AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ

ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಎ1 ಮಧು, ಎ2  ಹರೀಶ್‌ಬಾಬು@ಹರೀಶ್‌ಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್​ ತೀರ್ಪು ಪ್ರಕಟಿಸಿದ್ದಾರೆ. ಎ3 ಕೃಷ್ಣಪ್ಪ, ಎ4 ತಿಮ್ಮಕ್ಕ, ಎ5 ಹನುಮಂತ ರಾವ್ ಖುಲಾಸೆಗೊಳಿಸಲಾಗಿದೆ.

ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಪಿಎಸ್‌ಐ ಜಗದೀಶ್, ಬಂಧಿತ ಆರೋಪಿಗಳು
ಬಿ ಮೂರ್ತಿ, ನೆಲಮಂಗಲ
| Edited By: |

Updated on: Apr 08, 2024 | 10:02 PM

Share

ನೆಲಮಂಗಲ, ಏಪ್ರಿಲ್​ 08: ಪಿಎಸ್‌ಐ ಜಗದೀಶ್ (PSI Jagdish) ಹತ್ಯೆ ಪ್ರಕರಣದ ಆರೋಪಿಗಳಾದ ಎ1 ಮಧು, ಎ2  ಹರೀಶ್‌ಬಾಬು@ಹರೀಶ್‌ಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್​ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್​ಐ ಆಗಿದ್ದರು. ​ ಬೈಕ್ ಕಳ್ಳರನ್ನು ಹಿಡಿಯಲು ಬಂದಾಗ ನೆಲಮಂಗಲದಲ್ಲಿ ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ಡಿವೈಎಸ್ಪಿ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.

ಕೋರ್ಟ್​ಗೆ ನೆಲಮಂಗಲ ಟೌನ್ ಪೊಲೀಸರು 780 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಎ3 ಕೃಷ್ಣಪ್ಪ, ಎ4 ತಿಮ್ಮಕ್ಕ, ಎ5 ಹನುಮಂತ ರಾವ್ ಖುಲಾಸೆಗೊಳಿಸಲಾಗಿದೆ.

ಇದನ್ನೂ ಓದಿ: ಗನ್‌ ಇಟ್ಟುಕೊಂಡು ಬಂದು ಸಿಎಂಗೆ ಹಾರ ಹಾಕಿದ ಅನಾಮಿಕ, ಆತಂಕ ಮೂಡಿಸಿದ ವ್ಯಕ್ತಿ!

ಡಾನ್ ಆಗುವ ಆಸೆಯಿಂದ ಪಿಎಸ್​​ಐಯನ್ನೇ ಕೊಂದುಬಿಟ್ಟರುವುದಾಗಿ ತನಿಖೆ ವೇಳೆ ಪೊಲೀಸರಿಗೆ ಎ1 ಅರೋಪಿ ಮಧು@ಗೋಣ್ಣೆ ಹೇಳಿಕೆ ನೀಡಿದ್ದ. ಹೀಗಾಗಿ ನೆಲಮಂಗಲ ಟೌನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 333, 307, 302, 397, 201, 212 , 75ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಲಾಗಿತ್ತು.

ತನಿಖಾಧಿಕಾರಿಯಾಗಿ ನಿವೃತ್ತ DYSP ರಾಜೇಂದ್ರ ಕುಮಾರ್, ಸರ್ಕಾರಿ ಅಭಿಯೋಜಕರು ಮೀನಾ ಕುಮಾರಿ, ಎಸ್​ವ್ಹಿ ಭಟ್ (ನಿವೃತ್ತ)ವಾದ ಮಂಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಪ್ರಕರಣವು ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಅಂದಿನ ರಾಜ್ಯ ಸರ್ಕಾರ ಕೂಡ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಸೂಚನೆಯಂತೆ ತನಿಖೆ ನಡೆಸಿದ್ದ ಪೊಲೀಸರು ಅಕ್ಟೋಬರ್ 20ರಂದು ಆರೋಪಿಗಳಾದ ಮಧು ಮತ್ತು ಕೃಷ್ಣರನ್ನು ಮಹಾರಾಷ್ಟ್ರದ ನಾಗಪುರದಲ್ಲಿ ಬಂಧಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ