AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರದ ಪುಂಡರಿಬ್ಬರಿಗೆ ಸೋಂಕು, ರಾತ್ರೋರಾತ್ರಿ ಶಿಫ್ಟ್!

ರಾಮನಗರ: ಬೆಂಗಳೂರಿನ ಪಾದರಾಯನಪುರದಲ್ಲಿ ಪುಂಡಾಟ ಮೆರೆದು ರಾಮನಗರ ಜೈಲು ಸೇರಿರೋ ಆರೋಪಿಗಳಿಂದ ಆತಂಕಕಾರಿ ವಿಷ್ಯ ಹೊರಬಿದ್ದಿದೆ. ಜೈಲಿನಲ್ಲಿರೋ ಆರೋಪಿಗಳಿಬ್ಬರಿಗೆ ಮಹಾಮಾರಿ ವಕ್ಕರಿಸಿರೋದು ಬೆಳಕಿಗೆ ಬಂದಿದೆ. ರಾಮನಗರ ಜೈಲು ಬಳಿ ದೊಡ್ಡ ರಾದ್ಧಾಂತವೇ ನಡೆದೋಗಿದೆ. ಸರ್ಕಾರದ ವಿರುದ್ಧ ಜೈಲು ಸಿಬ್ಬಂದಿಯೇ ತಿರುಗಿ ಬಿದ್ದಿದ್ದಾರೆ. ರಾಮನಗರ ಜೈಲಿನಲ್ಲಿದ್ದ ಆರೋಪಿಗಳಿಬ್ಬರಿಗೆ ಕೊರೊನಾ! ಪಾದರಾಯನಪುರದಲ್ಲಿ ಗಲಾಟೆ ಮಾಡಿದವ್ರನ್ನ ಒಂದೇ ದಿನದಲ್ಲಿ ಅರೆಸ್ಟ್ ಮಾಡಲಾಯ್ತು. ಮೊನ್ನೆ ಮೊದಲ ಹಂತದಲ್ಲಿ 49 ಮಂದಿಯನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ರೆ, 2ನೇ ಹಂತದಲ್ಲಿ 72 ಮಂದಿಯನ್ನ ಸ್ಥಳಾಂತರಿಸಲಾಯ್ತು. […]

ರಾಮನಗರ ಜೈಲಿನಲ್ಲಿದ್ದ ಪಾದರಾಯನಪುರದ ಪುಂಡರಿಬ್ಬರಿಗೆ ಸೋಂಕು, ರಾತ್ರೋರಾತ್ರಿ ಶಿಫ್ಟ್!
ಸಾಧು ಶ್ರೀನಾಥ್​
|

Updated on:Apr 24, 2020 | 10:41 AM

Share

ರಾಮನಗರ: ಬೆಂಗಳೂರಿನ ಪಾದರಾಯನಪುರದಲ್ಲಿ ಪುಂಡಾಟ ಮೆರೆದು ರಾಮನಗರ ಜೈಲು ಸೇರಿರೋ ಆರೋಪಿಗಳಿಂದ ಆತಂಕಕಾರಿ ವಿಷ್ಯ ಹೊರಬಿದ್ದಿದೆ. ಜೈಲಿನಲ್ಲಿರೋ ಆರೋಪಿಗಳಿಬ್ಬರಿಗೆ ಮಹಾಮಾರಿ ವಕ್ಕರಿಸಿರೋದು ಬೆಳಕಿಗೆ ಬಂದಿದೆ. ರಾಮನಗರ ಜೈಲು ಬಳಿ ದೊಡ್ಡ ರಾದ್ಧಾಂತವೇ ನಡೆದೋಗಿದೆ. ಸರ್ಕಾರದ ವಿರುದ್ಧ ಜೈಲು ಸಿಬ್ಬಂದಿಯೇ ತಿರುಗಿ ಬಿದ್ದಿದ್ದಾರೆ.

ರಾಮನಗರ ಜೈಲಿನಲ್ಲಿದ್ದ ಆರೋಪಿಗಳಿಬ್ಬರಿಗೆ ಕೊರೊನಾ! ಪಾದರಾಯನಪುರದಲ್ಲಿ ಗಲಾಟೆ ಮಾಡಿದವ್ರನ್ನ ಒಂದೇ ದಿನದಲ್ಲಿ ಅರೆಸ್ಟ್ ಮಾಡಲಾಯ್ತು. ಮೊನ್ನೆ ಮೊದಲ ಹಂತದಲ್ಲಿ 49 ಮಂದಿಯನ್ನ ರಾಮನಗರ ಜೈಲಿಗೆ ಶಿಫ್ಟ್ ಮಾಡಿದ್ರೆ, 2ನೇ ಹಂತದಲ್ಲಿ 72 ಮಂದಿಯನ್ನ ಸ್ಥಳಾಂತರಿಸಲಾಯ್ತು. ಆದ್ರೆ ಮೊದ್ಲ ಹಂತದಲ್ಲಿ ಶಿಫ್ಟ್ ಮಾಡಲಾಗಿದ್ದ 49 ಮಂದಿಯ ಪೈಕಿ ಇಬ್ಬರಿಗೆ ಕೊರೊನಾ ಸೋಂಕು ಬಂದಿರೋದು ದೃಢವಾಗಿದೆ.

ಜೈಲಿಗೆ ಶಿಫ್ಟ್ ಮಾಡೋ ಮೊದ್ಲೆ ಆರೋಪಿಗಳ ರಕ್ತದ ಮಾದರಿಯನ್ನ ಲ್ಯಾಬ್​ಗೆ ಕಳುಹಿಸಲಾಗಿತ್ತು. ಸದ್ಯ ವರದಿ ಬಂದಿದ್ದು ಆರೋಪಿಗಳಿಬ್ಬರಿಗೆ ಸೋಂಕು ಇರೋದು ಪತ್ತೆಯಾಗಿದೆ. ಹೀಗಾಗಿ ಮಧ್ಯರಾತ್ರಿ 2 ಗಂಟೆಗೆ ಸೋಂಕಿತರಿಬ್ಬರನ್ನ ಌಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಖಾಕಿ ಟೈಟ್ ಸೆಕ್ಯೂರಿಟಿಯಲ್ಲಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ತುರ್ತು ಸಭೆ ನಡೆಸಿದ ರಾಮನಗರದ ಡಿಸಿ! ಆರೋಪಿಗಳಿಗೆ ಸೋಂಕು ಪತ್ತೆಯಾಗಿದ್ದೇ ತಡ ರಾಮನಗರದ ಡಿಸಿ ಫುಲ್ ಅಲರ್ಟ್​ ಆಗಿದ್ದಾರೆ. ಎಸ್​ಪಿ ಅನೂಪ್ ಶೆಟ್ಟಿ, ಡಿಹೆಚ್​ಒ ಜೊತೆ ಜಿಲ್ಲಾಧಿಕಾರಿ ಎಂ.ಎಸ್ ಅರ್ಚನಾ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದ್ರು.

ರಾಮನಗರ ಜೈಲು ಸಿಬ್ಬಂದಿಗೂ ಕ್ವಾರಂಟೈನ್? ಜೈಲಿನಲ್ಲಿದ್ದ ಆರೋಪಿಗಳಿಗೆ ಹೆಮ್ಮಾರಿ ವಕ್ಕರಿಸಿದ್ದಕ್ಕೆ ಜೈಲು ಸಿಬ್ಬಂದಿಗೂ ಕ್ವಾರಂಟೈನ್ ವಿಧಿಸೋ ಸಾಧ್ಯತೆಯಿದೆ. ಇದನ್ನ ಖಂಡಿಸಿ ನಿನ್ನೆ ರಾತ್ರಿ ರಾಮನಗರ ಜೈಲು ಸಿಬ್ಬಂದಿ ಪ್ರತಿಭಟನೆ ನಡೆಸಿದ್ರು. ಕಿಡಿಗೇಡಿಗಳನ್ನ ಕರೆ ತರೋ ಮುನ್ನ ನಮ್ಮನ್ನ ಒಂದು ಮಾತು ಕೇಳಲಿಲ್ಲ. ಎಲ್ರನ್ನೂ ಕರೆತಂದು ನಮ್ಮ ಜೀವ ತೆಗೀತಿದ್ದೀರಿ ಅಂತಾ ಕಿಡಿಕಾರಿದ್ರು. ಹೀಗಾಗಿ ಜೈಲಿನ‌ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.

Published On - 6:41 am, Fri, 24 April 20

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ