AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನೇಜರ್​ಗೆ ಮದುವೆಯಾಗುವಂತೆ ಪೀಡಿಸಿ ಹಣ ಲಪಟಾಯಿಸಲು ಯತ್ನಿಸಿದ ಯುವತಿ, ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಸೇರಿ ಮಹಿಳೆ ಅರೆಸ್ಟ್

ನಿಶಾ ಎಂಬ 23 ವರ್ಷದ ಯುವತಿ 46 ವರ್ಷದ ವಿಮೆ ಕಂಪನಿ ಮ್ಯಾನೇಜರ್ ಕಿರಣ್ ಕುಮಾರ್ ಎಂಬುವವರಿಗೆ ಮದುವೆಯಾಗುವಂತೆ ಧಮ್ಕಿ ಹಾಕಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ನಿಶಾ ಕೇವಲ ಧಮ್ಕಿ ಮಾತ್ರವಷ್ಟೇ ಅಲ್ಲದೆ ಕಿರಣ್ ಮೇಲೆ ಹಲ್ಲೆ ನಡೆಸಿ ಹಣಕ್ಕೆ ಬೆದರಿಕೆ ಹಾಕಿದ್ದಾಳಂತೆ.

ಮ್ಯಾನೇಜರ್​ಗೆ ಮದುವೆಯಾಗುವಂತೆ ಪೀಡಿಸಿ ಹಣ ಲಪಟಾಯಿಸಲು ಯತ್ನಿಸಿದ ಯುವತಿ, ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಸೇರಿ ಮಹಿಳೆ ಅರೆಸ್ಟ್
ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಹಾಗೂ ಮಾಲಾಳನ್ನ ಪೊಲೀಸರು ಬಂಧಿಸಿದ್ದಾರೆ
Follow us
TV9 Web
| Updated By: ಆಯೇಷಾ ಬಾನು

Updated on:Jul 16, 2021 | 11:33 AM

ದಾವಣಗೆರೆ: ಪ್ರೀತಿ, ಮದುವೆ ಎಂಬ ಹೆಸರಲ್ಲೂ ದೊಡ್ಡ ದೊಡ್ಡ ವಂಚನೆಗಳು ನಡೆಯುತ್ತಿವೆ. ದಾವಣಗೆರೆ ಕೆಟಿಜೆ‌ ನಗರ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ವ್ಯಕ್ತಿಯನ್ನು ಮದುವೆಯಾಗುವಂತೆ ಪೀಡಿಸಿ ಆತನ ಮೇಲೆ ಹಲ್ಲೆ ನಡೆಸಿ ಹಣ ಪಡೆದಿರುವ ಘಟನೆ ನಡೆದಿದೆ.

ನಿಶಾ ಎಂಬ 23 ವರ್ಷದ ಯುವತಿ 46 ವರ್ಷದ ವಿಮೆ ಕಂಪನಿ ಮ್ಯಾನೇಜರ್ ಕಿರಣ್ ಕುಮಾರ್ ಎಂಬುವವರಿಗೆ ಮದುವೆಯಾಗುವಂತೆ ಧಮ್ಕಿ ಹಾಕಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ. ನಿಶಾ ಕೇವಲ ಧಮ್ಕಿ ಮಾತ್ರವಷ್ಟೇ ಅಲ್ಲದೆ ಕಿರಣ್ ಮೇಲೆ ಹಲ್ಲೆ ನಡೆಸಿ ಹಣಕ್ಕೆ ಬೆದರಿಕೆ ಹಾಕಿದ್ದಾಳಂತೆ. ನಿಶಾಗೆ ಕನ್ನಡ ಸಂಘಟನೆ ಸಾಥ್ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಮೊದಲಿಗೆ ನಿಶಾ ಕಿರಣ್ನನ್ನು ಮದುವೆಯಾಗುವಂತೆ ಪೀಡಿಸಿದ್ದಳು. ನೀವು ನನಗೆ ಕೆಲಸ ಕೊಡಿಸಿದ್ದೀರಿ ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದೀರಿ ಅದಕ್ಕೆ ಮದುವೆಯಾಗಲು ಇಷ್ಟಪಟ್ಟಿದ್ದೇನೆಂದು ಬೆನ್ನು ಬಿದ್ದಿದ್ದಾಳೆ. ಆದ್ರೆ ಕಿರಣ್ ಮದುವೆಯಾಗಲು ನಿರಾಕರಿಸಿದ್ದ. ಹೀಗಾಗಿ ನಿನ್ನ ಹೆಸರು ಬರೆದು ವಿಷ ಕುಡಿಯುವುದಾಗಿ ಯುವತಿ ಬೆದರಿಕೆ ಹಾಕಿದ್ದಾಳೆ. ಬಳಿಕ ಇದು ಹೀಗೆ ಬಿಟ್ಟರೆ ಮುಂದೆ ಅನಾಹುತ ಕಟ್ಟಿಟ್ಟ ಬುತ್ತಿ ಎಂದು ಕಿರಣ್, ಯುವತಿಯ ತಂದೆ ತಾಯಿಗೆ ವಿಷಯ ತಿಳಿಸಿ ಬುದ್ದಿವಾದ ಹೇಳಲು ಯತ್ನಿಸಿದ್ದ. ಆಗ ಕರುನಾಡು ಸಮರ ಸೇನೆ ರಾಜ್ಯಾದ್ಯಕ್ಷ ಸೇರಿದಂತೆ ಮಾಲಾ ಎಂಬ ಮಹಿಳೆ ಮಧ್ಯಸ್ಥಿಕೆ ವಹಿಸಿ ಕಿರಣ್ ಯುವತಿಯನ್ನು ಕೆಟ್ಟದಾಗಿ ಬಳಸಿಕೊಂಡಿದ್ದಾನೆಂದು ಆರೋಪಿಸಿದ್ದಾರೆ. ಹಾಗೂ ಕಿರಣ್ ಮೇಲೆ ಹಲ್ಲೆ ನಡೆಸಿದ್ದಾರೆ.

ಕೊನೆಗೆ ಕಿರಣ್ ಕುಮಾರ್ರಿಂದ 10 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಖಾಲಿ ಚೆಕ್ಗೆ ಸಹಿ ಹಾಕಿಸಿಕೊಂಡು ಕೇಸ್ ಮುಗಿಸಲು ಯತ್ನಿಸಿದ್ದಾರೆ. ಸದ್ಯ ಕಿರಣ್ ಈಗ ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದಾರೆ. 10 ಲಕ್ಷಕ್ಕೆ ಬೇಡಿಕೆ ಇಟ್ಟು ಪ್ರಾಣ ಮಾನ ಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ದಾವಣಗೆರೆ ಕೆಟಿಜೆ‌ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ದೂರು ದಾಖಲಾದ ಬಳಿಕ ಕರುನಾಡು ಸಮರ ಸೇನೆ ರಾಜ್ಯಾಧ್ಯಕ್ಷ ಹಾಗೂ ಮಾಲಾಳನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಕ್ರಿಮಿನಲ್​ಗೆ ಕೇಕ್ ತಿನ್ನಿಸಿದ ಮುಂಬೈ ಪೊಲೀಸ್ ಇನ್ಸ್​ಪೆಕ್ಟರ್​​; ವಿಡಿಯೋದಲ್ಲಿ ದೃಶ್ಯ ಸೆರೆ, ತನಿಖೆಗೆ ಆದೇಶ

Published On - 11:30 am, Fri, 16 July 21

ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದ್ದು, ಆರ್ಥಿಕವಾಗಿ ಪ್ರಗತಿ ಹೊಂದುವರು
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಆರ್​ಸಿಬಿ ಗೆಲುವಿನ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಗಾಜಿಯಾಬಾದ್ ಅಪಾರ್ಟ್​ಮೆಂಟ್​​ ಲಿಫ್ಟ್‌ನಲ್ಲಿ ಸಿಲುಕಿದ ಮಗು
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಆರ್​ಸಿಬಿ ವಿರುದ್ಧ ಶತಕ ಬಾರಿಸಿ ಪಲ್ಟಿ ಹೊಡೆದ ಪಂತ್
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆಗೆ ಕೆರಳಿದ ಕನ್ನಡಿಗರು, ಎಚ್ಚರಿಕೆ
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಅನಂತ್ ನಾಗ್
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ಪ್ರಸ್ತುತವಾಗಿ ಉಚ್ಚಾಟಿತರು ಕಾಂಗ್ರೆಸ್ ಸೇರಬಹುದೇ ಅಂತ ಗೊತ್ತಿಲ್ಲ: ಸಚಿವ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ರೌಡಿಶೀಟರ್ ಅನಿಸ್ಕೊಂಡು ಬದುಕು ನಡೆಸುವುದು ಬಹಳ ಕಷ್ಟ: ನವಾಬ್ ಪಾಶಾ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ನಕಲಿ ಫೋಟೋ ವಿವಾದದ ಬಗ್ಗೆ ಪಾಕ್ ಪಿಎಂ, ಸೇನಾ ಮುಖ್ಯಸ್ಥರನ್ನು ಕೆಣಕಿದ ಓವೈಸಿ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ
ಬಿಜೆಪಿಯ 25 ಶಾಸಕರನ್ನು ಸೇರಿಸಿಕೊಳ್ಳಲು ಶಿವಕುಮಾರ್ ರೆಡಿ ಮಾಡಿದ್ದಾರೆ:ಶಾಸಕ