AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳಲ್ಲಿಯೂ ಪತ್ತೆಯಾಗುತ್ತಿದೆ ಬ್ಲ್ಯಾಕ್ ಫಂಗಸ್; ಮೆದುಳಿಗೆ ಅಟ್ಯಾಕ್, ನಿಮ್ಹಾನ್ಸ್ನಲ್ಲಿ ಇಬ್ಬರು ಬಾಲಕರಿಗೆ ಚಿಕಿತ್ಸೆ

ಕೊರೊನಾ ಆಯ್ತು ಈಗ ಬ್ಲ್ಯಾಕ್ ಫಂಗಸ್ ಸೋಂಕು ಕೂಡ ಮಕ್ಕಳಿಗೆ ಹರಡಿದೆ. ನಗರದಲ್ಲಿ 14 ವರ್ಷದ ಬಾಲಕ ಮತ್ತು 11 ವರ್ಷದ ಬಾಲಕನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಚಿತ್ರದುರ್ಗದ 11 ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ...

ಮಕ್ಕಳಲ್ಲಿಯೂ ಪತ್ತೆಯಾಗುತ್ತಿದೆ ಬ್ಲ್ಯಾಕ್ ಫಂಗಸ್; ಮೆದುಳಿಗೆ ಅಟ್ಯಾಕ್, ನಿಮ್ಹಾನ್ಸ್ನಲ್ಲಿ ಇಬ್ಬರು ಬಾಲಕರಿಗೆ ಚಿಕಿತ್ಸೆ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on: May 30, 2021 | 2:05 PM

Share

ಬೆಂಗಳೂರು: ರಾಜ್ಯದಲ್ಲಿ ಮಕ್ಕಳಿಗೂ ಕೊರೊನಾ ಸೋಂಕು ತಗುಲಿರುವುದರ ಬಗ್ಗೆ ವರದಿಯಾಗುತ್ತಿದೆ. ಇದರ ನಡುವೆ ಈಗ ಮತ್ತೊಂದು ಸಂಗತಿ ಪೋಷಕರಲ್ಲಿ ಆತಂಕ ಹೆಚ್ಚಾಗುವಂತೆ ಮಾಡಿದೆ. ಇಬ್ಬರು ಮಕ್ಕಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಮಕ್ಕಳು ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಆಯ್ತು ಈಗ ಬ್ಲ್ಯಾಕ್ ಫಂಗಸ್ ಸೋಂಕು ಕೂಡ ಮಕ್ಕಳಿಗೆ ಹರಡಿದೆ. ನಗರದಲ್ಲಿ 14 ವರ್ಷದ ಬಾಲಕ ಮತ್ತು 11 ವರ್ಷದ ಬಾಲಕನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಚಿತ್ರದುರ್ಗದ 11 ವರ್ಷದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದ್ದು ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೋರ್ವ ಬಳ್ಳಾರಿಯ ನಿವಾಸಿಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬ್ಲ್ಯಾಕ್ ಫಂಗಸ್ ಇಬ್ಬರಿಗೂ ಮೆದುಳಿಗೆ ಅಟ್ಯಾಕ್ ಮಾಡಿದೆ.

ಚಿತ್ರದುರ್ಗದ ಬಾಲಕನಿಗೆ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡ‌ ಕಾರಣ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಇಲ್ಲಿವರೆಗೂ ವಯಸ್ಕರಲ್ಲಿ ಕಾಣಿಸಿಕೊಳ್ತಿದ್ದ ಬ್ಲ್ಯಾಕ್ ಫಂಗಸ್ ಈಗ ಮಕ್ಕಳಲ್ಲಿಯೂ ಪತ್ತೆಯಾಗುತ್ತಿದ್ದು ಆತಂಕದ ಸಂಗತಿಯಾಗಿದೆ. ಸದ್ಯ ಈ ಬಗ್ಗೆ ಸರ್ಕಾರದ ಬ್ಲ್ಯಾಕ್ ಫಂಗಸ್ ಟಾಸ್ಕ್‌ಫೋರ್ಸ್‌ ಸದಸ್ಯೆ, ಮಿಂಟೋ‌ ಆಸ್ಪತ್ರೆ ನಿರ್ದೇಶಕಿ ಡಾ.ಸುಜಾತಾ ಮಾಹಿತಿ ನೀಡಿದ್ದಾರೆ.

18 ತಿಂಗಳ ಮಗುವಿನಲ್ಲೂ ಬ್ಲ್ಯಾಕ್ ಫಂಗಸ್ ಇನ್ನು ಈ ಹಿಂದೆ ರಾಜಸ್ಥಾನದ ಬಿಕಾನೇರ್ನಲ್ಲಿ ಮೊಟ್ಟ ಮೊದಲ ಬಾರಿಗೆ 18 ತಿಂಗಳ ಮಗುವಿನಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿತ್ತು. ಮಕ್ಕಳಿಗೂ ಬ್ಲ್ಯಾಕ್ ಫಂಗಸ್ ಪತ್ತೆಯಾದ ದೇಶದ ಮೊದಲ ಪ್ರಕರಣ ಇದಾಗಿದೆ.

ಇದನ್ನೂ ಓದಿ:ಮಕ್ಕಳಿಗೂ ಬಂತು ಕೊರೊನಾ, ರಾಯಚೂರಿನಲ್ಲಿ 522 ಮಕ್ಕಳು ಪಾಸಿಟಿವ್ 

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!