Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದರೆ ಬೇರೆಯಾಗುತ್ತೇವೆ ಎಂದು ಸಾವಿಗೆ ಶರಣಾದ ಅವಳಿ ಜವಳಿ ಸಹೋದರಿಯರು; ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ

ಅವಳಿ ಜವಳಿ ಸಹೋದರಿಯರ ಸಾವಿಗೆ ಕಾರಣ ತಿಳಿದ ಎಲ್ಲರೂ ಮರುಗಿದ್ದಾರೆ. ಬಾಲ್ಯದಿಂದಲೂ ಜತೆಯಾಗಿಯೇ ಇದ್ದವರು ವಿವಾಹದ ನಂತರ ಬೇರೆ ಬೇರೆ ಮನೆ ಸೇರಬೇಕಾಗುತ್ತದೆ. ಒಟ್ಟಿಗೆ ಇರಲಾಗುವುದಿಲ್ಲ. ಮದುವೆಯಿಂದ ನಾವು ದೂರವಾಗುತ್ತೇವೆ ಎಂದು ಯೋಚಿಸಿದ ದೀಪಿಕಾ ಮತ್ತು ದಿವ್ಯಾ ದುಡುಕಿ ಸಾವಿನ ಹಾದಿ ತುಳಿದಿದ್ದಾರೆ.

ಮದುವೆಯಾದರೆ ಬೇರೆಯಾಗುತ್ತೇವೆ ಎಂದು ಸಾವಿಗೆ ಶರಣಾದ ಅವಳಿ ಜವಳಿ ಸಹೋದರಿಯರು; ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ
ಆತ್ಮಹತ್ಯೆಗೆ ಶರಣಾದ ಅವಳಿ ಸಹೋದರಿಯರು
Follow us
TV9 Web
| Updated By: Skanda

Updated on: Jul 05, 2021 | 10:50 AM

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಅವಳಿ ಜವಳಿ ಸಹೋದರಿಯರಿಬ್ಬರೂ ನೇಣಿಗೆ ಕೊರಳೊಡ್ಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಮದುವೆಯಾದರೆ ಇಬ್ಬರೂ ಬೇರೆಬೇರೆಯಾಗಬೇಕಾಗುತ್ತದೆ ಎಂದು ಯೋಚಿಸಿದ ಸಹೋದರಿಯರು ಬೇರ್ಪಡಲು ಇಚ್ಛಿಸದೇ ಒಟ್ಟಿಗೆ ಸಾಯಲು ನಿರ್ಧರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತಿಮ‌ ವರ್ಷದ ಡಿಪ್ಲೊಮಾ‌ ಓದುತ್ತಿದ್ದ ಸಹೋದರಿಯರು ಚಿಕ್ಕಂದಿನಿಂದಲೂ ಅನ್ಯೋನ್ಯವಾಗಿದ್ದು ಸಾವಿನಲ್ಲೂ ಜತೆಯಾಗುವ ಕಟು ನಿರ್ಧಾರ ತೆಗೆದುಕೊಂಡಿರುವುದು ಎಲ್ಲರ ಕರುಳು ಹಿಂಡುತ್ತಿದೆ. ಮನೆಯ ಬೇರೆ ಬೇರೆ ಕೊಠಡಿಗಳಲ್ಲಿ ನೇಣು ಹಾಕಿಕೊಂಡ ದೀಪಿಕಾ (19 ವರ್ಷ) ಹಾಗೂ ದಿವ್ಯಾ (19 ವರ್ಷ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವಳಿ ಜವಳಿ ಸಹೋದರಿಯರ ಸಾವಿಗೆ ಕಾರಣ ತಿಳಿದ ಎಲ್ಲರೂ ಮರುಗಿದ್ದಾರೆ. ಬಾಲ್ಯದಿಂದಲೂ ಜತೆಯಾಗಿಯೇ ಇದ್ದವರು ವಿವಾಹದ ನಂತರ ಬೇರೆ ಬೇರೆ ಮನೆ ಸೇರಬೇಕಾಗುತ್ತದೆ. ಒಟ್ಟಿಗೆ ಇರಲಾಗುವುದಿಲ್ಲ. ಮದುವೆಯಿಂದ ನಾವು ದೂರವಾಗುತ್ತೇವೆ ಎಂದು ಯೋಚಿಸಿದ ದೀಪಿಕಾ ಮತ್ತು ದಿವ್ಯಾ ದುಡುಕಿ ಸಾವಿನ ಹಾದಿ ತುಳಿದಿದ್ದಾರೆ. ಅನ್ಯೋನ್ಯತೆಯಿಂದ ಇದ್ದ ಇಬ್ಬರೂ ಹೀಗೆ ಏಕಾಏಕಿ ಸಾವಿಗೆ ಶರಣಾಗಿದ್ದು ಮನೆಯವರನ್ನು ದಿಗ್ಭ್ರಾಂತರನ್ನಾಗಿಸಿದೆ. ಇಬ್ಬರೂ ಸಹೋದರಿಯರ ಅಂತ್ಯಕ್ರಿಯೆಯನ್ನು ಒಟ್ಟಿಗೆ ನೆರವೇರಿಸಲಾಗಿದ್ದು, ಆ ದೃಶ್ಯವನ್ನು ನೋಡಿದವರು ಕಣ್ಣೀರಾಗಿದ್ದಾರೆ.

ಇಬ್ಬರೂ ಹೆಣ್ಣು ಮಕ್ಕಳು ದೊಡ್ಡವರಾಗಿದ್ದಾರೆ. ಆದ್ದರಿಂದ ಮದುವೆ ಮಾಡಿಬಿಡೋಣ ಎಂದು ದಿವ್ಯಾ ಹಾಗೂ ದೀಪಿಕಾ ಅವರ ತಂದೆ, ತಾಯಿ ಸುರೇಶ್ ಮತ್ತು ಯಶೋದ ನಿರ್ಧರಿಸಿದ್ದರು. ಅದರಂತೆಯೇ, ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ, ಬೇರೆ ಬೇರೆ ಮನೆಗಳನ್ನು ಸೇರಿದರೆ ತಮ್ಮ ಬಾಂಧವ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಚಿಂತಿಸಿದ ಸಹೋದರಿಯರು ಸಂಜೆ ವೇಳೆಗೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

TWIN SISTERS SUICIDE

ಅವಳಿ ಸಹೋದರಿಯರು

ಮದುವೆಯ ನಂತರ ಬೇರೆಯಾಗಬೇಕಲ್ಲಾ ಎಂದು ಯೋಚಿಸಿದ ಹೆಣ್ಣುಮಕ್ಕಳಿಗೆ ಆ ವಿಷಯವನ್ನು ಅರಗಿಸಿಕೊಳ್ಳಲಾಗದೇ ಹೀಗೆ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಎಲ್ಲರನ್ನೂ ದುಃಖದ ಮಡುವಿಗೆ ನೂಕಿದೆ. ಈ ಅವಳಿ ಸಹೋದರಿಯರು ಬಾಲ್ಯದಿಂದಲೂ ಅನ್ಯೋನ್ಯತೆಯಿಂದಿದ್ದು ಈಗಲೂ ಒಂದೇ ತರಗತಿಯಲ್ಲಿ ಓದುತ್ತಿದ್ದರು. ಸದಾ ಒಬ್ಬರಿಗೊಬ್ಬರು ಹೆಗಲಾಗಿರುತ್ತಿದ್ದರು ಎನ್ನಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ವಿಧಿಯಾಟಕ್ಕೆ ಹೊಣೆ ಯಾರು? ಕೊರೊನಾ ಸೋಂಕಿಗೆ ಅವಳಿ ಪುತ್ರರನ್ನು ಕಳೆದುಕೊಂಡ ಪೋಷಕರು

ಅದೃಷ್ಟ ಅಂದ್ರೆ ಇದಪ್ಪಾ! ಅವಳಿ ಸಹೋದರರಿಗೆ ಒಂದೇ ಕಂಪನಿಯಲ್ಲಿ ಉದ್ಯೋಗ 50 ಲಕ್ಷ ರೂಪಾಯಿ ಸಂಬಳ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್