AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dengue: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವು

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶರವೇಗದಲ್ಲಿ ಏರಿಕೆಯಾಗುತ್ತಿದೆ. ಜನ ಡೆಂಗ್ಯೂ ಕಪಿಮುಷ್ಟಿಯಲ್ಲಿ ವಿಲವಿಲ ಒದ್ದಾಡುತ್ತಿದ್ದಾರೆ. ಏರಿಯಾ ಏರಿಯಾದಲ್ಲೂ ಡೆಂಗ್ಯೂ ತಾಂಡವವಾಗ್ತಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಹಾಗೂ 27 ವರ್ಷದ ಯುವಕ ಡೆಂಗ್ಯೂಗೆ ಬಲಿಯಾಗಿದ್ದಾರೆ ಅನ್ನೋ ಮಾಹಿತಿ ಟಿವಿ 9ಗೆ ಲಭ್ಯವಾಗಿದೆ.

Dengue: ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವು
ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರಕ್ಕೆ ಇಬ್ಬರು ಸಾವು
ಶಾಂತಮೂರ್ತಿ
| Edited By: |

Updated on:Jun 28, 2024 | 9:24 PM

Share

ಬೆಂಗಳೂರು, ಜೂನ್​ 28: ಡೆಂಗ್ಯೂ ಜ್ವರಕ್ಕೆ (dengue fever) ನಗರದಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಬಿಬಿಎಂಪಿ ಪೂರ್ವ ವಲಯದಲ್ಲಿ 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ ಮೃತಪಟ್ಟಿದ್ದಾರೆ (death). ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ. ಈ ಕುರಿತಾಗಿ ಟಿವಿ9ಗೆ ಬಿಬಿಎಂಪಿ ಮೂಲಗಳಿಂದ ಮಾಹಿತಿ ನೀಡಲಾಗಿದೆ. ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ ಬೆಂಗಳೂರಿನಲ್ಲಿ ಸಂಭವಿಸಿದೆ.

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಗ್ಯೂ ಓಟ ಜೋರಾಗಿದೆ. ಕಳೆದ ವರ್ಷದ ಜೂನ್‌ ತಿಂಗಳಿಗೆ ಹೋಲಿಸಿದರೆ ಈ ವರ್ಷ ಜೂನ್ ತಿಂಗಳಿನಲ್ಲಿ ದುಪ್ಪಟ್ಟು ಕೇಸ್‌ಗಳು ಬೆಂಗಳೂರಿನಲ್ಲೇ ಪತ್ತೆಯಾಗಿದ್ದವು.

ಸಾವಿನ ಜತೆಗೆ ಬೆಂಗಳೂರಿನಲ್ಲೂ ಡೆಂಗ್ಯೂ ಕೇಸ್​​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲೇ 2457 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಕೂಡ ಜಾಗ್ರತೆಯಿಂದ ಇರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Dengue cases in Karnataka: ಕರ್ನಾಟಕದಾದ್ಯಂತ ಡೆಂಗ್ಯೂ ಕೇಕೆ: ಈ ಬಾರಿ ಕಳೆದ ವರ್ಷಕ್ಕಿಂತ ದುಪ್ಪಟ್ಟು ಪ್ರಕರಣ, ಇಲ್ಲಿದೆ ವಿವರ

ಸದ್ಯ ಡೆಂಗ್ಯೂ ಆರ್ಭಟ ಬಿಬಿಎಂಪಿಗೆ ನಿದ್ದೆಗೆಡಿಸಿದೆ. ಮನೆ ಸರ್ವೇ ನಡೆಸಿ, ಡೆಂಗ್ಯೂ ಓಟಕ್ಕೆ ಬ್ರೇಕ್ ಹಾಕಲು ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 14 ಲಕ್ಷ ಮನೆಗಳ ಸರ್ವೇಗೆ ಟಾಸ್ಕ್ ನೀಡಲಾಗಿದೆ. ಬಿಬಿಎಂಪಿ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಪ್ರತಿ ಶುಕ್ರವಾರ ಮನೆಗಳಿಗೆ ಭೇಟಿ ನೀಡಿ, ಸೊಳ್ಳೆಗಳ ಲಾರ್ವಾ ಪತ್ತೆ ಹಚ್ಚುತ್ತಿದ್ದಾರೆ. ಮನೆಯ ಅಕ್ಕ-ಪಕ್ಕ ನೀರು ನಿಲ್ಲದಂತೆ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ಪಾಲಿಕೆ ಟೀಮ್​ನ ಜೊತೆ ನರ್ಸಿಂಗ್ ಸ್ಟೂಡೆಂಟ್ಸ್, ಸ್ವಯಂ ಸೇವಕರು ಕೈ ಜೋಡಿಸಿದ್ದಾರೆ.

ಇದನ್ನೂ ಓದಿ: ಹಾವೇರಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ? ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಕಿಡಿ

ರಾಜ್ಯದಲ್ಲಿಗ ಸುಮಾರು 5187 ಡೆಂಗ್ಯೂ ಕೇಸ್​ಗಳಿವೆ. ಬೆಂಗಳೂರಿನಲ್ಲಂತೂ ಡೆಂಗ್ಯೂ ಸ್ಫೋಟವೇ ಆಗಿದೆ. ಹಾವೇರಿ, ಮೈಸೂರು ಸೇರಿದಂತೆ ಜಿಲ್ಲೆ ಜಿಲ್ಲೆಯಲ್ಲೂ ಜನ ಡೆಂಗ್ಯೂಯಿಂದ ಬಳಲುತ್ತಿದ್ದಾರೆ. ಆಸ್ಪತ್ರೆಯಲ್ಲಿ ನರಳಾಡ್ತಿದ್ದಾರೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆಯಂತೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Fri, 28 June 24

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ