AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕೊರೊನಾಗೆ ತಂದೆ-ತಾಯಿ ಬಲಿ, ಅನಾಥರಾದ ಇಬ್ಬರು ಮ್ಕಕಳು

ಮೈಸೂರಿನಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. 10 ದಿನದ ಅಂತರದಲ್ಲಿ ಅಪ್ಪ ಹಾಗೂ ಅಮ್ಮ ಇಬ್ಬರೂ ಕೊರೊನಾಗೆ ಬಲಿಯಾಗಿದ್ದಾರೆ. ಮೈಸೂರು ವಿವಿ ಗುತ್ತಿಗೆ ನೌಕರ ಪ್ರಸನ್ನ ಹಾಗೂ ಪತ್ನಿ ಸುಷ್ಮಾ ಕೊರೊನಾದಿಂದ ಮೃತಪಟ್ಟಿದ್ದು ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ.

ಮೈಸೂರು: ಕೊರೊನಾಗೆ ತಂದೆ-ತಾಯಿ ಬಲಿ, ಅನಾಥರಾದ ಇಬ್ಬರು ಮ್ಕಕಳು
ಸಾಂಕೇತಿಕ ಚಿತ್ರ
ಆಯೇಷಾ ಬಾನು
|

Updated on: May 30, 2021 | 9:49 AM

Share

ಮೈಸೂರು: ಕೊರೊನಾ ಸೋಂಕಿಗೆ ಜನ ನರಳಿ ನರಳಿ ಪ್ರಾಣ ಬಿಡ್ತಿದ್ದಾರೆ. ಕೊರೊನಾ ವೈರಸ್‌ ಕೇವಲ ಜೀವವನ್ನ ಮಾತ್ರ ತೆಗೆಯುತ್ತಿಲ್ಲ, ಅದೆಷ್ಟೋ ಮಕ್ಕಳ ಭವಿಷ್ಯಕ್ಕೆ ಮಾರಕವಾಗಿದೆ. ಕೈ ಹಿಡಿದು ನಡೆಸೋರನ್ನ ಕಳೆದುಕೊಂಡು ಮಕ್ಕಳು ಅನಾಥರಾಗಿದ್ದಾರೆ. ಹೆಮ್ಮಾರಿ ಕೊರೊನಾ ಚಿಕ್ಕ ಚಿಕ್ಕ ಮಕ್ಕಳಿಂದ ತಂದೆ, ತಾಯಿಯನ್ನ ಕಿತ್ತುಕೊಂಡಿದೆ. ಮೈಸೂರಿನಲ್ಲಿ ಕೊರೊನಾದಿಂದಾಗಿ ಮುದ್ದಾದ ಮಕ್ಕಳು ತಬ್ಬಲಿಯಾಗಿದ್ದಾರೆ.

ಮೈಸೂರಿನಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. 10 ದಿನದ ಅಂತರದಲ್ಲಿ ಅಪ್ಪ ಹಾಗೂ ಅಮ್ಮ ಇಬ್ಬರೂ ಕೊರೊನಾಗೆ ಬಲಿಯಾಗಿದ್ದಾರೆ. ಮೈಸೂರು ವಿವಿ ಗುತ್ತಿಗೆ ನೌಕರ ಪ್ರಸನ್ನ ಹಾಗೂ ಪತ್ನಿ ಸುಷ್ಮಾ ಕೊರೊನಾದಿಂದ ಮೃತಪಟ್ಟಿದ್ದು ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ.

ಕೊರೊನಾ ದೃಢಪಡುತ್ತಿದ್ದಂತೆ ಮೈಸೂರಿನ ಗಂಗ್ರೋತ್ರಿ ಬಡಾವಣೆ ಮನೆಯಲ್ಲಿ ಪ್ರಸನ್ನ ಕ್ವಾರಂಟೈನ್ ಆಗಿದ್ದರು. ಗಂಡನನ್ನ ನೋಡಿಕೊಳ್ಳುವಾಗ ಪತ್ನಿಗೂ ಸೋಂಕು ತಗುಲಿದೆ. ಬಳಿಕ ಮೇ 18ರಂದು ಕೊರೊನಾಗೆ ಮೊದಲು ಸುಷ್ಮಾ ಬಲಿಯಾಗಿದ್ದಾರೆ. ಬಳಿಕ ಉಸಿರಾಟದ ತೊಂದರೆಯಿಂದ ಪ್ರಸನ್ನ ಆಸ್ಪತ್ರೆಗೆ ದಾಖಲಾದ್ರು. ಮೇ 28ರಂದು ಚಿಕಿತ್ಸೆ ಫಲಿಸದೆ ಪ್ರಸನ್ನ ಕೂಡ ನಿಧನರಾಗಿದ್ದಾರೆ. ದಂಪತಿ ಸಾವಿನಿಂದ ಇಬ್ಬರು ಮಕ್ಕಳು ಈಗ ತಬ್ಬಲಿಯಾಗಿದ್ದಾರೆ.

18 ವರ್ಷ ವಯಸ್ಸಿನ ಹರ್ಷ ಹಾಗೂ 16 ವರ್ಷದ ನಯನ ಈಗ ಪೋಷಕರನ್ನು ಕಳೆದುಕೊಂಡಿದ್ದಾರೆ. ತಾಯಿ ತವರು ಮನೆಯಲ್ಲಿದ್ದ ಕಾರಣ ಇಬ್ಬರೂ ಮಕ್ಕಳು ಕೊರೊನಾದಿಂದ ಪಾರಾಗಿದ್ದಾರೆ. ಸದ್ಯ ಹುಣಸೂರಿನ ತಾಯಿ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ಇದನ್ನೂ ಓದಿ: ಮಂಡ್ಯ: 15 ದಿನದ ಅಂತರದಲ್ಲಿ ತಂದೆ, ತಾಯಿ ಕೊರೊನಾಗೆ ಬಲಿ; ತಬ್ಬಲಿಯಾದ 5 ದಿನದ ಮಗು

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್