
ಕಲಬುರಗಿ: ಜಿಲ್ಲಾ ಕೇಂದ್ರ ಕಲಬುರಗಿಯ ಕೈಲಾಶ್ ನಗರದಲ್ಲಿ ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಇಳಿದಿದ್ದ ಇಬ್ಬರು ಸಾವಿಗೀಡಾಗಿರುವ ದುರಂತ ಸಂಭವಿಸಿದೆ. ಜಲಮಂಡಳಿ ನಿರ್ಲಕ್ಷ್ಯಕ್ಕೆ ಇಬ್ಬರು ಗುತ್ತಿಗೆ ಕಾರ್ಮಿಕರು ಬಲಿಯಾಗಿದ್ದಾರೆ.
18 ಅಡಿ ಆಳದಲ್ಲಿ ಇಳಿದು ಕೆಲಸ ಮಾಡುತ್ತಿದ್ದ ಈ ಸಿಬ್ಬಂದಿ ಅಲ್ಲಿಯೇ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಕಲಬುರಗಿ ಜಲ ಮಂಡಳಿಯಲ್ಲಿ ಗುತ್ತಿಗೆ ಕಾರ್ಮಿಕರಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು.
Published On - 5:45 pm, Thu, 28 January 21