AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ BA.2 ತಳಿಯ ಎರಡು ಹೊಸ ವೈರಸ್​ ಪತ್ತೆ; ದೇಶದಲ್ಲಿ 4ನೇ ಅಲೆ ಶುರುವಾಗಿದೆ ಎಂದ ಡಾ. ಸಿ ಎನ್​ ಮಂಜುನಾಥ್​

ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು, ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್​ಗಳಲ್ಲಿ ಏರಿಕೆ ಕಂಡುಬರಲಿದೆ ಎಂದು ಡಾ. ಮಂಜುನಾಥ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ BA.2 ತಳಿಯ ಎರಡು ಹೊಸ ವೈರಸ್​ ಪತ್ತೆ; ದೇಶದಲ್ಲಿ 4ನೇ ಅಲೆ ಶುರುವಾಗಿದೆ ಎಂದ ಡಾ. ಸಿ ಎನ್​ ಮಂಜುನಾಥ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 23, 2022 | 2:10 PM

Share

ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ BA.2. 12 ಗಳು ಕಾಣಿಸಿಕೊಂಡಿದ್ದಾಗಿ ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್​.ಮಂಜುನಾಥ್​ ತಿಳಿಸಿದ್ದಾರೆ.  ಬಿಎ.2 ರೂಪಾಂತರಗಳು ದೆಹಲಿ ಮತ್ತು ಮುಂಬೈನಲ್ಲಿ ಕಾಣಿಸಿಕೊಂಡಿದ್ದವು. ಅದೀಗ ಬೆಂಗಳೂರಲ್ಲಿ ಪತ್ತೆಯಾಗಿದೆ. ದೇಶದಲ್ಲಿ ಕೊರೊನಾದ ನಾಲ್ಕನೇ ಅಲೆ ಈಗಾಗಲೇ ಶುರುವಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮಂಜುನಾಥ್​ ಹೇಳಿದ್ದಾರೆ. 

ರಾಜ್ಯದಲ್ಲಿ ಇನ್ನು 3-4ವಾರದಲ್ಲಿ ಕೊರೊನಾ 4ನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಈ ಬಾರಿಯ ಅಲೆಗೆ ಬಿಎ 2 ರೂಪಾಂತರಿ ವೈರಸ್​ ಕಾರಣವಾಗಬಹುದು. ಕೊರೊನಾ 3ನೇ ಅಲೆಯಲ್ಲಿ ಸೋಂಕಿತರು ಯಾವೆಲ್ಲ ಲಕ್ಷಣ ಹೊಂದುತ್ತಿದ್ದರೂ, ಅದೇ ಲಕ್ಷಣಗಳು ನಾಲ್ಕನೇ ಅಲೆಯಲ್ಲಿಯೂ ಗೋಚರಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿಯೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿರುತ್ತದೆ. ಆದರೆ ಸೋಂಕು ವ್ಯಾಪಕವಾಗಿರುತ್ತದೆ ಎಂದೂ ಡಾ. ಮಂಜುನಾಥ್​ ಹೇಳಿದ್ದಾರೆ.

ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು, ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್​ಗಳಲ್ಲಿ ಏರಿಕೆ ಕಂಡುಬರಲಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ  ಶ್ವಾಸಕೋಶ, ಹೃದಯ ಸಮಸ್ಯೆ, ಕ್ಯಾನ್ಸರ್  ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಅತ್ಯಂತ ಜಾಗರೂಕರಾಗಿ ಇರಬೇಕು. ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದಾರೆ. ಜ್ವರ, ಕೆಮ್ಮು-ಶೀತವನ್ನು ನಿರ್ಲಕ್ಷಿಸಬೇಡಿ. ಕೂಡಲೇ ಕೊವಿಡ್​ 19 ಟೆಸ್ಟ್​ಗೆ ಒಳಗಾಗಿ. ಲಸಿಕೆ ತೆಗೆದುಕೊಂಡಿದ್ದೇವೆ. ಏನಾಗುವುದಿಲ್ಲ ಎಂಬ ನಿರ್ಲಕ್ಷವಂತೂ ಬೇಡವೇ ಬೇಡ ಎಂದಿದ್ದಾರೆ.

ಇದನ್ನೂ ಓದಿ: Who Is Tesla Founder: ಟೆಸ್ಲಾ ಸ್ಥಾಪಿಸಿದ್ದು ಮಸ್ಕ್ ಅಲ್ಲ ಎಂಬ ಬೆಂಗಳೂರು ವ್ಯಕ್ತಿಯ ಟ್ವೀಟ್​ಗೆ ಎಲಾನ್ ಉತ್ತರ ಏನು?

Published On - 2:03 pm, Sat, 23 April 22

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ