AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ BA.2 ತಳಿಯ ಎರಡು ಹೊಸ ವೈರಸ್​ ಪತ್ತೆ; ದೇಶದಲ್ಲಿ 4ನೇ ಅಲೆ ಶುರುವಾಗಿದೆ ಎಂದ ಡಾ. ಸಿ ಎನ್​ ಮಂಜುನಾಥ್​

ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು, ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್​ಗಳಲ್ಲಿ ಏರಿಕೆ ಕಂಡುಬರಲಿದೆ ಎಂದು ಡಾ. ಮಂಜುನಾಥ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ BA.2 ತಳಿಯ ಎರಡು ಹೊಸ ವೈರಸ್​ ಪತ್ತೆ; ದೇಶದಲ್ಲಿ 4ನೇ ಅಲೆ ಶುರುವಾಗಿದೆ ಎಂದ ಡಾ. ಸಿ ಎನ್​ ಮಂಜುನಾಥ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 23, 2022 | 2:10 PM

Share

ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ BA.2. 12 ಗಳು ಕಾಣಿಸಿಕೊಂಡಿದ್ದಾಗಿ ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್​.ಮಂಜುನಾಥ್​ ತಿಳಿಸಿದ್ದಾರೆ.  ಬಿಎ.2 ರೂಪಾಂತರಗಳು ದೆಹಲಿ ಮತ್ತು ಮುಂಬೈನಲ್ಲಿ ಕಾಣಿಸಿಕೊಂಡಿದ್ದವು. ಅದೀಗ ಬೆಂಗಳೂರಲ್ಲಿ ಪತ್ತೆಯಾಗಿದೆ. ದೇಶದಲ್ಲಿ ಕೊರೊನಾದ ನಾಲ್ಕನೇ ಅಲೆ ಈಗಾಗಲೇ ಶುರುವಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮಂಜುನಾಥ್​ ಹೇಳಿದ್ದಾರೆ. 

ರಾಜ್ಯದಲ್ಲಿ ಇನ್ನು 3-4ವಾರದಲ್ಲಿ ಕೊರೊನಾ 4ನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಈ ಬಾರಿಯ ಅಲೆಗೆ ಬಿಎ 2 ರೂಪಾಂತರಿ ವೈರಸ್​ ಕಾರಣವಾಗಬಹುದು. ಕೊರೊನಾ 3ನೇ ಅಲೆಯಲ್ಲಿ ಸೋಂಕಿತರು ಯಾವೆಲ್ಲ ಲಕ್ಷಣ ಹೊಂದುತ್ತಿದ್ದರೂ, ಅದೇ ಲಕ್ಷಣಗಳು ನಾಲ್ಕನೇ ಅಲೆಯಲ್ಲಿಯೂ ಗೋಚರಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿಯೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿರುತ್ತದೆ. ಆದರೆ ಸೋಂಕು ವ್ಯಾಪಕವಾಗಿರುತ್ತದೆ ಎಂದೂ ಡಾ. ಮಂಜುನಾಥ್​ ಹೇಳಿದ್ದಾರೆ.

ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು, ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್​ಗಳಲ್ಲಿ ಏರಿಕೆ ಕಂಡುಬರಲಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ  ಶ್ವಾಸಕೋಶ, ಹೃದಯ ಸಮಸ್ಯೆ, ಕ್ಯಾನ್ಸರ್  ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಅತ್ಯಂತ ಜಾಗರೂಕರಾಗಿ ಇರಬೇಕು. ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದಾರೆ. ಜ್ವರ, ಕೆಮ್ಮು-ಶೀತವನ್ನು ನಿರ್ಲಕ್ಷಿಸಬೇಡಿ. ಕೂಡಲೇ ಕೊವಿಡ್​ 19 ಟೆಸ್ಟ್​ಗೆ ಒಳಗಾಗಿ. ಲಸಿಕೆ ತೆಗೆದುಕೊಂಡಿದ್ದೇವೆ. ಏನಾಗುವುದಿಲ್ಲ ಎಂಬ ನಿರ್ಲಕ್ಷವಂತೂ ಬೇಡವೇ ಬೇಡ ಎಂದಿದ್ದಾರೆ.

ಇದನ್ನೂ ಓದಿ: Who Is Tesla Founder: ಟೆಸ್ಲಾ ಸ್ಥಾಪಿಸಿದ್ದು ಮಸ್ಕ್ ಅಲ್ಲ ಎಂಬ ಬೆಂಗಳೂರು ವ್ಯಕ್ತಿಯ ಟ್ವೀಟ್​ಗೆ ಎಲಾನ್ ಉತ್ತರ ಏನು?

Published On - 2:03 pm, Sat, 23 April 22

ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ