ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಾಟ: ಕೈದಿಯ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆ!

ಜೈಲುಗಳಲ್ಲಿ ಹಣ ಕೊಟ್ಟರೆ ಎಲ್ಲಾ ಸೌಕರ್ಯಗಳು ದೊರೆಯುತ್ತವೆ. ಸಿಗರೇಟ್, ಗುಟ್ಕಕದಿಂದ ಹಿಡಿದು ಮಾತನಾಡಲು ಮೊಬೈಲ್​ ಫೋನ್​ ಸೌಲಭ್ಯ ಇರಲಿದೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಇದರ ಮಧ್ಯ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಬಳಿ ಮೊಬೈಲ್​ ಫೋನ್ ಪತ್ತೆಯಾಗಿದೆ. ಆರೋಪಿಯನ್ನು ಜೈಲಿನೊಳಗೆ ಕರೆದೊಯ್ಯವ ಸಂದರ್ಭದಲ್ಲಿ ಸ್ಕ್ಯಾನ್ ಮಾಡಿದಾಗ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆಯಾಗಿವೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳ್ಳಾಟ: ಕೈದಿಯ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆ!
ಪತ್ತೆಯಾದ ಮೊಬೈಲ್​ಗಳು
Edited By:

Updated on: Jul 03, 2024 | 9:20 PM

ಬೆಂಗಳೂರು, (ಜುಲೈ, 03): ಬೆಂಗಳೂರಿನ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನಲ್ಲಿ ವಿಚಾರಣಾಧೀನ ಕೈದಿಯ ಕಳ್ಳಾಟ ಬಯಲಾಗಿದೆ. ವಿಚಾರಣಾಧೀನ ಕೈದಿಯೊಬ್ಬನ ಗುದದ್ವಾರದಲ್ಲಿ 2 ಮೊಬೈಲ್​ಗಳು ಪತ್ತೆಯಾಗಿವೆ. ಪ್ರಕರಣವೊಂದರ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿನೊಳಗೆ ಕಳುಹಿಸುವ ಮೊದಲು ಸ್ಕ್ಯಾನ್ ಮಾಡಿದಾಗ ಆತನ ಗುದದ್ವಾರದಲ್ಲಿ 2 ಮೊಬೈಲ್ ಪತ್ತೆಯಾಗಿವೆ. ಕೋರ್ಟ್​ನಿಂದ ವಾಪಸ್ ಜೈಲಿಗೆ​ ಕರೆತರುವಾಗ ವಿಚಾರಣಾಧೀನ ರಘುವೀರ್ ರಘುವೀರ್, ಬೇರೆಯವರಿಂದ ಫೋನ್ ಪಡೆದುಕೊಂಡು ಗುದದ್ವಾರದಲ್ಲಿ ಇಟ್ಟುಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಕಾನ್ಸ್​ಟೇಬಲ್ ಶ್ರೀಕೃಷ್ಣ ಅವರು ರಘುವೀರ್​​ನನ್ನ ಕೋರ್ಟ್​ಗೆ ಕರೆದೊಯ್ದಿದ್ದರು. ಈ ವೇಳೆ ರಘುವೀರ್ ಬೇರೆಯವರಿಂದ ಮೊಬೈಲ್​ ಪಡೆದುಕೊಂಡಿದ್ದಾನೆ. ಆದ್ರೆ. ಜೈಲಿಗೆ ಬಂದಾಗ ತಪಾಸಣೆ ವೇಳೆ ಸ್ಕ್ಯಾನ್ ಸೈರನ್ ಹೊಡೆದುಕೊಂಡಿದೆ. ಕೂಡಲೇ ರಘುವೀರ್​ನನ್ನು ವಶಕ್ಕೆ ಪಡೆದ ಪೊಲೀಸರು, ಆಸ್ಪತ್ರೆಗೆ ಕರೆದೊಯ್ದು ಎಕ್ಸ್​ರೇ ಮಾಡಿದಾಗ ಆತನ ಗುದದ್ವಾರದಲ್ಲಿ 2 ಮೊಬೈಲ್ ಫೋನ್, ಬ್ಯಾಟರಿ ಪತ್ತೆಯಾಗಿದೆ. ಇದರಿಂದ ಪೊಲೀಸರೇ ಶಾಕ್ ಆಗಿದ್ದಾರೆ.

ಇದನ್ನೂ ಓದಿ: ‘ಫರ್ಜಿ’ ವೆಬ್ ಸೀರೀಸ್ ನೋಡಿ ಖೋಟಾ ನೋಟ್ ದಂಧೆ; ಈ ಗ್ಯಾಂಗ್ ಪೊಲೀಸ್​ ಖೆಡ್ಡಾಗೆ ಬಿದ್ದಿದ್ದೆ ರಣರೋಚಕ

ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೈದಿ ರಘುವೀರ್ ಗುದದ್ವಾರದಲ್ಲಿದ್ದ ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಈ ಮೊಬೈಲ್ ಹೇಗೆ ಪಡೆದುಕೊಂಡಿದ್ದು? ಯಾರಿಂದ ತೆಗೆದುಕೊಂಡಿದ್ದು? ಏಕೆ ಮೊಬೈಲ್​ ಬೇಕಿತ್ತು ಎನ್ನುವ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ramu Ram

ರಾಮು, ಟಿವಿ9 ವಾಹಿನಿ ಮುಖ್ಯ ಕಚೇರಿಯ ಬೆಂಗಳೂರಿನಲ್ಲಿ11 ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದು,2023 ಜುಲೈ ತಿಂಗಳಿಂದ ಆನೇಕಲ್ ತಾಲೂಕು ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ, ನಾನು ಕ್ರೈಂ ಪೊಲಿಟಿಕಲ್ ಸಿನಿಮಾ ಮತ್ತು ಮೆಟ್ರೋ ಸ್ಟೋರೀಸ್ ಗಳನ್ನು ಕವರೇಜ್ ಮಾಡುತ್ತೇನೆ .

Read More
Follow Us