ಬೆಣ್ಣೆನಗರಿಯಲ್ಲಿ ಹಾಲಿನ ಲಾರಿಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
ಜಿಲ್ಲೆಯ ನ್ಯಾಮತಿ ಪಟ್ಟಣದ ಸಾಲಬಾಳು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಹಾಲಿನ ಲಾರಿ ಹಾಗೂ ಓಮ್ನಿ ಕಾರು ಪರಸ್ಪರ ಡಿಕ್ಕಿಯಾಗಿದೆ. ಈ ವೇಳೆ, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಭೀಕರ ದೃಶ್ಯ
ದಾವಣಗೆರೆ: ಜಿಲ್ಲೆಯ ನ್ಯಾಮತಿ ಪಟ್ಟಣದ ಸಾಲಬಾಳು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದ್ದು ಹಾಲಿನ ಲಾರಿ ಹಾಗೂ ಓಮ್ನಿ ಕಾರ್ ಪರಸ್ಪರ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಹೊಸೂರು ಗ್ರಾಮದ ಸಂತೋಷ (32) ಹಾಗೂ ಶ್ರೀನಿವಾಸ (33) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಪೋಸ್ಟರ್ ಬದಲಿಸಲು ಥಿಯೇಟರ್ ಮೇಲೆ ಹತ್ತಿದ್ದ ವ್ಯಕ್ತಿ ಸಾವು