AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಬಿಗ್‌ ಟ್ವಿಸ್ಟ್‌: ಕೇಸ್ ಮುಚ್ಚಿ ಹಾಕಲು ಸರ್ಕಾರದ ಯತ್ನ, ಸಹೋದರಿ ಗಂಭೀರ ಆರೋಪ

ಬೀದರ್‌ನ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಸಚಿನ್ ಗುತ್ತಿಗೆದಾರರ ಪರವಾನಗಿ ಹೊಂದಿರಲಿಲ್ಲ ಎಂದು ಗುತ್ತಿಗೆದಾರರ ಸಂಘ ಹೇಳಿದೆ. ಆದರೆ, ಸಚಿನ್‌ನ ಸಹೋದರಿ ಸುರೇಖಾ, ರಾಜ್ಯ ಸರ್ಕಾರ ಪ್ರಕರಣ ಮುಚ್ಚಿಹಾಕಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಪ್ರಧಾನಿಗೆ ಪತ್ರ ಬರೆಯುವುದಾಗಿ ಹೇಳಿದ್ದಾರೆ. ಸಿಬಿಐ ತನಿಖೆಗೆ ಅವರು ಆಗ್ರಹಿಸಿದ್ದಾರೆ.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಬಿಗ್‌ ಟ್ವಿಸ್ಟ್‌: ಕೇಸ್ ಮುಚ್ಚಿ ಹಾಕಲು ಸರ್ಕಾರದ ಯತ್ನ, ಸಹೋದರಿ ಗಂಭೀರ ಆರೋಪ
ಸಚಿನ್ ಪಾಂಚಾಳ್ ಮತ್ತು ಸಹೋದರಿ ಸುರೇಖಾ
ಸುರೇಶ ನಾಯಕ
| Edited By: |

Updated on: Jan 02, 2025 | 11:43 AM

Share

ಬೀದರ್, ಜನವರಿ 2: ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ದೊರೆತಿದೆ. ಒಂದೆಡೆ, ಸಚಿನ್ ಬಳಿ ಗುತ್ತಿಗೆದಾರರ ಪರವಾನಿಗೆಯೇ ಇರಲಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಗಜಿ ಹೇಳಿದ್ದರೆ, ಮತ್ತೊಂದೆಡೆ ಪ್ರಕರಣ ಮುಚ್ಚಿ ಹಾಕಲು ರಾಜ್ಯ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ ಎಂದು ಎಂದು ಸಚಿನ್ ಸಹೋದರಿ ಸುರೇಖಾ ಆರೋಪಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಗಾಂವ್‌ನಲಿ ಮಾತನಾಡಿದ ಸುರೇಖಾ, ಕಲಬುರಗಿಯಲ್ಲಿ ಸಚಿನ್ ಕೆಲಸ ಮಾಡಿಲ್ಲ. ಆತ ನಮ್ಮ ಭೇಟಿಯೇ ಆಗಿಲ್ಲ. ಸಚಿನ್ ಕೈ ಬರಹವೇ ಅದಲ್ಲ. ಸಚಿನ್ ಹುಟ್ಟಿಯೇ ಇಲ್ಲ ಎಂದು ಅವರು (ರಾಜ್ಯ ಸರ್ಕಾರ) ಮಾಡಿಬಿಡುತ್ತಾರೆ ಎಂಬ ಆತಂಕ ಇದೆ. ರಾಜ್ಯ ಸರ್ಕಾರದ ಮೇಲೆ ನಮಗೆ ನಂಬಿಕೆ ಉಳಿದಿಲ್ಲ. ಸಿಬಿಐ ತನಿಖೆ ಮಾಡಿದರೆ ನ್ಯಾಯ ಸಿಗಬಹುದು ಎಂಬ ವಿಶ್ವಾಸವಿದೆ ಎಂದರು.

ಡೆತ್ ನೋಟ್​ನಲ್ಲಿ ಉಲ್ಲೇಖವಾದ ಆರೋಪಿಗಳನ್ನು ಈವರೆಗೆ ತನಿಖೆಗೆ ಒಳಪಡಿಸಿಲ್ಲ. ತನಿಖಾಧಿಕಾರಿಗಳು ನಮ್ಮನ್ನು ಮಾತ್ರ ವಿಚಾರಣೆ ಮಾಡುತ್ತಿದ್ದಾರೆ. ಇಲ್ಲಿವರೆಗೆ ತನಿಖಾಧಿಕಾರಿಗಳು ಯಾವುದೇ ಮಾಹಿತಿ ಕೊಟ್ಟಿಲ್ಲ. ಎಫ್​ಎಸ್​ಎಲ್ ವರದಿ, ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ನಮಗೆ ಮಾಹಿತಿ ನೀಡಿಲ್ಲ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆಯಲು ಪ್ರಯತ್ನಿಸುತ್ತೇವೆ ಎಂದು ಸುರೇಖಾ ಹೇಳಿದ್ದಾರೆ.

ಜಗನ್ನಾಥ ಶೇಗಜಿ ಹೇಳಿದ್ದೇನು?

ಬೀದರ್ ಜಿಲ್ಲಾ ಗುತ್ತಿಗೆದಾರರ ಬಳಿ ಮಾಹಿತಿ ಪಡೆದಿದ್ದೇನೆ. ಸಚಿನ್ ಪಾಂಚಾಳ್ ಗುತ್ತಿಗೆದಾರ ಅಲ್ಲ. ಅವರ ಯಾವುದೇ ಗುತ್ತಿಗೆ ಇಲ್ಲ, ಲೈಸೆನ್ಸ್ ಸಹ ಇಲ್ಲವೇ ಇಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಜಗನ್ನಾಥ ಶೇಗಜಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ‘ಟಿವಿ9’ ಜತೆ ಮಾತನಾಡಿದ ಅವರು, ಸಚಿನ್ ಪಾಂಚಾಳ್ ಬಳಿ ಬೆಂಗಳೂರಿನ PWDನಲ್ಲಿ ರಿಜಿಸ್ಟರ್ ಆಗಿದ್ದ ಲೈಸೆನ್ಸ್ ಇದ್ದರೆ ಗುತ್ತಿಗೆದಾರ ಎಂದು ಪರಿಗಣಿಸಬಹುದು ಎಂದರು.

ಇದನ್ನೂ ಓದಿ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಹಲವು ಅನುಮಾನ: ಖರ್ಗೆ ಮೇಲಿನ ಆರೋಪಗಳೇನು? ಇಲ್ಲಿದೆ ಸಮಗ್ರ ವಿವರ

ಧಾರವಾಡ ಮತ್ತು ಗುಲ್ಬರ್ಗ ಚೀಫ್ ಇಂಜಿನಿಯರ್ ಬಳಿ ವಿಚಾರಣೆ ಮಾಡಿದ್ದೇವೆ. ಚೀಫ್ ಇಂಜಿನಿಯರ್ ಬಳಿ ಮಾಹಿತಿ ಪಡೆದಾಗ ನೋಂದಣಿಯೇ ಆಗಿಲ್ಲ ಎಂದರು. ಇವತ್ತು ಬೆಂಗಳೂರಿನ ಕಚೇರಿಯಲ್ಲೂ ಪರಿಶೀಲನೆ ಮಾಡುತ್ತೇವೆ. ಪಾಂಚಾಳ್ ಹೆಸರಿನಲ್ಲಿ ಯಾವುದೇ ಬಾಕಿ ಬಿಲ್, ಟೆಂಟರ್ ಆಗಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. 32 ಸಾವಿರ ಕೋಟಿ ರೂಪಾಯಿ ಸರ್ಕಾರದಿಂದ ಬಾಕಿ ಬಿಲ್ ಬರಬೇಕಿದೆ. ಇದರಲ್ಲಿ ಸಚಿನ್ ಪಾಂಚಾಳ್​ರ ಯಾವುದೇ ಬಿಲ್ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ