AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವರನಾಡಿನಲ್ಲಿ ಚಿಕ್ಕಮಗಳೂರು ಮೂಲದ ಇಬ್ಬರು ನಕ್ಸಲರ ಎನ್​ಕೌಂಟರ್

ಚಿಕ್ಕಮಗಳೂರು: ದೇವರನಾಡು ಕೇರಳದಲ್ಲಿ ಗುಂಡಿನ ಮೊರೆತ ಕೇಳಿಬಂದಿದೆ. ಖಾಕಿ ಗುಂಡೇಟಿಗೆ ನಾಲ್ವರು ಕೆಂಪು ಉಗ್ರರು ಕಾಡಿನಲ್ಲೇ ರಕ್ತ ಚೆಲ್ಲಿದ್ದಾರೆ. ಅದ್ರಲ್ಲಿ ಇಬ್ಬರು ಕರ್ನಾಟಕದವರು. ಕೆಂಪು ಉಗ್ರರಿಗೂ ಕಾಫಿ ನಾಡು ಚಿಕ್ಕಮಗಳೂರಿಗೂ ಎಲ್ಲಿಲ್ಲದ ನಂಟು. ನಕ್ಸಲ್ ಚಟುವಟಿಕೆ ಎಲ್ಲಿ ಗರಿಗೆದರಿದ್ರೂ ಅದರ ಒಂದು ಕೊಂಡಿ ಮಲೆನಾಡಿಗೆ ಸುತ್ತಿಕೊಂಡಿರುತ್ತೆ. ದೂರದ ಕೇರಳದಲ್ಲಿ ನಾಲ್ವರು ನಕ್ಸಲರನ್ನ ಎನ್​ಕೌಂಟರ್ ಮಾಡಿ ಬಿಸಾಕಲಾಗಿದೆ. ಕೇರಳದಲ್ಲಿ ನಾಲ್ವರು ‘ಕೆಂಪು ಉಗ್ರರ’ ಎನ್​ಕೌಂಟರ್: ಕೇರಳದ ಪಾಲಕ್ಕಾಡ್​ನ ಅಗಲಿ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಿನ್ನೆ ಎನ್​ಕೌಂಟರ್ ನಡೆದಿದೆ. […]

ದೇವರನಾಡಿನಲ್ಲಿ ಚಿಕ್ಕಮಗಳೂರು ಮೂಲದ ಇಬ್ಬರು ನಕ್ಸಲರ ಎನ್​ಕೌಂಟರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 31, 2019 | 2:02 PM

Share

ಚಿಕ್ಕಮಗಳೂರು: ದೇವರನಾಡು ಕೇರಳದಲ್ಲಿ ಗುಂಡಿನ ಮೊರೆತ ಕೇಳಿಬಂದಿದೆ. ಖಾಕಿ ಗುಂಡೇಟಿಗೆ ನಾಲ್ವರು ಕೆಂಪು ಉಗ್ರರು ಕಾಡಿನಲ್ಲೇ ರಕ್ತ ಚೆಲ್ಲಿದ್ದಾರೆ. ಅದ್ರಲ್ಲಿ ಇಬ್ಬರು ಕರ್ನಾಟಕದವರು.

ಕೆಂಪು ಉಗ್ರರಿಗೂ ಕಾಫಿ ನಾಡು ಚಿಕ್ಕಮಗಳೂರಿಗೂ ಎಲ್ಲಿಲ್ಲದ ನಂಟು. ನಕ್ಸಲ್ ಚಟುವಟಿಕೆ ಎಲ್ಲಿ ಗರಿಗೆದರಿದ್ರೂ ಅದರ ಒಂದು ಕೊಂಡಿ ಮಲೆನಾಡಿಗೆ ಸುತ್ತಿಕೊಂಡಿರುತ್ತೆ. ದೂರದ ಕೇರಳದಲ್ಲಿ ನಾಲ್ವರು ನಕ್ಸಲರನ್ನ ಎನ್​ಕೌಂಟರ್ ಮಾಡಿ ಬಿಸಾಕಲಾಗಿದೆ.

ಕೇರಳದಲ್ಲಿ ನಾಲ್ವರು ‘ಕೆಂಪು ಉಗ್ರರ’ ಎನ್​ಕೌಂಟರ್: ಕೇರಳದ ಪಾಲಕ್ಕಾಡ್​ನ ಅಗಲಿ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಿನ್ನೆ ಎನ್​ಕೌಂಟರ್ ನಡೆದಿದೆ. ಕಾರ್ಯಾಚರಣೆ ವೇಳೆ ನಕ್ಸಲ್​ ನಿಗ್ರಹ ದಳ ಹಾಗೂ ಥಂಡರ್​ಬೋಲ್ಟ್​ ಟೀಂ ನಾಲ್ವರು ನಕ್ಸಲರನ್ನ ಹೊಡೆದುರುಳಿಸಲಾಗಿದೆ. ಈ ವೇಳೆ ಕರ್ನಾಟಕದ. ಅದ್ರಲ್ಲೂ ಚಿಕ್ಕಮಗಳೂರು ಮೂಲದ ನಕ್ಸಲರಾದ ಸುರೇಶ್ ಹಾಗೂ ಶ್ರೀಮತಿ ಎಂಬುವವರು ಕೂಡ ಫಿನಿಶ್ ಆಗಿದ್ದಾರೆ.

ಎನ್​ಕೌಂಟರ್​ನಲ್ಲಿ ಹತನಾದ ಸುರೇಶ್ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದವನು. ಅಸಮಾನತೆ ವಿರುದ್ಧ ದನಿ ಎತ್ತಿದ್ದ ಸುರೇಶ್​ 20 ವರ್ಷಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಹೋಗ್ತೀನಿ ಅಂತ ಮನೆ ಬಿಟ್ಟಿದ್ದ. ಅದಾದ ನಂತರ ಮತ್ತೆ ಮನೆ ಕಡೆ ಮುಖ ಮಾಡಲೇ ಇಲ್ಲ. ಈತ 2004ರಿಂದ ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ. ಸುರೇಶ್ ವಿರುದ್ಧ ವಿವಿಧ ಠಾಣೆಗಳಲ್ಲಿ 21ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಓದಿನಲ್ಲಿ ಮುಂದಿದ್ದ ಸುರೇಶ್ ಬಿ.ಎ.ವರೆಗೆ ವ್ಯಾಸಂಗ ಮಾಡಿದ್ದಾನೆ.

ಇನ್ನು ಶ್ರೀಮತಿ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಬೆಳಗೋಡು ಗ್ರಾಮದವಳು. ಎಸ್​ಎಸ್​ಎಲ್​ಸಿ ಫೇಲಾದ ಬಳಿಕ ಶೋಷಿತರ ಪರ ಈಕೆ ದನಿ ಎತ್ತಿದ್ದಳು. 2008ರಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಕೊಂಡಿರೋ ಶ್ರೀಮತಿ ವಿರುದ್ಧ 9ಕ್ಕೂ ಹೆಚ್ಚು ಪ್ರಕರಣಗಳಿವೆ.

ಎನ್​ಕೌಂಟರ್​ನಲ್ಲಿ ಸುರೇಶ್​ ಹತನಾದ ವಿಚಾರ ಗೊತ್ತಾಗುತ್ತಿದ್ದಂತೇ ಅವನ ಮನೆಯವರಿಗೆ ಶಾಕ್ ಆಗಿದೆ. ಮನೆ ಬಿಟ್ಟು ಹೋದ ಸುರೇಶ್ ಸತ್ತು ಹೋಗಿದ್ದಾನೆ ಅಂತ ಮನೆಯವರು ಅಂದುಕೊಂಡಿದ್ರು. ಆದ್ರೀಗ ಎನ್​ಕೌಂಟರ್ ವಿಚಾರ ತಿಳಿದು ನೋವಿನ ಕಡಲಲ್ಲಿ ಮುಳುಗಿದ್ದಾರೆ.

ಕಾಫಿ ನಾಡು ಚಿಕ್ಕಮಗಳೂರಲ್ಲಿ ಚುರುಕುಗೊಂಡ ಕೂಂಬಿಂಗ್: ಮಲೆನಾಡಿನ ಇಬ್ಬರು ನಕ್ಸಲರು ಕೇರಳದಲ್ಲಿ ಎನ್​ಕೌಂಟರ್ ಆಗುತ್ತಿದ್ದಂತೇ ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಕೂಂಬಿಂಗ್ ಕಾರ್ಯಾಚರಣೆ ಚುರುಕುಗೊಂಡಿದೆ. ಕೊಪ್ಪ, ಶೃಂಗೇರಿ ತಾಲೂಕಿನ ಕೆಲ ಪ್ರದೇಶಗಳಲ್ಲಿ ನಕ್ಸಲ್ ನಿಗ್ರಹ ದಳ ಹಾಗೂ ಪೊಲೀಸರು ಕೆಂಪು ಉಗ್ರರಿಗಾಗಿ ಶೋಧ ನಡೆಸ್ತಿದ್ದಾರೆ.

Published On - 9:14 pm, Tue, 29 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?