AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಕಾರು ಪಲ್ಟಿ, ಇಬ್ಬರು ಸಾವು

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಮೃತರನ್ನು ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯ ನಿವಾಸಿಗಳಾಗಿದ್ದಾರೆ. ಚನ್ನರಾಯಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಟುಂಬದ ನಾಲ್ವರು ಮನೆಗೆ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಹಾಸನ: ಚನ್ನರಾಯಪಟ್ಟಣ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಕಾರು ಪಲ್ಟಿ, ಇಬ್ಬರು ಸಾವು
ಚನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಪಲ್ಟಿಯಾದ ಕಾರು
Rakesh Nayak Manchi
|

Updated on:Sep 25, 2023 | 4:58 PM

Share

ಹಾಸನ, ಸೆ.25: ಜಿಲ್ಲೆಯ ಚನ್ನರಾಯಪಟ್ಟಣ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾರು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರ ಗಾಯಗಳಾಗಿವೆ. ಮೃತರನ್ನು ಬೆಂಗಳೂರು (Bengaluru) ಉತ್ತರ ತಾಲೂಕಿನ ಅಂಚೆಪಾಳ್ಯ ನಿವಾಸಿಗಳಾದ ಧೀರಜ್ (18) ಮತ್ತು ಜಗದೀಶ್ (49) ಎಂದು ಗುರುತಿಸಲಾಗಿದೆ.

ಚನ್ನರಾಯಪಟ್ಟಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಕುಟುಂಬದ ನಾಲ್ವರು ಮನೆಗೆ ಮರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಅವಘಡ ಸಂಭವಿಸಿದೆ. ಜಗದೀಶ್ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳಲು ಕುಟುಂಬ ಸಮೇತ ಚನ್ನರಾಯಪಟ್ಟಣಕ್ಕೆ ಬಂದಿದ್ದರು.

ಇದನ್ನೂ ಓದಿ: ಚೀನಾದ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 16 ಮಂದಿ ಸಾವು

ಕಾರಿನಲ್ಲಿದ್ದ ನಳಿನಾಕ್ಷಿ ಮತ್ತು ದುಷ್ಯಂತ್‌ ಅವರಿಗೆ ತೀವ್ರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಪ್ರಯಾಣದ ವೇಳೆ ಕಾರಿನ ಟೈರ್‌ ಒಡೆದ ಕಾರಣ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದ ನಂತರ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:58 pm, Mon, 25 September 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?