AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಲ್ಲರ್ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಟಿಕ್ಕಿಗಳ ಸಾವು; ಹುಟ್ಟಿದ ಆಸ್ಪತ್ರೆಯಲ್ಲೇ ಮಗ ಸಾವು ಎಂದು ಪೋಷಕರ ಕಣ್ಣೀರು

ಐಟಿಪಿಎಲ್​​ನ TCS​ನಲ್ಲಿ ಕೆಲಸ ಮಾಡ್ತಿದ್ದ ಪ್ರಶಾಂತ್ ಹಾಗೂ ಶಿಲ್ಪಾ ಎಂಬ ಯುವಕ-ಯುವತಿ ಭಾನುವಾರ ರಾತ್ರಿ ಊಟಕ್ಕೆ ಎಂದು ಬೈಕ್​ನಲ್ಲಿ ತೆರಳುತ್ತಿದ್ದಾಗ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ನನ್ನ ಮಗ ಇದೇ ಮಾರ್ಥಾಸ್ ಆಸ್ಪತ್ರೆಯಲ್ಲಿ ಜನಿಸಿದ್ದ. ಈಗ ಇದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆಂದು ಎಂದು ಪ್ರಶಾಂತ್ ಪೋಷಕರು ಕಣ್ಣೀರು ಹಾಕಿದ್ದಾರೆ.

ಕಿಲ್ಲರ್ ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಟಿಕ್ಕಿಗಳ ಸಾವು; ಹುಟ್ಟಿದ ಆಸ್ಪತ್ರೆಯಲ್ಲೇ ಮಗ ಸಾವು ಎಂದು ಪೋಷಕರ ಕಣ್ಣೀರು
ಪ್ರಶಾಂತ್
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on:Jul 29, 2024 | 10:15 AM

ಬೆಂಗಳೂರು, ಜುಲೈ.29: ಬಿಬಿಎಂಪಿ (BBMP) ಕಸದ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ‌ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟ (Death) ಘಟನೆ ಭಾನುವಾರ ರಾತ್ರಿ ಕೆ.ಆರ್​.ಸರ್ಕಲ್​ ಬಳಿ ನಡೆದಿದೆ. ಬಾಣಸವಾಡಿ ನಿವಾಸಿ ಪ್ರಶಾಂತ್, ಶಿಲ್ಪಾ‌ (27) ಮೃತ ದುರ್ದೈವಿಗಳು. ಐಟಿಪಿಎಲ್​​ನ TCS​ನಲ್ಲಿ ಕೆಲಸ ಮಾಡ್ತಿದ್ದ ಪ್ರಶಾಂತ್ ಹಾಗೂ ಶಿಲ್ಪಾ ಇಬ್ಬರೂ ನಿನ್ನೆ ಊಟಕ್ಕೆಂದು ಹೊರಗೆ ಬೈಕ್​ನಲ್ಲಿ ಬಂದಿದ್ದಾಗ ಅಪಘಾತ ಸಂಭವಿಸಿದೆ.

ಇಬ್ಬರು ಬೈಕ್​ನಲ್ಲಿ ಭಾನುವಾರ ರಾತ್ರಿ ಮೆಜೆಸ್ಟಿಕ್‌ನಿಂದ‌ ಕೆ.ಆರ್.ವೃತ್ತದ ಕಡೆ ಬರುತ್ತಿದ್ದ ವೇಳೆ ವೇಗವಾಗಿ ಬಂದ ಬಿಬಿಎಂಪಿ ಕಸದ ಲಾರಿ‌ ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕೆಳಗೆ ಬಿದ್ದ ಇವರ ಮೇಲೆ ಲಾರಿ ಹರಿದಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ತೀವ್ರ ಗಾಯಗೊಂಡ ಯುವಕ-ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಹಲಸೂರು ಗೇಟ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಶುಲ್ಕ ವಿವರ ಘೋಷಿಸದೆ ಖಾಸಗಿ ಶಾಲೆಗಳ ಉದ್ಧಟತನ: ಶಿಕ್ಷಣ ಇಲಾಖೆಯ ಆದೇಶಕ್ಕೂ ಡೋಂಟ್ ಕೇರ್

ಸೇಂಟ್​ ಮಾರ್ಥಾಸ್​​ ಆಸ್ಪತ್ರೆ ಬಳಿ ಪೋಷಕರ ಕಣ್ಣೀರು

ಇನ್ನು ಅಪಘಾತದ ವೇಳೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ​ ಮಾರ್ಥಾಸ್​​ ಆಸ್ಪತ್ರೆಗೆ ಇಬ್ಬರನ್ನೂ ದಾಖಲಿಸಲಾಗಿದ್ದು ಮೃತ ಪ್ರಶಾಂತ್ ಪೋಷಕರು ಕಣ್ಣೀರು ಹಾಕಿದ್ದಾರೆ. ಆಸ್ಪತ್ರೆ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮಗ ಪ್ರಶಾಂತ್​ನನ್ನು ಕಳೆದುಕೊಂಡು​ ಪೋಷಕರು ಎದೆ ಹೊಡೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಇನ್ನು ಮೊಮ್ಮಗನ ಸಾವಿನ ವಿಚಾರ ತಿಳಿದು ಅಜ್ಜಿ ಕುಸಿದು ಬಿದ್ದಿದ್ದಾರೆ. ಇಡೀರಾತ್ರಿ ಆಸ್ಪತ್ರೆ ಮುಂಭಾಗ ಸಂಬಂಧಿಕರು ಕಣ್ಣೀರು ಹಾಕಿದ್ದಾರೆ.

ನಮಗೆ ನ್ಯಾಯ ಒದಗಿಸುವಂತೆ ತಂದೆ ಲೋಕೇಶ್​ ಆಗ್ರಹ

ಕಸದ ವಾಹನ ಡಿಕ್ಕಿಯಾಗಿ ನನ್ನ ಮಗ, ಯುವತಿ ಮೃತಪಟ್ಟಿದ್ದಾರೆ. ನನ್ನ ಮಗ, ಯುವತಿ ಇಬ್ಬರೂ ಟಿಸಿಎಸ್​ನಲ್ಲಿ ಕೆಲಸ ಮಾಡ್ತಿದ್ದರು. ಅಪಘಾತದಲ್ಲಿ ನನ್ನ ಮಗ, ಯುವತಿ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತ ಎಸಗಿದ ಲಾರಿ ಚಾಲಕನನ್ನು ಕೂಡಲೇ ಬಂಧಿಸಬೇಕು. ನಮಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ನಾನು, ನನ್ನ ಕುಟುಂಬ ಆತ್ಮಹತ್ಯೆ ಮಾಡಿಕೊಳ್ತೇವೆ ಎಂದು ಪೊಲೀಸರ ಬಳಿ ಮೃತ ಪ್ರಶಾಂತ್ ತಂದೆ ಲೋಕೇಶ್ ಕಣ್ಣಿರು ಹಾಕಿದ್ದಾರೆ. ನನ್ನ ಮಗ ಇದೇ ಮಾರ್ಥಾಸ್ ಆಸ್ಪತ್ರೆಯಲ್ಲಿ ಜನಿಸಿದ್ದ. ಈಗ ಇದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆಂದು ಅಳಲು ತೋಡಿಕೊಂಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:22 am, Mon, 29 July 24

ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ