AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ ಚೆಲುವಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಪ್ರತಿನಿತ್ಯ ಹತ್ತಾರು ಮಂದಿಯ ಸಾವನ್ನಪ್ಪುತ್ತಿರುವುದು ಜನರಲ್ಲಿ ಆತಂಕ ತಂದಿದೆ.

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ  ಬಲಿ; ಜನರಲ್ಲಿ ಹೆಚ್ಚಾದ ಆತಂಕ
ಸಾಂದರ್ಭಿಕ ಚಿತ್ರ
sandhya thejappa
sandhya thejappa|

Updated on: May 10, 2021 | 10:08 AM

Share

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಮತ್ತೆ 12 ಜನರನ್ನು ಕೊರೊನಾ ಸೋಂಕು ಬಲಿ ತೆಗೆದುಕೊಂಡಿದೆ. ಕಳೆದ 12 ಗಂಟೆಯಲ್ಲಿ 12 ಜನ ಮೃತಪಟ್ಟಿದ್ದಾರೆ. ಇದರಲ್ಲಿ ಒಬ್ಬರು ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಮೂರು ದಿನಗಳ ಹಿಂದೆ ಜಿಲ್ಲಾ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ ಚೆಲುವಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಪ್ರತಿನಿತ್ಯ ಹತ್ತಾರು ಮಂದಿಯ ಸಾವನ್ನಪ್ಪುತ್ತಿರುವುದು ಜನರಲ್ಲಿ ಆತಂಕ ತಂದಿದೆ. ಕೊವಿಡ್ ಆಸ್ಪತ್ರೆ ಒಳಗೆ ಹೋದವರು ಹೆಣವಾಗಿ ಹೊರಗೆ ಬರುತ್ತಿದ್ದಾರೆ ಎಂದು ಪೋಷಕರು ಹೇಳುತ್ತಿದ್ದಾರೆ.

50ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಚಾಮರಾಜನಗರದಲ್ಲಿ 50ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಕೊರೊನಾ ಭಯದಿಂದ ಪೊಲೀಸರು ತಪಾಸಣೆಗೆ ಮುಂದಾಗಿಲ್ಲ. ಚಾಮರಾಜನಗರ ವಿಭಾಗದಲ್ಲಿ ಇನ್ನೂ ಕಠಿಣ ನಿಯಮಗಳು ಜಾರಿಯಾಗಿಲ್ಲ. ಈ ಕಾರಣ ಎಂದಿನಂತೆ ವಾಹನಗಳು ಸಂಚಾರ ಆರಂಭಿಸಿವೆ. ಅನಾವಶ್ಯಕವಾಗಿ ಜನರು ಓಡಾಡುತ್ತಿದ್ದಾರೆ. ಆದರೆ ಕೊಳ್ಳೇಗಾಲ ವಿಭಾಗದಲ್ಲಿ ಕಟ್ಟು ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿಯಾಗಿದೆ. ಈ ಕಾರಣ ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

ಅನಾಥವಾದ ಮಗು ಮೊನ್ನೆಯಷ್ಟೇ ತಂದೆ ಕಳೆದು ಕೊಂಡಿದ್ದ ಮಗು ಇಂದು ತನ್ನ ತಾಯಿಯನ್ನು ಕಳೆದುಕೊಂಡು ಅನಾಥವಾಗಿದೆ. ಜಿಲ್ಲಾ ಕೊವಿಡ್ ಅಸ್ಪತ್ರೆಯಲ್ಲಿ ಮೊನ್ನೆ ತಂದೆ ಸಾವನ್ನಪ್ಪಿದ್ದರು. ಇಂದು ಬೆಳಗ್ಗೆ ತಾಯಿ ಮೃತಪಟ್ಟಿದ್ದಾರೆ. ಮಗುವಿನ ಅಜ್ಜ ಅಜ್ಜಿಗೂ ಕೊರೊನಾ ಸೋಂಕು ಇರುವುದು ದೃಢವಾಗಿದ್ದು, ಏನೂ ಗೊತ್ತಾಗದೆ ಮಗು ಆತಂಕಕ್ಕೆ ಒಳಗಾಗಿದೆ.

ಇದನ್ನೂ ಓದಿ

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

Karnataka Lockdown: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿರ್ಗಮಿಸುವ 53 ವಿಮಾನಗಳ ಹಾರಾಟ ರದ್ದು

(Twelve coronavirus Infected deaths have been reported in Chamarajanagar)

Follow Us
sandhya thejappa
sandhya thejappa
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ