AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲಿಯೂ ಪತ್ತೆಯಾಗುತ್ತಿದೆ ಬ್ಲ್ಯಾಕ್ ಫಂಗಸ್; ಮೆದುಳಿಗೆ ಅಟ್ಯಾಕ್, ನಿಮ್ಹಾನ್ಸ್ನಲ್ಲಿ ಇಬ್ಬರು ಬಾಲಕರಿಗೆ ಚಿಕಿತ್ಸೆ

ಕೊರೊನಾ ಆಯ್ತು ಈಗ ಬ್ಲ್ಯಾಕ್ ಫಂಗಸ್ ಸೋಂಕು ಕೂಡ ಮಕ್ಕಳಿಗೆ ಹರಡಿದೆ. ನಗರದಲ್ಲಿ 14 ವರ್ಷದ ಬಾಲಕ ಮತ್ತು 11 ವರ್ಷದ ಬಾಲಕನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಚಿತ್ರದುರ್ಗದ 11 ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ...

ಮಕ್ಕಳಲ್ಲಿಯೂ ಪತ್ತೆಯಾಗುತ್ತಿದೆ ಬ್ಲ್ಯಾಕ್ ಫಂಗಸ್; ಮೆದುಳಿಗೆ ಅಟ್ಯಾಕ್, ನಿಮ್ಹಾನ್ಸ್ನಲ್ಲಿ ಇಬ್ಬರು ಬಾಲಕರಿಗೆ ಚಿಕಿತ್ಸೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: May 30, 2021 | 2:05 PM

Share

ಬೆಂಗಳೂರು: ರಾಜ್ಯದಲ್ಲಿ ಮಕ್ಕಳಿಗೂ ಕೊರೊನಾ ಸೋಂಕು ತಗುಲಿರುವುದರ ಬಗ್ಗೆ ವರದಿಯಾಗುತ್ತಿದೆ. ಇದರ ನಡುವೆ ಈಗ ಮತ್ತೊಂದು ಸಂಗತಿ ಪೋಷಕರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಇಬ್ಬರು ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಮಕ್ಕಳು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಆಯ್ತು ಈಗ ಬ್ಲ್ಯಾಕ್ ಫಂಗಸ್ ಸೋಂಕು ಕೂಡ ಮಕ್ಕಳಿಗೆ ಹರಡಿದೆ. ನಗರದಲ್ಲಿ 14 ವರ್ಷದ ಬಾಲಕ ಮತ್ತು 11 ವರ್ಷದ ಬಾಲಕನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಚಿತ್ರದುರ್ಗದ 11 ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೋರ್ವ ಬಳ್ಳಾರಿಯ ನಿವಾಸಿಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬ್ಲ್ಯಾಕ್ ಫಂಗಸ್ ಇಬ್ಬರಿಗೂ ಮೆದುಳಿಗೆ ಅಟ್ಯಾಕ್ ಮಾಡಿದೆ.

ಚಿತ್ರದುರ್ಗದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ‌ ಕಾರಣ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಇಲ್ಲಿವರೆಗೂ ವಯಸ್ಕರಲ್ಲಿ ಕಾಣಿಸಿಕೊಳ್ತಿದ್ದ ಬ್ಲ್ಯಾಕ್ ಫಂಗಸ್ ಈಗ ಮಕ್ಕಳಲ್ಲಿಯೂ ಪತ್ತೆಯಾಗುತ್ತಿದ್ದು ಆತಂಕದ ಸಂಗತಿಯಾಗಿದೆ. ಸದ್ಯ ಈ ಬಗ್ಗೆ ಸರ್ಕಾರದ ಬ್ಲ್ಯಾಕ್ ಫಂಗಸ್ ಟಾಸ್ಕ್‌ಫೋರ್ಸ್‌ ಸದಸ್ಯೆ, ಮಿಂಟೋ‌ ಆಸ್ಪತ್ರೆ ನಿರ್ದೇಶಕಿ ಡಾ.ಸುಜಾತಾ ಮಾಹಿತಿ ನೀಡಿದ್ದಾರೆ.

18 ತಿಂಗಳ ಮಗುವಿನಲ್ಲೂ ಬ್ಲ್ಯಾಕ್ ಫಂಗಸ್ ಇನ್ನು ಈ ಹಿಂದೆ ರಾಜಸ್ಥಾನದ ಬಿಕಾನೇರ್ನಲ್ಲಿ ಮೊಟ್ಟ ಮೊದಲ ಬಾರಿಗೆ 18 ತಿಂಗಳ ಮಗುವಿನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿತ್ತು. ಮಕ್ಕಳಿಗೂ ಬ್ಲ್ಯಾಕ್ ಫಂಗಸ್ ಪತ್ತೆಯಾದ ದೇಶದ ಮೊದಲ ಪ್ರಕರಣ ಇದಾಗಿದೆ.

ಇದನ್ನೂ ಓದಿ:ಮಕ್ಕಳಿಗೂ ಬಂತು ಕೊರೊನಾ, ರಾಯಚೂರಿನಲ್ಲಿ 522 ಮಕ್ಕಳು ಪಾಸಿಟಿವ್ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್