AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಯಾವುವು-ಏಕೆ?

ಕರ್ನಾಟಕದಲ್ಲಿ ಕಳೆದ ತಿಂಗಳು ಅಷ್ಟೇ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಚನಾವಣೆ ನಡೆದಿದ್ದು, ಎರಡೂ ಕ್ಷೇತ್ರಗಳಲ್ಲೂ ಆಡಳಿತರೂಢ ಕಾಂಗ್ರೆಸ್ ಗೆದ್ದು ಬೀಗಿದೆ. ಇದರ ಮಧ್ಯೆ ಇದೀಗ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಹಾಗಾದ್ರೆ, ಬೈ ಎಲೆಕ್ಷನ್ ನಡೆಯುವ ಆ ಎರಡು ಕ್ಷೇತ್ರಗಳಾವುವು? ಯಾರಿಂದ ತೆರವಾಗಿವೆ ಎನ್ನುವ ಮಾಹಿತಿ ಇಲ್ಲಿದೆ.

ಕರ್ನಾಟಕದಲ್ಲಿ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ, ಯಾವುವು-ಏಕೆ?
Karnataka By Elections 2026
ರಮೇಶ್ ಬಿ. ಜವಳಗೇರಾ
|

Updated on: May 14, 2026 | 8:50 PM

Share

ಬೆಂಗಳೂರು, (ಮೇ 14): ಕಳೆದು ತಿಂಗಳು ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ (Assembly By Elections) ಕಾಂಗ್ರೆಸ್ (Congress) ಗೆಲುವು ಸಾಧಿಸಿದೆ. ಹೌದು…ಕಾಂಗ್ರೆಸ್​​ ಶಾಸರಾಗಿದ್ದ ಎಚ್​​​ವೈ ಮೇಟಿ ನಿಧನದಿಂದ ಬಾಗಲಕೋಟೆ (Bagalkot) ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆದಿತ್ತು. ಇನ್ನೊಂದೆಡೆ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ದಾವಣಗೆರೆ ದಕ್ಷಿಣ (Davanagere South) ಕ್ಷೇತ್ರಕ್ಕೆ ಬೈ ಎಲೆಕ್ಷನ್ ನಡೆದಿದ್ದು, ಈ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆರೆಡು ವಿಧಾನಸಭಾ ಕ್ಷೇತ್ರಗಳಿ ಉಪಚುನಾವಣೆ ಎದುರಾಗಿದೆ. ಹೌದು…ಧಾರವಾಡ ಹಾಗೂ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಗಿದ್ದು, ದಿನಾಂಕ ಘೋಷಣೆ ಮೊದಲೇ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

  • ಕರ್ನಾಟಕದಲ್ಲಿ ಮತ್ತೆರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ
  • ಹಿರಿಯೂರು ಹಾಗೂ ಧಾನವಾದ ವಿಧಾನಸಭಾ ಕ್ಷೇತ್ರಗಳಿಗೆ ಬೈ ಎಲೆಕ್ಷನ್
  • ಡಿ ಸುಧಾಕರ್ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಖಾಲಿಯಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರ
  • ವಿನಯ್ ಕುಲಕರ್ಣಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರಿಂದ ಧಾರವಾಡ ಕ್ಷೇತ್ರ ಖಾಲಿ

ಸಚಿವ ಸುಧಾಕರ್ ನಿಧನದಿಂದ ಹಿರಿಯೂರು ಕ್ಷೇತ್ರ ಖಾಲಿ

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಮೊನ್ನೇ ಅಷ್ಟೇ ನಿಧನರಾಗಿದ್ದಾರೆ. ಇದರಿಂದ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರ ಖಾಲಿಯಾಗಿದ್ದು, ಇದಕ್ಕೆ ಉಪಚುನಾವಣೆ ನಡೆಯಬೇಕಿದೆ. 2023ರಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಿ ಗೆದ್ದಿದ್ದ ಸುಧಾಕರ್ ಅವರು ಸಿದ್ದರಾಮ್ಯಯ ಸಂಪುಟದಲ್ಲಿ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದರು. ಆದ್ರೆ, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಸುಧಾಕರ್ ಅವರು ಚಿಕಿತ್ಸೆ ಫಲಿಸದೇ ಮೇ 11ರಂದು ನಿಧನರಾಗಿದ್ದು, ಇದೀಗ ಹಿರಿಯೂರ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎನ್ನುವುದೇ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅನರ್ಹ: ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ

ಶಾಸಕ ಸ್ಥಾನ ಕಳೆದುಕೊಂಡ ವಿನಯ್ ಕುಲಕರ್ಣಿ

ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್​ ಶಾಸಕ ವಿನಯ ಕುಲಕರ್ಣಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದಾರೆ. ಇದರಿಂದ ಅವರು ಶಾಸಕ ಸ್ಥಾನ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರವಾಡ ವಿಧಾನಸಭಾ ಕ್ಷೇತ್ರ ತೆರವಾಗಿದ್ದು, ಇದಕ್ಕೆ ಉಪಚುನಾವಣೆ ನಡೆಯಬೇಕಿದೆ. ಇದರಿಂದ ಧಾರವಾಡ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ವಿಚಾರವಾಗಿ ಅನೇಕ ಆಕಾಂಕ್ಷಿಗಳು ಎದ್ದು ಕೂತಿದ್ದಾರೆ. ಅದರಲ್ಲೂ ಬಿಜೆಪಿಯಲ್ಲಿಯೇ ಹಲವಾರು ಆಕಾಂಕ್ಷಿಗಳು ಉಪ ಚುನಾವಣೆಗಾಗಿ ಸಿದ್ಧತೆ ಆರಂಭಿಸಿದ್ದಾರೆ.

ಧಾರವಾಡ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಯಾರಿಗೆ?

ಬಿಜೆಪಿ ಮುಖಂಡ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾದ ವಿನಯ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹಗೊಳ್ಳುತ್ತಿದ್ದಂತೆಯೇ ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಸುದ್ದಿ ಕಾವು ಪಡೆದುಕೊಂಡಿದೆ. ಕಾಂಗ್ರೆಸ್- ಬಿಜೆಪಿ ಅಭ್ಯರ್ಥಿ ಯಾರೆಂಬ ಚರ್ಚೆಗಳು ಜೋರಾಗಿವೆ. ಇನ್ನೊಂದೆಡೆ ಉಭಯ ಪಕ್ಷಗಳ ಟಿಕೆಟ್ ಆಕಾಂಕ್ಷಿಗಳು ವರಿಷ್ಠರ ಗಮನ ಸೆಳೆಯುವ ಪ್ರಯತ್ನದಲ್ಲಿದ್ದರೆ ಮತ್ತೊಂದೆಡೆ ಇಂಥವರೇ ಅಭ್ಯರ್ಥಿಯಾಗಲಿ ಎಂಬ ಅಭಿಪ್ರಾಯವನ್ನು ಕಾರ್ಯಕರ್ತರ ಪಡೆ ವ್ಯಕ್ತಪಡಿಸುತ್ತಿದೆ.

ಕಾಂಗ್ರೆಸ್ ಪಕ್ಷವು ವಿನಯ ಕುಲಕರ್ಣಿ ಅವರಿಗೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಸಿಗಲಿದೆ ಎಂಬ ನಿರೀಕ್ಷೆಯಲ್ಲಿದೆ. ಹೀಗಾಗಿ ಚುನಾವಣೆ ತಯಾರಿ ಚರ್ಚೆ ಅಲ್ಲಿ ಅಷ್ಟೊಂದು ಬಿರುಸುಗೊಂಡಿಲ್ಲ. ಇನ್ನು ಅಭ್ಯರ್ಥಿ ಬಗ್ಗೆ ಚರ್ಚೆಗಳಿಲ್ಲ. ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್, ಶಾಸಕ ಜನಾರ್ಧನ ರೆಡ್ಡಿ ಅವರಂತೆ ವಿನಯ ಕುಲಕರ್ಣಿ ಅವರಿಗೂ ಕೆಳಹಂತದ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ಸಿಗಲಿದೆ. ಹೀಗಾಗಿ ಉಪಚುನಾವಣೆ ಬಗ್ಗೆ ಹೆಚ್ಚು ಚರ್ಚೆ ಬೇಡ ಎಂಬ ಲೆಕ್ಕದಲ್ಲಿ ಕೈ ನಾಯಕರಿದ್ದಾರೆ. ಇದರ ಹೊರತಾಗಿಯೂ ಚುನಾವಣೆ ಎದುರಿಸುವುದು ಅನಿವಾರ್ಯವಾದಲ್ಲಿ ಯಾರಿಗೆ ಟಿಕೆಟ್ ಕೊಡಬಹುದು ಎಂಬ ಕುತೂಹಲವಂತೂ ಎಲ್ಲರಲ್ಲೂ ಇದೆ. ಸದ್ಯದ ಮಾಹಿತಿ ಪ್ರಕಾರ ಮಾಜಿ ಶಾಸಕ ವಿನಯ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕೆಂಬ ಇಂಗಿತ ಕೆಲ ನಾಯಕರದ್ದಾಗಿದೆ. ಇದರ ಹೊರತಾಗಿ ವಿನಯ ಕುಟುಂಬಕ್ಕೆ ಟಿಕೆಟ್ ಬೇಡವೆಂಬ ಅಭಿಪ್ರಾಯ ಬಂದಲ್ಲಿ ಯಾರು ಸೂಕ್ತ ಎಂಬ ಪ್ರಶ್ನೆಗೆ ಸರಿಯಾದ ಉತ್ತರ ಸಿಗುತ್ತಿಲ್ಲ. ಸ್ಥಳೀಯ ಮಟ್ಟದಲ್ಲಿ ತವನಪ್ಪ ಅಷ್ಟಗಿ ಅವರ ಹೆಸರಿದೆಯಾದರೂ ಅವರು ಈಗಷ್ಟೆ ಪಕ್ಷಕ್ಕೆ ಬಂದವರು ಎಂಬ ಅಪಸ್ವರ ಏಳಬಹುದು. ಹೀಗಾಗಿ ಕೊನೆಯದಾಗಿ ವಿನಯ ಅವರ ಪತ್ನಿ ಶಿವಲೀಲಾ ಅವರ ಹೆಸರೇ ಅಂತಿಮವಾಗಬಹುದು.

ಬಿಜೆಪಿ ಟಿಕೆಟ್ ಯಾರಿಗೆ?

ಬಿಜೆಪಿ ವಲಯದಲ್ಲಿ ಮಾತ್ರ ಉಪಚುನಾವಣೆ ಪಕ್ಕಾ ಎಂಬ ಲೆಕ್ಕದಲ್ಲಿಯೇ ಮುಂದಡಿ ಇಟ್ಟಿದೆ. ಈಗಾಗಲೇ ಗ್ರಾಮೀಣ ಕ್ಷೇತ್ರದ 234 ಬೂತ್‌ಗಳ ಅಧ್ಯಕ್ಷರು, ಪ್ರಮುಖರ ಅಭ್ಯಾಸವರ್ಗವನ್ನು ಮುಗಿಸಿದ್ದು, ಉಪಚುನಾವಣೆ ಗೆಲ್ಲಲು ಏನೇನು ರಣತಂತ್ರ ಹೆಣೆಯಬೇಕು ಎಂಬುದರ ಬಗ್ಗೆ ಚರ್ಚೆ ನಡೆಸುವ ಜತೆಗೆ ಅಭಿಪ್ರಾಯಗಳನ್ನೂ ಪಡೆಯುತ್ತಿದೆ. ಉಪಚುನಾವಣೆಗೆ ಬಿಜೆಪಿ ಹುರಿಯಾಳು ಯಾರು ಎಂಬುದರ ಮೇಲೆ ಈಗಾಗಲೇ ಪಕ್ಷದ ಆಂತರಿಕ ವಲಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ನಡೆದಿವೆ. ಮಾಜಿ ಶಾಸಕ ಅಮೃತ ದೇಸಾಯಿ ಅವರಿಗೆ ಪುನಃ ಟಿಕೆಟ್ ಸಿಗಲಿದೆ ಎಂಬ ಲೆಕ್ಕಾಚಾರದಲ್ಲಿ ಹಲವರು ಇದ್ದಾರೆ. ಆದರೆ, ಇವರಿಗೆ ಪೈಪೋಟಿ ಎಂಬಂತೆ ಕೆಲವರು ತಮಗೂ ಒಂದು ಅವಕಾಶ ಕೊಡಿ ಎಂಬ ಇಂಗಿತವನ್ನು ವ್ಯಕ್ತಪಡಿಸುತ್ತಿದ್ದಾರೆ. ಪ್ರಮುಖವಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ ಮಕ್ಕಳಗೇರಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಾಜಿ ಮಹಾಪೌರ ಈರೇಶ ಅಂಚಟಗೇರಿ ಇವರಲ್ಲಿ ಒಬ್ಬರಿಗೆ ಟಿಕೆಟ್ ಸಿಗಬಹುದು ಎನ್ನಲಾಗುತ್ತಿದೆ.

ಈ ಮಧ್ಯೆ ಸವಿತಾ ಅಮರಶೆಟ್ಟಿಗೆ ಒಂದು ಅವಕಾಶ ಸಿಕ್ಕರೆ ಒಳಿತು ಎಂಬ ಮಾತುಗಳೊಂದಿಗೆ ಯೋಗೀಶಗೌಡ ಗೌಡರ ಪ್ರಕರಣದಲ್ಲಿ ಕಾನೂನು ಹೋರಾಟದ ನೇತೃತ್ವ ವಹಿಸಿದ್ದ ಬಸವರಾಜ ಕೊರವರ ಅಭ್ಯರ್ಥಿಯಾದರೆ ಉತ್ತಮ ಎಂಬ ಅಭಿಪ್ರಾಯಗಳೂ ಕೇಳಿ ಬರುತ್ತಿವೆ. ಅಚ್ಚರಿ ಎಂದರೆ ಆಕಾಂಕ್ಷಿಗಳೆಲ್ಲರೂ ತಮಗೆ ಟಿಕೆಟ್ ಸಿಕ್ಕರೆ ಗೆದ್ದು ಬರೋದು ಖಚಿತ ಅನ್ನೋ ಲೆಕ್ಕಾಚಾರದಲ್ಲಿದ್ದಾರೆ.

ಒಟ್ಟಿನಲ್ಲಿ ಖಾಲಿಯಾಗಿರುವ ಎರಡು ಕ್ಷೇತ್ರಗಳು ಕಾಂಗ್ರೆಸ್​​ ಪಾಲಿನವು. ಹೀಗಾಗಿ ಉಪಚುನಾವಣೆಯಲ್ಲಿ ಯಾರಿಗೆ ಒಲಿಯುತ್ತೆ ಜಯ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು