AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆರಡು ಐವಿ ಫ್ಲೂಯಿಡ್ ಬಳಕೆಗೆ ಯೋಗ್ಯವಲ್ಲ: ಆರೋಗ್ಯ ಇಲಾಖೆಗೆ ಕಳಪೆ ಗುಣಮಟ್ಟ ಔಷಧಿಯ ಆತಂಕ

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಗಂಭೀರ ಸ್ವರೂಪ ಪಡೆದ ಬೆನ್ನಲ್ಲೇ, ಬಾಣಂತಿಯರಿಗೆ ನೀಡಿದ್ದ ಗ್ಲೂಕೋಸ್‌ ಸರಿ ಇಲ್ಲ ಎನ್ನವ ಅಂಶ ಪತ್ತೆಯಾಗಿತ್ತು. ಆದರೆ, ಇದೀಗ ಎಲ್ಲ ಕಡೆ ಸರಬರಾಜು ಆಗುತ್ತಿರುವ ಐವಿ ಫ್ಲೂಯಿಡ್​ಗಳೇ ಕಳಪೆ ಎಂಬ ವಿಚಾರ ಬಹಿರಂಗವಾಗುತ್ತಿದೆ. ಇದು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಮತ್ತೆರಡು ಐವಿ ಫ್ಲೂಯಿಡ್ ಬಳಕೆಗೆ ಯೋಗ್ಯವಲ್ಲ: ಆರೋಗ್ಯ ಇಲಾಖೆಗೆ ಕಳಪೆ ಗುಣಮಟ್ಟ ಔಷಧಿಯ ಆತಂಕ
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Feb 06, 2025 | 9:19 AM

Share

ಬೆಂಗಳೂರು, ಫೆಬ್ರವರಿ 6: ಕರ್ನಾಟಕದಾದ್ಯಂತ ಬಾಣಂತಿಯರ ಸರಣಿ ಸಾವು ಸಂಭವಿಸಲು ಕಾರಣ ಏನು ಎಂದು ತಿಳಿಯಲು ಸರ್ಕಾರ ಮುಂದಾಗಿತ್ತು. ಅದಕ್ಕಾಗಿ ಡಾ. ಸವಿತಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ‌, ಸಾವಿಗೆ ಕಾರಣ ಏನು ಎಂದು ತಿಳಿಯಿರಿ ಎಂದು ಬಳ್ಳಾರಿಗೆ ಕಳುಹಿಸಲಾಗಿತ್ತು. ಬಳಿಕ ಗ್ಲೂಕೋಸ್‌ನಲ್ಲಿ ಸಮಸ್ಯೆ ಇರುವುದು ಗೊತ್ತಾಗಿತ್ತು. ಕಳಪೆ ಐವಿ ಫ್ಲೂಯಿಡ್ ಕಾರಣ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಇದೀಗ ಮತ್ತೆರಡು ಐವಿ ಫ್ಲೂಯಿಡ್ ಕೂಡಾ ಬಳಕೆಗೆ ಯೋಗ್ಯವಲ್ಲ ಎಂಬ ಅಂಶ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.

ಬಳ್ಳಾರಿಯಲ್ಲಿ ಬಳಸಿದ್ದ ಐವಿ ಫ್ಲೂಯಿಡ್‌ನ 3 ಬ್ಯಾಚ್‌ಗಳನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಅವುಗಳಲ್ಲಿ ಎರಡು ಬ್ಯಾಚ್ ಐವಿ ಫ್ಲೂಯಿಡ್‌ ಬಳಕೆಗೆ ಯೋಗ್ಯವಲ್ಲ ಎಂಬುದು ತಿಳಿದುಬಂದಿತ್ತು. ಅದರ ಬೆನ್ನಲ್ಲೇ ಇದೀಗ ಮತ್ತೆರಡು ಐವಿ ಫ್ಲೂಯಿಡ್ ಕೂಡಾ ಬಳಕೆಗೆ ಯೋಗ್ಯವಲ್ಲ ಎಂಬುದು ಬಹಿರಂಗವಾಗಿದೆ. ಪಶ್ಚಿಮ ಬಂಗಾಳ ಕಂಪನಿಯ ಉತ್ಪನ್ನಗಳು ಉತ್ತಮವಾಗಿಲ್ಲ ಎನ್ನುವಂತಾಗಿದೆ.

ಡೆಸ್ಟ್ರೋಸ್ ಹಾಗೂ ಇಂಜೆಕ್ಷನ್ ಕೂಡ ಅಸುರಕ್ಷಿತ

ಐವಿ ಫ್ಲೂಯಿಡ್ ಬಳಕೆಯಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ಜೀವಕ್ಕೆ ಕುತ್ತು ತರುತ್ತದೆ. ಡೆಸ್ಟ್ರೋಸ್ ಹಾಗೂ ಇಂಜೆಕ್ಷನ್ ಕೂಡ ಅಸುರಕ್ಷಿತ ಎಂಬ ಅಂಶ ಬಯಲಾಗಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಯಾವ ಐವಿ ಫ್ಲೂಯಿಡ್ ಬಳಸಬೇಕು ಎಂಬ ಬಗ್ಗೆ ಆರೋಗ್ಯ ಇಲಾಖೆಗೆ ಆತಂಕ ಶುರುವಾಗಿದೆ. ಐವಿ ಫ್ಲೂಯಿಡ್ ಅಸುರಕ್ಷಿತ ಎಂಬುದು ಸೆಂಟ್ರಲ್ ಡ್ರಗ್ಸ್ ಲ್ಯಾಬೋರೇಟರಿಯ ಪ್ರಯೋಗದಲ್ಲಿ ದೃಢಪಟ್ಟಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು

ಒಟ್ಟಿನಲ್ಲಿ ಐವಿ ಫ್ಲೂಯಿಡ್ ಈ ಹಿಂದೆಯೂ ಬಳಕೆಗೆ ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಬಳಿಕ ಕೇಂದ್ರದ ಲ್ಯಾಬ್‌ನಲ್ಲಿ ಪಾಸಿಟಿವ್ ಬಂದಿತ್ತು. ಇದೀಗ ಮತ್ತೆ ಫ್ಲೂಯಿಡ್‌ಗಳ ಮರು ಪರೀಕ್ಷೆ ಮಾಡಲಾಗ್ತಿದ್ದು, ಇನ್ನು ಯಾವೆಲ್ಲ ಔಷಧ ಸುರಕ್ಷಿತವಲ್ಲ ಎಂಬುದು ಗೊತ್ತಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Thu, 6 February 25

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ