AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾದರೆ ಬೇರೆಯಾಗುತ್ತೇವೆ ಎಂದು ಸಾವಿಗೆ ಶರಣಾದ ಅವಳಿ ಜವಳಿ ಸಹೋದರಿಯರು; ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ

ಅವಳಿ ಜವಳಿ ಸಹೋದರಿಯರ ಸಾವಿಗೆ ಕಾರಣ ತಿಳಿದ ಎಲ್ಲರೂ ಮರುಗಿದ್ದಾರೆ. ಬಾಲ್ಯದಿಂದಲೂ ಜತೆಯಾಗಿಯೇ ಇದ್ದವರು ವಿವಾಹದ ನಂತರ ಬೇರೆ ಬೇರೆ ಮನೆ ಸೇರಬೇಕಾಗುತ್ತದೆ. ಒಟ್ಟಿಗೆ ಇರಲಾಗುವುದಿಲ್ಲ. ಮದುವೆಯಿಂದ ನಾವು ದೂರವಾಗುತ್ತೇವೆ ಎಂದು ಯೋಚಿಸಿದ ದೀಪಿಕಾ ಮತ್ತು ದಿವ್ಯಾ ದುಡುಕಿ ಸಾವಿನ ಹಾದಿ ತುಳಿದಿದ್ದಾರೆ.

ಮದುವೆಯಾದರೆ ಬೇರೆಯಾಗುತ್ತೇವೆ ಎಂದು ಸಾವಿಗೆ ಶರಣಾದ ಅವಳಿ ಜವಳಿ ಸಹೋದರಿಯರು; ಮಂಡ್ಯದಲ್ಲಿ ಹೃದಯವಿದ್ರಾವಕ ಘಟನೆ
ಆತ್ಮಹತ್ಯೆಗೆ ಶರಣಾದ ಅವಳಿ ಸಹೋದರಿಯರು
TV9 Web
| Edited By: |

Updated on: Jul 05, 2021 | 10:50 AM

Share

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಅವಳಿ ಜವಳಿ ಸಹೋದರಿಯರಿಬ್ಬರೂ ನೇಣಿಗೆ ಕೊರಳೊಡ್ಡಿದ ಹೃದಯ ವಿದ್ರಾವಕ ಘಟನೆ ನಡೆದಿದೆ. ಮದುವೆಯಾದರೆ ಇಬ್ಬರೂ ಬೇರೆಬೇರೆಯಾಗಬೇಕಾಗುತ್ತದೆ ಎಂದು ಯೋಚಿಸಿದ ಸಹೋದರಿಯರು ಬೇರ್ಪಡಲು ಇಚ್ಛಿಸದೇ ಒಟ್ಟಿಗೆ ಸಾಯಲು ನಿರ್ಧರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತಿಮ‌ ವರ್ಷದ ಡಿಪ್ಲೊಮಾ‌ ಓದುತ್ತಿದ್ದ ಸಹೋದರಿಯರು ಚಿಕ್ಕಂದಿನಿಂದಲೂ ಅನ್ಯೋನ್ಯವಾಗಿದ್ದು ಸಾವಿನಲ್ಲೂ ಜತೆಯಾಗುವ ಕಟು ನಿರ್ಧಾರ ತೆಗೆದುಕೊಂಡಿರುವುದು ಎಲ್ಲರ ಕರುಳು ಹಿಂಡುತ್ತಿದೆ. ಮನೆಯ ಬೇರೆ ಬೇರೆ ಕೊಠಡಿಗಳಲ್ಲಿ ನೇಣು ಹಾಕಿಕೊಂಡ ದೀಪಿಕಾ (19 ವರ್ಷ) ಹಾಗೂ ದಿವ್ಯಾ (19 ವರ್ಷ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವಳಿ ಜವಳಿ ಸಹೋದರಿಯರ ಸಾವಿಗೆ ಕಾರಣ ತಿಳಿದ ಎಲ್ಲರೂ ಮರುಗಿದ್ದಾರೆ. ಬಾಲ್ಯದಿಂದಲೂ ಜತೆಯಾಗಿಯೇ ಇದ್ದವರು ವಿವಾಹದ ನಂತರ ಬೇರೆ ಬೇರೆ ಮನೆ ಸೇರಬೇಕಾಗುತ್ತದೆ. ಒಟ್ಟಿಗೆ ಇರಲಾಗುವುದಿಲ್ಲ. ಮದುವೆಯಿಂದ ನಾವು ದೂರವಾಗುತ್ತೇವೆ ಎಂದು ಯೋಚಿಸಿದ ದೀಪಿಕಾ ಮತ್ತು ದಿವ್ಯಾ ದುಡುಕಿ ಸಾವಿನ ಹಾದಿ ತುಳಿದಿದ್ದಾರೆ. ಅನ್ಯೋನ್ಯತೆಯಿಂದ ಇದ್ದ ಇಬ್ಬರೂ ಹೀಗೆ ಏಕಾಏಕಿ ಸಾವಿಗೆ ಶರಣಾಗಿದ್ದು ಮನೆಯವರನ್ನು ದಿಗ್ಭ್ರಾಂತರನ್ನಾಗಿಸಿದೆ. ಇಬ್ಬರೂ ಸಹೋದರಿಯರ ಅಂತ್ಯಕ್ರಿಯೆಯನ್ನು ಒಟ್ಟಿಗೆ ನೆರವೇರಿಸಲಾಗಿದ್ದು, ಆ ದೃಶ್ಯವನ್ನು ನೋಡಿದವರು ಕಣ್ಣೀರಾಗಿದ್ದಾರೆ.

ಇಬ್ಬರೂ ಹೆಣ್ಣು ಮಕ್ಕಳು ದೊಡ್ಡವರಾಗಿದ್ದಾರೆ. ಆದ್ದರಿಂದ ಮದುವೆ ಮಾಡಿಬಿಡೋಣ ಎಂದು ದಿವ್ಯಾ ಹಾಗೂ ದೀಪಿಕಾ ಅವರ ತಂದೆ, ತಾಯಿ ಸುರೇಶ್ ಮತ್ತು ಯಶೋದ ನಿರ್ಧರಿಸಿದ್ದರು. ಅದರಂತೆಯೇ, ಇಬ್ಬರನ್ನೂ ಬೇರೆ ಬೇರೆ ಮನೆಗೆ ಮದುವೆ ಮಾಡಿಕೊಡಲು ಪೋಷಕರು ಸಿದ್ಧತೆ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ, ಬೇರೆ ಬೇರೆ ಮನೆಗಳನ್ನು ಸೇರಿದರೆ ತಮ್ಮ ಬಾಂಧವ್ಯಕ್ಕೆ ಧಕ್ಕೆಯಾಗುತ್ತದೆ ಎಂದು ಚಿಂತಿಸಿದ ಸಹೋದರಿಯರು ಸಂಜೆ ವೇಳೆಗೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

TWIN SISTERS SUICIDE

ಅವಳಿ ಸಹೋದರಿಯರು

ಮದುವೆಯ ನಂತರ ಬೇರೆಯಾಗಬೇಕಲ್ಲಾ ಎಂದು ಯೋಚಿಸಿದ ಹೆಣ್ಣುಮಕ್ಕಳಿಗೆ ಆ ವಿಷಯವನ್ನು ಅರಗಿಸಿಕೊಳ್ಳಲಾಗದೇ ಹೀಗೆ ಮಾಡಿಕೊಂಡಿದ್ದಾರೆ ಎನ್ನುವ ವಿಷಯ ಎಲ್ಲರನ್ನೂ ದುಃಖದ ಮಡುವಿಗೆ ನೂಕಿದೆ. ಈ ಅವಳಿ ಸಹೋದರಿಯರು ಬಾಲ್ಯದಿಂದಲೂ ಅನ್ಯೋನ್ಯತೆಯಿಂದಿದ್ದು ಈಗಲೂ ಒಂದೇ ತರಗತಿಯಲ್ಲಿ ಓದುತ್ತಿದ್ದರು. ಸದಾ ಒಬ್ಬರಿಗೊಬ್ಬರು ಹೆಗಲಾಗಿರುತ್ತಿದ್ದರು ಎನ್ನಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಹುಣಸನಹಳ್ಳಿ ಗ್ರಾಮದ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ: ವಿಧಿಯಾಟಕ್ಕೆ ಹೊಣೆ ಯಾರು? ಕೊರೊನಾ ಸೋಂಕಿಗೆ ಅವಳಿ ಪುತ್ರರನ್ನು ಕಳೆದುಕೊಂಡ ಪೋಷಕರು

ಅದೃಷ್ಟ ಅಂದ್ರೆ ಇದಪ್ಪಾ! ಅವಳಿ ಸಹೋದರರಿಗೆ ಒಂದೇ ಕಂಪನಿಯಲ್ಲಿ ಉದ್ಯೋಗ 50 ಲಕ್ಷ ರೂಪಾಯಿ ಸಂಬಳ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ