AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಹಾ ಜಾತಿ ಸರ್ಟಿಫಿಕೇಟ್ ವೈರಲ್! ಹಾಗಾದ್ರೆ ಇದ್ದದ್ದು ಎಲ್ಲಿ? ಅಂಜಲಿ ಕೊಲೆ ಕೇಸ್​ಗೂ ಲಿಂಕ್​

ನೇಹಾ ಹಾಗೂ ಅಂಜಲಿ ಕೊಲೆ ಕೇಸ್ ಎರಡು‌ ಕೂಡಾ ಸಿಐಡಿ ತನಿಖೆ ನಡೆಸಿದ್ದು, ಎರಡು ಪ್ರಕರಣ ಬಹುತೇಕ ಮುಕ್ತಾಯ‌ ಹಂತಕ್ಕೆ ಬಂದಿವೆ. ಈ ನಡುವೆ ಕೊಲೆಯಾದ ನೇಹಾ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ. ನೇಹಾ ಜಾತಿ ಸರ್ಟಿಫಿಕೇಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೇಹಾ ಇದ್ದಿದ್ದು ಎಲ್ಲಿ ಅನ್ನೋ ಪ್ರಶ್ನೆ ಮೂಡಿದೆ.

ನೇಹಾ ಜಾತಿ ಸರ್ಟಿಫಿಕೇಟ್ ವೈರಲ್! ಹಾಗಾದ್ರೆ ಇದ್ದದ್ದು ಎಲ್ಲಿ? ಅಂಜಲಿ ಕೊಲೆ ಕೇಸ್​ಗೂ ಲಿಂಕ್​
ನೇಹಾ ಜಾತಿ ಸರ್ಟಿಫಿಕೇಟ್ ವೈರಲ್! ಹಾಗಾದ್ರೆ ಇದ್ದದ್ದು ಎಲ್ಲಿ? ಅಂಜಲಿ ಕೊಲೆ ಕೇಸ್​ಗೂ ಲಿಂಕ್​
ಶಿವಕುಮಾರ್ ಪತ್ತಾರ್
| Edited By: |

Updated on:May 31, 2024 | 7:15 PM

Share

ಹುಬ್ಬಳ್ಳಿ, ಮೇ 31: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ನಡೆದಿದ್ದ ನೇಹಾ (Neha) ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ತೀವ್ರ ಆಕ್ರೋಶಕ್ಕೂ ಕಾರಣವಾಗಿತ್ತು. ಆರೋಪಿಯನ್ನು ಅರೆಸ್ಟ್​ ಮಾಡಲಾಗಿದೆ. ಇದೀಗ ಇದೇ ನೇಹಾ ಕೊಲೆ ಪ್ರಕರಣಕ್ಕೆ ಟ್ವಿಸ್ಟ್​ ಒಂದು ಸಿಕ್ಕಿದೆ. ಬೆಂಗಳೂರು ವಿಳಾಸ ತೋರಿಸಿ ಜಾತಿ ಪ್ರಮಾಣ ಪತ್ರವನ್ನು (Caste certificate) ನೇಹಾ ಹಿರೇಮಠ ಪಡೆದುಕೊಂಡಿದ್ದಾರೆ. ಸದ್ಯ ಈ ಜಾತಿ ಪ್ರಮಾಣ ಪತ್ರ ವೈರಲ್​ ಆಗಿದ್ದು, ನೇಹಾ ಇದ್ದದ್ದು ಬೆಂಗಳೂರಿನಲ್ಲಾ ಅಥವಾ ಹುಬ್ಬಳ್ಳಿಯಲ್ಲಾ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.

ನೇಹಾ ಹಿರೇಮಠ ಬೇಗೂರ ರೋಡ ಹೊಂಗಸಂದ್ರ ವಾರ್ಡ್ ನಂಬರ್ 135 ರಲ್ಲಿ ಬೇಡ ಜಂಗಮ‌ ಸರ್ಟಿಫಿಕೇಟ್ ಪಡೆದುಕೊಂಡಿದ್ದಾರೆ. ಸದ್ಯ ನೇಹಾ ಜಾತಿ ಸರ್ಟಿಫಿಕೇಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಅಂಜಲಿ, ನೇಹಾ ಕೊಲೆ ಪ್ರಕರಣ; ಸಿಐಡಿ ವಿಚಾರಣೆ ಬಳಿಕ ನಿರಂಜನ​​ ಹೇಳಿದ್ದಿಷ್ಟು

ನೇಹಾ ಕೊಲೆ ಪ್ರಕರಣ ದೇಶದ್ಯಾಂತ ಸಾಕಷ್ಟು ಸುದ್ದಿಯಾಗಿತ್ತು. ಅದಕ್ಕೆ ಹುಬ್ಬಳ್ಳಿಯ ವೀರಾಪೂರ ಒಣಿಯಲ್ಲಿ ಹತ್ಯೆಯಾದ ಅಂಜಲಿ ಕೊಲೆ ಕೇಸ್ ಲಿಂಕ್ ಆಗಿದೆ. ಅಂಜಲಿ ಕೊಲೆ ಕೇಸ್​​ನಲ್ಲಿ ಕೆಲ ದಲಿತ ಸಂಘಟನೆಗಳು ಸಮರ್ಪಕ ತನಿಖೆ ನಡಿಬೇಕೆಂದು ಮನವಿ ಮಾಡಿದ್ದರು. ಅಂಜಲಿ ಕೊಲೆ ಹಿಂದೆ ನೇಹಾ ತಂದೆ ನಿರಂಜನ ಹಿರೇಮಠ ಆಪ್ತ ಸಹಾಯಕ ವಿಜಯ್ ಅಲಿಯಾಸ್ ಈರಣ್ಣ ಕೈವಾಡ ಇದೆ ಎಂದು ಸಿಐಡಿ ಅಧಿಕಾರಿಗಳಿಗೆ ದಲಿತ ಸಂಘಟನೆಗಳು ಮನವಿ ಮಾಡಿದ್ದರು. ಇದೆಲ್ಲದರ ಬೆನ್ನಲ್ಲೇ ನೇಹಾ ಜಾತಿ ಸರ್ಟಿಫಿಕೇಟ್ ವೈರಲ್ ಆಗಿದೆ.

ಅಂಜಲಿ ಕೊಲೆ‌ ಪ್ರಕರಣದಲ್ಲಿ ಮುಜುಗರವಾಗುತ್ತಲೇ ನಿರಂಜನ ಹಿರೇಮಠ ಮಗಳ ಜಾತಿ ಸರ್ಟಿಫಿಕೇಟ್ ವೈರಲ್ ಮಾಡಿದ್ದಾರಾ. ನೇಹಾ ಹಂತಕ ಫಯಾಜ್ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗತ್ತಾ ಎಂಬ ಪ್ರಶ್ನೆಗಳು ಹುಟ್ಟಿಕೊಂಡಿದ್ದು, ದಲಿತ ದೌರ್ಜನ್ಯ ಪ್ರಕರಣದಡಿ ದೂರು ದಾಖಲು ಮಾಡಿದರೆ ಅಟ್ರಾಸಿಟಿ ಕೇಸ್ ದಾಖಲಿಸುವ ಸಾಧ್ಯತೆ ಇದೆ.

ಕೊಲೆಯಾಗಿ ಹೆಚ್ಚು ಕಡಿಮೆ ಒಂದು ತಿಂಗಳಾದರೂ ನೇಹಾ ಕೊಲೆ ಪ್ರಕರಣ ಇನ್ನು ಸದ್ದು‌ ಮಾಡುತ್ತಿದೆ. ಇದರ ಜೊತೆ ನೇಹಾ ಮಾದರಿಯಲ್ಲಿ ‌ನಡೆದ ಅಂಜಲಿ ಕೊಲೆ ಪ್ರಕರಣವೂ ತಳಕು ಹಾಕಿಕೊಂಡಿದೆ. ಈ ಎರಡು ಪ್ರಕರಣ ಸಿಐಡಿ ತನಿಖೆಯಲ್ಲಿವೆ. ಇವತ್ತು ನೇಹಾ ಹಂತಕ ವಿಶ್ವನ‌ ಸಿಐಡಿ ಕಸ್ಟಡಿ ಅಂತ್ಯವಾಗಿದೆ. ಈ ಮಧ್ಯೆ ಅಂಜಲಿ ಕೊಲೆ ಕೇಸ್ ನಲ್ಲಿ‌ ನಿರಂಜನ‌ ಹೆಸರು ತಳಕು ಹಾಕಿಕೊಂಡಿದೆ.

ಇದನ್ನೂ ಓದಿ: ನೇಹಾ ಹಿರೇಮಠ ತಂದೆಯನ್ನು ಚೇಸ್ ಮಾಡಿದ ಆಟೋ ಚಾಲಕ, ಮುಂದೇನಾಯ್ತು ನೋಡಿ

ಹಿಂದೆ ಅಂಜಲಿ ಜೊತೆ ಆತ್ಮೀಯವಾಗಿದ್ದ ವಿಜಯ್ ವಿರುದ್ದ ಪೊಕ್ಸೊ ಕೇಸ್ ದಾಖಲಾಗಿತ್ತು. ಬೆಂಡಿಗೇರಿ ಠಾಣೆಯಲ್ಲಿ ಪೊಕ್ಸೋ ಕೇಸ್ ದಾಖಲಾಗಿತ್ತು. ಅಂಜಲಿ ‌ಕೊಲೆ ಕೇಸ್​ನಲ್ಲಿ ಆತನ ಪಾತ್ರವೂ ತನಿಖೆ ಆಗಬೇಕು ಅನ್ನೋದು ದಲಿತ ಸಂಘಟನೆಗಳ ವಾದ. ಅಂಜಲಿ ಸಹೋದರಿ ಕೂಡಾ ನಿರಂಜನ‌ ಹಿರೇಮಠ ಹೆಸರು ಹೇಳುತ್ತಿದ್ದಾರೆ.

ಒಂದೇ ಮಾದರಿಯಲ್ಲಿ ನಡೆದ ಎರಡು ಕೊಲೆಗಳು ಇಡೀ ದೇಶದಲ್ಲಿ ಸದ್ದು ಮಾಡಿವೆ. ಇದೀಗ ಎರಡು ಪ್ರಕರಣವೂ ಒಂದಕ್ಕೊಂದು ಲಿಂಕ್ ಪಡೆದುಕೊಂಡಿವೆ. ಸದ್ಯ ನೇಹಾ ಜಾತಿ ಸರ್ಟಿಫಿಕೇಟ್ ಇವತ್ತೆ ಯಾಕೆ ವೈರಲ್ ಆಯ್ತು ಅನ್ನೋ ಅನುಮಾನಗಳು ಹುಟ್ಟಿಕೊಂಡಿವೆ. ಅಂಜಲಿ ಕೊಲೆ ಕೇಸ್​ನಲ್ಲಿ ದಲಿತ ಸಂಘಟನೆಗಳ‌ ಎಂಟ್ರಿಯಿಂದ ಇವತ್ತು ಸರ್ಟಿಫಿಕೇಟ್ ವೈರಲ್ ಆಯ್ತಾ ಅನ್ನೋದು ಯಕ್ಷ ಪ್ರಶ್ನೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:06 pm, Fri, 31 May 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು