AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಾಟ: ಕೈದಿಯ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆ!

ಜೈಲುಗಳಲ್ಲಿ ಹಣ ಕೊಟ್ಟರೆ ಎಲ್ಲಾ ಸೌಕರ್ಯಗಳು ದೊರೆಯುತ್ತವೆ. ಸಿಗರೇಟ್, ಗುಟ್ಕಕದಿಂದ ಹಿಡಿದು ಮಾತನಾಡಲು ಮೊಬೈಲ್​ ಫೋನ್​ ಸೌಲಭ್ಯ ಇರಲಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಇದರ ಮಧ್ಯ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಬಳಿ ಮೊಬೈಲ್​ ಫೋನ್ ಪತ್ತೆಯಾಗಿದೆ. ಆರೋಪಿಯನ್ನು ಜೈಲಿನೊಳಗೆ ಕರೆದೊಯ್ಯವ ಸಂದರ್ಭದಲ್ಲಿ ಸ್ಕ್ಯಾನ್ ಮಾಡಿದಾಗ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆಯಾಗಿವೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಾಟ: ಕೈದಿಯ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆ!
ಪತ್ತೆಯಾದ ಮೊಬೈಲ್​ಗಳು
ರಾಮು, ಆನೇಕಲ್​
| Edited By: |

Updated on: Jul 03, 2024 | 9:20 PM

Share

ಬೆಂಗಳೂರು, (ಜುಲೈ, 03): ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಕಳ್ಳಾಟ ಬಯಲಾಗಿದೆ. ವಿಚಾರಣಾಧೀನ ಕೈದಿಯೊಬ್ಬನ ಗುದದ್ವಾರದಲ್ಲಿ 2 ಮೊಬೈಲ್​ಗಳು ಪತ್ತೆಯಾಗಿವೆ. ಪ್ರಕರಣವೊಂದರ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿನೊಳಗೆ ಕಳುಹಿಸುವ ಮೊದಲು ಸ್ಕ್ಯಾನ್ ಮಾಡಿದಾಗ ಆತನ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆಯಾಗಿವೆ. ಕೋರ್ಟ್​ನಿಂದ ವಾಪಸ್ ಜೈಲಿಗೆ​ ಕರೆತರುವಾಗ ವಿಚಾರಣಾಧೀನ ರಘುವೀರ್ ರಘುವೀರ್, ಬೇರೆಯವರಿಂದ ಫೋನ್ ಪಡೆದುಕೊಂಡು ಗುದದ್ವಾರದಲ್ಲಿ ಇಟ್ಟುಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಕಾನ್ಸ್​ಟೇಬಲ್ ಶ್ರೀಕೃಷ್ಣ ಅವರು ರಘುವೀರ್​​ನನ್ನ ಕೋರ್ಟ್​ಗೆ ಕರೆದೊಯ್ದಿದ್ದರು. ಈ ವೇಳೆ ರಘುವೀರ್ ಬೇರೆಯವರಿಂದ ಮೊಬೈಲ್​ ಪಡೆದುಕೊಂಡಿದ್ದಾನೆ. ಆದ್ರೆ. ಜೈಲಿಗೆ ಬಂದಾಗ ತಪಾಸಣೆ ವೇಳೆ ಸ್ಕ್ಯಾನ್ ಸೈರನ್ ಹೊಡೆದುಕೊಂಡಿದೆ. ಕೂಡಲೇ ರಘುವೀರ್​ನನ್ನು ವಶಕ್ಕೆ ಪಡೆದ ಪೊಲೀಸರು, ಆಸ್ಪತ್ರೆಗೆ ಕರೆದೊಯ್ದು ಎಕ್ಸ್​ರೇ ಮಾಡಿದಾಗ ಆತನ ಗುದದ್ವಾರದಲ್ಲಿ 2 ಮೊಬೈಲ್ ಫೋನ್, ಬ್ಯಾಟರಿ ಪತ್ತೆಯಾಗಿದೆ. ಇದರಿಂದ ಪೊಲೀಸರೇ ಶಾಕ್ ಆಗಿದ್ದಾರೆ.

ಇದನ್ನೂ ಓದಿ: ‘ಫರ್ಜಿ’ ವೆಬ್ ಸೀರೀಸ್ ನೋಡಿ ಖೋಟಾ ನೋಟ್ ದಂಧೆ; ಈ ಗ್ಯಾಂಗ್ ಪೊಲೀಸ್​ ಖೆಡ್ಡಾಗೆ ಬಿದ್ದಿದ್ದೆ ರಣರೋಚಕ

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೈದಿ ರಘುವೀರ್ ಗುದದ್ವಾರದಲ್ಲಿದ್ದ ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಮೊಬೈಲ್ ಹೇಗೆ ಪಡೆದುಕೊಂಡಿದ್ದು? ಯಾರಿಂದ ತೆಗೆದುಕೊಂಡಿದ್ದು? ಏಕೆ ಮೊಬೈಲ್​ ಬೇಕಿತ್ತು ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ