AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಡಿ ಅಗ್ರಹಾರದಲ್ಲಿ ಒಂದೇ ದಿನ 27 ದೇಹಗಳ ದಹನ, ಕೊಂಚವೂ ಬಿಡುವಿಲ್ಲದೆ ನಡೆಯುತ್ತಿದೆ ದಹನ ಕಾರ್ಯ

ಮೇಡಿ ಅಗ್ರಹಾರ ಚಿತಾಗಾರದಲ್ಲಿ ತಡರಾತ್ರಿವರೆಗೆ ಅಂತ್ಯಸಂಸ್ಕಾರ ನಡೆದಿದೆ. ನಿನ್ನೆ ಒಂದೇ ದಿನ 27 ಮೃತದೇಹಗಳನ್ನು ದಹನ ಮಾಡಲಾಗಿದೆ. ಈ ಪೈಕಿ 25 ಕೊವಿಡ್ ಹಾಗೂ 2 ನಾನ್ ಕೊವಿಡ್ ಮೃತದೇಹಗಳು.

ಮೇಡಿ ಅಗ್ರಹಾರದಲ್ಲಿ ಒಂದೇ ದಿನ 27 ದೇಹಗಳ ದಹನ, ಕೊಂಚವೂ ಬಿಡುವಿಲ್ಲದೆ ನಡೆಯುತ್ತಿದೆ ದಹನ ಕಾರ್ಯ
ಚಿತಾಗಾರ (ಪ್ರಾತಿನಿಧಿಕ ಚಿತ್ರ)
ಆಯೇಷಾ ಬಾನು
ಆಯೇಷಾ ಬಾನು|

Updated on: Apr 25, 2021 | 1:37 PM

Share

ಬೆಂಗಳೂರು: ಕೊರೊನಾ 2ನೆ ಅಲೆ ಹೆಚ್ಚು ವೇಗವಾಗಿದ್ದು ಹೆಚ್ಚು ಜನರನ್ನು ಬಲಿ ಪಡೆಯುತ್ತಿದೆ. ಹೆಣ ಸುಡಲೂ ಹೆಣಗಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮವರ ಮೃತ ದೇಹಕ್ಕೆ ಅಂತ್ಯಸಂಸ್ಕಾರವೂ ಮಾಡಲಾಗದೆ. ಕೊನೆ ಕ್ಷಣದಲ್ಲಿ ಅವರನ್ನು ನೋಡಲಾಗದೆ ಕಳಿಸಿಕೊಡುವಂತ ಸ್ಥಿತಿ ಉದ್ಭವವಾಗಿದೆ.

ರಾಜ್ಯದಲ್ಲಿ ನಿನ್ನೆ 29,438 ಜನರಿಗೆ ಕೊರೊನಾ ದೃಢ ಪಟ್ಟಿದೆ. ಸೋಂಕಿನಿಂದ ನಿನ್ನೆ 208 ಜನ ಮೃತಪಟ್ಟಿದ್ದಾರೆ. ಹಾಗೇ, ಬೆಂಗಳೂರಲ್ಲಿ 17,342 ಜನರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಸಿಟಿಯಲ್ಲೇ 149 ಜನರು ಉಸಿರು ಚೆಲ್ಲಿದ್ದಾರೆ. ಈ ಮೂಲಕ, ಕೊರೊನಾಗೆ ಬೆಂಗಳೂರಲ್ಲಿ 5,723 ಮಂದಿ ಬಲಿಯಾಗಿದ್ದಾರೆ.

ಮಧ್ಯರಾತ್ರಿವರೆಗೆ ಕೊವಿಡ್ ಮೃತದೇಹಗಳ ದಹನ ಮೇಡಿ ಅಗ್ರಹಾರ ಚಿತಾಗಾರದಲ್ಲಿ ತಡರಾತ್ರಿವರೆಗೆ ಅಂತ್ಯಸಂಸ್ಕಾರ ನಡೆದಿದೆ. ನಿನ್ನೆ ಒಂದೇ ದಿನ 27 ಮೃತದೇಹಗಳನ್ನು ದಹನ ಮಾಡಲಾಗಿದೆ. ಈ ಪೈಕಿ 25 ಕೊವಿಡ್ ಹಾಗೂ 2 ನಾನ್ ಕೊವಿಡ್ ಮೃತದೇಹಗಳು. ಮತ್ತೆ ಇಂದು ಬೆಳಗ್ಗೆ 7 ಗಂಟೆಯಿಂದ ದಹನ ಕಾರ್ಯ ಆರಂಭವಾಗಿದೆ. ಆದ್ರೆ ಮೇಡಿ ಅಗ್ರಹಾರದಲ್ಲಿ ಒಂದು ಬರ್ನಿಂಗ್ ಮಿಷನ್ ಕೈ ಕೊಟ್ಟಿದೆ. ಮೇಡಿ ಚಿತಾಗಾರದಲ್ಲಿ ಎರಡು ಬರ್ನಿಂಗ್ ಮಿಷನ್ಗಳ ಪೈಕಿ ಒಂದು ರಿಪೇರಿ. ಹೀಗಾಗಿ ಬೆಳಗ್ಗೆಯಿಂದ ಒಂದೇ ಮಿಷನ್ ನಿಂದ ಬರ್ನಿಂಗ್ ಕಾರ್ಯ ನಡೆಯುತ್ತಿದೆ. ಅಂತ್ಯಸಂಸ್ಕಾರಕ್ಕಾಗಿ ಬೆಳಗ್ಗೆಯಿಂದ ಆ್ಯಂಬುಲೆನ್ಸ್ಗಳು ಮೃತದೇಹದೊಂದಿಗೆ ಕ್ಯೂ ನಿಂತಿವೆ.

ಕಳೆದ ಅನೇಕ ದಿನಗಳಿಂದ ರಾಜಧಾನಿ ಬೆಂಗಳೂರಿನಲ್ಲಿ ಇದೇ ರೀತಿಯ ಪರಿಸ್ಥಿತಿ ಕಂಡು ಬಂದಿದೆ. ಚಿತಾಗಾರ ಸಿಬ್ಬಂದಿ ಕೊಂಚವೂ ಬಿಡುವಿಲ್ಲದೆ ಮೃತದೇಹಗಳನ್ನು ಸುಡುತ್ತಲೇ ಇದ್ದಾರೆ. ಆದರೂ ಕ್ಯೂ ಮಾತ್ರ ಕಡಿಮೆಯಾಗಲ್ಲ. ಮಧ್ಯರಾತ್ರಿಯ ವರೆಗೂ ದಹನ ಕ್ರಿಯೆ ನಡೆಯುತ್ತಲೇ ಇದೆ.

ಇದನ್ನೂ ಓದಿ: ಮೇಡಿ ಅಗ್ರಹಾರ ಚಿತಾಗಾರ ಕ್ಲೋಸ್.. ಅಂತ್ಯಸಂಸ್ಕಾರಕ್ಕೆ ಗೇಟ್​ ಮುಂದೆ ಕಾದು ಕುಳಿತ ಕುಟುಂಬಸ್ಥರು

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ