AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ BA.2 ತಳಿಯ ಎರಡು ಹೊಸ ವೈರಸ್​ ಪತ್ತೆ; ದೇಶದಲ್ಲಿ 4ನೇ ಅಲೆ ಶುರುವಾಗಿದೆ ಎಂದ ಡಾ. ಸಿ ಎನ್​ ಮಂಜುನಾಥ್​

ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು, ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್​ಗಳಲ್ಲಿ ಏರಿಕೆ ಕಂಡುಬರಲಿದೆ ಎಂದು ಡಾ. ಮಂಜುನಾಥ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ BA.2 ತಳಿಯ ಎರಡು ಹೊಸ ವೈರಸ್​ ಪತ್ತೆ; ದೇಶದಲ್ಲಿ 4ನೇ ಅಲೆ ಶುರುವಾಗಿದೆ ಎಂದ ಡಾ. ಸಿ ಎನ್​ ಮಂಜುನಾಥ್​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 23, 2022 | 2:10 PM

Share

ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ BA.2. 12 ಗಳು ಕಾಣಿಸಿಕೊಂಡಿದ್ದಾಗಿ ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್​.ಮಂಜುನಾಥ್​ ತಿಳಿಸಿದ್ದಾರೆ.  ಬಿಎ.2 ರೂಪಾಂತರಗಳು ದೆಹಲಿ ಮತ್ತು ಮುಂಬೈನಲ್ಲಿ ಕಾಣಿಸಿಕೊಂಡಿದ್ದವು. ಅದೀಗ ಬೆಂಗಳೂರಲ್ಲಿ ಪತ್ತೆಯಾಗಿದೆ. ದೇಶದಲ್ಲಿ ಕೊರೊನಾದ ನಾಲ್ಕನೇ ಅಲೆ ಈಗಾಗಲೇ ಶುರುವಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಮಂಜುನಾಥ್​ ಹೇಳಿದ್ದಾರೆ. 

ರಾಜ್ಯದಲ್ಲಿ ಇನ್ನು 3-4ವಾರದಲ್ಲಿ ಕೊರೊನಾ 4ನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಈ ಬಾರಿಯ ಅಲೆಗೆ ಬಿಎ 2 ರೂಪಾಂತರಿ ವೈರಸ್​ ಕಾರಣವಾಗಬಹುದು. ಕೊರೊನಾ 3ನೇ ಅಲೆಯಲ್ಲಿ ಸೋಂಕಿತರು ಯಾವೆಲ್ಲ ಲಕ್ಷಣ ಹೊಂದುತ್ತಿದ್ದರೂ, ಅದೇ ಲಕ್ಷಣಗಳು ನಾಲ್ಕನೇ ಅಲೆಯಲ್ಲಿಯೂ ಗೋಚರಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಾರಿಯೂ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆಯಾಗಿರುತ್ತದೆ. ಆದರೆ ಸೋಂಕು ವ್ಯಾಪಕವಾಗಿರುತ್ತದೆ ಎಂದೂ ಡಾ. ಮಂಜುನಾಥ್​ ಹೇಳಿದ್ದಾರೆ.

ಈಗಾಗಲೇ ಎಲ್ಲ ನಿರ್ಬಂಧಗಳನ್ನೂ ತೆಗೆದು, ಚಟುವಟಿಕೆಗಳು ಎಂದಿನಂತೆ ಪ್ರಾರಂಭವಾಗಿವೆ. ಹೀಗಾಗಿ ಇನ್ನೆರಡು ವಾರಗಳಲ್ಲಿ ದೈನಂದಿನ ಕೊರೊನಾ ಕೇಸ್​ಗಳಲ್ಲಿ ಏರಿಕೆ ಕಂಡುಬರಲಿದೆ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಅದರಲ್ಲೂ  ಶ್ವಾಸಕೋಶ, ಹೃದಯ ಸಮಸ್ಯೆ, ಕ್ಯಾನ್ಸರ್  ಮತ್ತಿತರ ಕಾಯಿಲೆಗಳಿಂದ ಬಳಲುತ್ತಿರುವವರು ಅತ್ಯಂತ ಜಾಗರೂಕರಾಗಿ ಇರಬೇಕು. ಮಾಸ್ಕ್​ ಕಡ್ಡಾಯವಾಗಿ ಧರಿಸಬೇಕು ಎಂದು ಹೇಳಿದ್ದಾರೆ. ಜ್ವರ, ಕೆಮ್ಮು-ಶೀತವನ್ನು ನಿರ್ಲಕ್ಷಿಸಬೇಡಿ. ಕೂಡಲೇ ಕೊವಿಡ್​ 19 ಟೆಸ್ಟ್​ಗೆ ಒಳಗಾಗಿ. ಲಸಿಕೆ ತೆಗೆದುಕೊಂಡಿದ್ದೇವೆ. ಏನಾಗುವುದಿಲ್ಲ ಎಂಬ ನಿರ್ಲಕ್ಷವಂತೂ ಬೇಡವೇ ಬೇಡ ಎಂದಿದ್ದಾರೆ.

ಇದನ್ನೂ ಓದಿ: Who Is Tesla Founder: ಟೆಸ್ಲಾ ಸ್ಥಾಪಿಸಿದ್ದು ಮಸ್ಕ್ ಅಲ್ಲ ಎಂಬ ಬೆಂಗಳೂರು ವ್ಯಕ್ತಿಯ ಟ್ವೀಟ್​ಗೆ ಎಲಾನ್ ಉತ್ತರ ಏನು?

Published On - 2:03 pm, Sat, 23 April 22

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?