ್ ನಮ್ಮನ್ನಗಲಿ ಐದು ವರ್ಷಗಳಾಗಿವೆ. ಪುತ್ರಶೋಕ ನಿರಂತರವಾದುದು. ನಮ್ಮ ಜೊತೆಗೆ ಅವನಿಲ್ಲ. ತನ್ನ ಮೇಲಿನ ಆರೋಪಕ್ಕೆ ಆತ ಪ್ರತಿಕ್ರಿಯಿಸಲೂ ಸಾಧ್ಯವಿಲ್ಲ. ಇಂಥ ಸಮಯದಲ್ಲಿ ನನ್ನ ದಿವಂಗತ ಮಗನ ಹೆಸರನ್ನು ಎಳೆದು ರಾಜಕೀಯ ಮಾಡಲು ಹೊರಟಿರುವುದು ಅತ್ಯಂತ ವೈಯಕ್ತಿಕ‌ ಮತ್ತು ಕ್ಷುಲಕತನದ ರಾಜಕಾರಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಶ್ರೀಕೃಷ್ಣನ ಜೊತೆ ಬಂಧನಕ್ಕೊಳಗಾದ ಹೇಮಂತ್ ಮುದ್ದಪ್ಪನ ಬಿಡುಗಡೆಗಾಗಿ ಪೊಲೀಸರ ಜೊತೆ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಸಂಧಾನ ಮಾಡಿದ್ದಾರೆ. ಆ ಸೇವೆಗಾಗಿ ಆರೋಪಿಯಿಂದ ಆ ಬಿಜೆಪಿ ನಾಯಕ ಬಿಟ್​ಕಾಯಿನ್ ಪಡೆದಿದ್ದ ಎಂಬ ಆರೋಪವೂ ಇದೆ. ಆ ನಾಯಕ ಯಾರೆಂದು‌ ನಳಿನ್​ಕುಮಾರ್ ಕಟೀಲ್ ಅವರಿಗೆ ಗೊತ್ತಿರಬಹುದೇನೋ? ನನ್ನ ಬಳಿ ಪುರಾವೆಗಳಿಲ್ಲದ ಕಾರಣ ನಾನು ಇಲ್ಲಿಯವರೆಗೆ ಯಾರ ವಿರುದ್ಧವೂ ನೇರ ಆರೋಪ ಮಾಡಿಲ್ಲ. ರಾಜ್ಯ ಸರ್ಕಾರ ಸಲ್ಲಿಸಿರುವ ಆರೋಪ‌ ಪಟ್ಟಿಯಲ್ಲಿರುವ ವಿಷಯವನ್ನಷ್ಟೇ ಹೇಳುತ್ತಿದ್ದೇನೆ. ಈವರೆಗಿನ ಪೊಲೀಸರ ತನಿಖೆಯು ಯಾರೋ ಪ್ರಭಾವಿಗಳನ್ನು ರಕ್ಷಿಸಲು ನಡೆಸಿರುವ ನಾಟಕದಂತಿದೆ ಎಂದು ವ್ಯಂಗ್ಯವಾಡಿದ್ದಾರೆ.

ನಮ್ಮ ಬುಟ್ಟಿಯಲ್ಲಿ ಹಾವು ಇಲ್ಲ ಎಂದಾದರೆ ಬಿಜೆಪಿ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ? ಯಾಕೆ ಸರತಿ‌ ಸಾಲಲ್ಲಿ ನಿಂತು ಹೆಗಲು‌ ಮುಟ್ಟಿ ನೋಡಿಕೊಂಡು ‘ಸರ್ಕಾರ ತಪ್ಪು‌ ಮಾಡಿಲ್ಲ, ನಾವೆಲ್ಲ ನಿರಪರಾಧಿಗಳು’ ಎಂದು ಎದೆ ಬಡಿದುಕೊಳ್ಳುತ್ತಿದ್ದಾರೆ? ಬಿಟ್​ಕಾಯಿನ್ ಹಗರಣದಲ್ಲಿ‌ ಬಿಜೆಪಿ ನಾಯಕರ ಮಕ್ಕಳ ಹೆಸರೂ ಕೇಳಿ ಬರುತ್ತಿವೆ. ಪುರಾವೆಗಳಿಲ್ಲದೆ‌ ಕುಟುಂಬದ ಸದಸ್ಯರ ಹೆಸರು ಎಳೆದು ತರಬಾರದೆಂದು ಸುಮ್ಮನಿದ್ದೇನೆ. ಬಿಜೆಪಿ ನಾಯಕರು ಜೇನು ಗೂಡಿಗೆ ಕಲ್ಲೆಸೆಯುತ್ತಿದ್ದಾರೆ. ಕೆರಳಿದ ಜೇನು ನೊಣಗಳು ಯಾರಿಗೆಲ್ಲಾ ಕಚ್ಚಲಿದೆಯೋ ಗೊತ್ತಿಲ್ಲ ಎಂದು ನಿಗೂಢವಾಗಿ ಸಂದೇಶ ರವಾನಿಸಿದ್ದಾರೆ.

ಇದನ್ನೂ ಓದಿ: ಬಿಟ್​ಕಾಯಿನ್ ಬಗ್ಗೆ ಕಾಂಗ್ರೆಸ್ ನಾಯಕರು ಮಾಹಿತಿ ಕೊಟ್ಟರೆ ಅದನ್ನೇ ಆಧರಿಸಿ ತನಿಖೆ: ಯಡಿಯೂರಪ್ಪ ಭರವಸೆ ಇದನ್ನೂ ಓದಿ: ಬಿಟ್​ಕಾಯಿನ್ ತನಿಖೆ ಸರಿಯಾಗಿ ನಡೆದರೆ ರಾಜ್ಯಕ್ಕೆ 3ನೇ ಸಿಎಂ ಹೇಳಿಕೆಗೆ ಬದ್ಧ: ಪ್ರಿಯಾಂಕ್ ಖರ್ಗೆ ಸವಾಲು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!