AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಾಟ: ಕೈದಿಯ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆ!

ಜೈಲುಗಳಲ್ಲಿ ಹಣ ಕೊಟ್ಟರೆ ಎಲ್ಲಾ ಸೌಕರ್ಯಗಳು ದೊರೆಯುತ್ತವೆ. ಸಿಗರೇಟ್, ಗುಟ್ಕಕದಿಂದ ಹಿಡಿದು ಮಾತನಾಡಲು ಮೊಬೈಲ್​ ಫೋನ್​ ಸೌಲಭ್ಯ ಇರಲಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಇದರ ಮಧ್ಯ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಬಳಿ ಮೊಬೈಲ್​ ಫೋನ್ ಪತ್ತೆಯಾಗಿದೆ. ಆರೋಪಿಯನ್ನು ಜೈಲಿನೊಳಗೆ ಕರೆದೊಯ್ಯವ ಸಂದರ್ಭದಲ್ಲಿ ಸ್ಕ್ಯಾನ್ ಮಾಡಿದಾಗ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆಯಾಗಿವೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಾಟ: ಕೈದಿಯ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆ!
ಪತ್ತೆಯಾದ ಮೊಬೈಲ್​ಗಳು
ರಾಮು, ಆನೇಕಲ್​
| Edited By: |

Updated on: Jul 03, 2024 | 9:20 PM

Share

ಬೆಂಗಳೂರು, (ಜುಲೈ, 03): ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಕಳ್ಳಾಟ ಬಯಲಾಗಿದೆ. ವಿಚಾರಣಾಧೀನ ಕೈದಿಯೊಬ್ಬನ ಗುದದ್ವಾರದಲ್ಲಿ 2 ಮೊಬೈಲ್​ಗಳು ಪತ್ತೆಯಾಗಿವೆ. ಪ್ರಕರಣವೊಂದರ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿನೊಳಗೆ ಕಳುಹಿಸುವ ಮೊದಲು ಸ್ಕ್ಯಾನ್ ಮಾಡಿದಾಗ ಆತನ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆಯಾಗಿವೆ. ಕೋರ್ಟ್​ನಿಂದ ವಾಪಸ್ ಜೈಲಿಗೆ​ ಕರೆತರುವಾಗ ವಿಚಾರಣಾಧೀನ ರಘುವೀರ್ ರಘುವೀರ್, ಬೇರೆಯವರಿಂದ ಫೋನ್ ಪಡೆದುಕೊಂಡು ಗುದದ್ವಾರದಲ್ಲಿ ಇಟ್ಟುಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಕಾನ್ಸ್​ಟೇಬಲ್ ಶ್ರೀಕೃಷ್ಣ ಅವರು ರಘುವೀರ್​​ನನ್ನ ಕೋರ್ಟ್​ಗೆ ಕರೆದೊಯ್ದಿದ್ದರು. ಈ ವೇಳೆ ರಘುವೀರ್ ಬೇರೆಯವರಿಂದ ಮೊಬೈಲ್​ ಪಡೆದುಕೊಂಡಿದ್ದಾನೆ. ಆದ್ರೆ. ಜೈಲಿಗೆ ಬಂದಾಗ ತಪಾಸಣೆ ವೇಳೆ ಸ್ಕ್ಯಾನ್ ಸೈರನ್ ಹೊಡೆದುಕೊಂಡಿದೆ. ಕೂಡಲೇ ರಘುವೀರ್​ನನ್ನು ವಶಕ್ಕೆ ಪಡೆದ ಪೊಲೀಸರು, ಆಸ್ಪತ್ರೆಗೆ ಕರೆದೊಯ್ದು ಎಕ್ಸ್​ರೇ ಮಾಡಿದಾಗ ಆತನ ಗುದದ್ವಾರದಲ್ಲಿ 2 ಮೊಬೈಲ್ ಫೋನ್, ಬ್ಯಾಟರಿ ಪತ್ತೆಯಾಗಿದೆ. ಇದರಿಂದ ಪೊಲೀಸರೇ ಶಾಕ್ ಆಗಿದ್ದಾರೆ.

ಇದನ್ನೂ ಓದಿ: ‘ಫರ್ಜಿ’ ವೆಬ್ ಸೀರೀಸ್ ನೋಡಿ ಖೋಟಾ ನೋಟ್ ದಂಧೆ; ಈ ಗ್ಯಾಂಗ್ ಪೊಲೀಸ್​ ಖೆಡ್ಡಾಗೆ ಬಿದ್ದಿದ್ದೆ ರಣರೋಚಕ

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೈದಿ ರಘುವೀರ್ ಗುದದ್ವಾರದಲ್ಲಿದ್ದ ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಮೊಬೈಲ್ ಹೇಗೆ ಪಡೆದುಕೊಂಡಿದ್ದು? ಯಾರಿಂದ ತೆಗೆದುಕೊಂಡಿದ್ದು? ಏಕೆ ಮೊಬೈಲ್​ ಬೇಕಿತ್ತು ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ