AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆರಡು ಐವಿ ಫ್ಲೂಯಿಡ್ ಬಳಕೆಗೆ ಯೋಗ್ಯವಲ್ಲ: ಆರೋಗ್ಯ ಇಲಾಖೆಗೆ ಕಳಪೆ ಗುಣಮಟ್ಟ ಔಷಧಿಯ ಆತಂಕ

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಗಂಭೀರ ಸ್ವರೂಪ ಪಡೆದ ಬೆನ್ನಲ್ಲೇ, ಬಾಣಂತಿಯರಿಗೆ ನೀಡಿದ್ದ ಗ್ಲೂಕೋಸ್‌ ಸರಿ ಇಲ್ಲ ಎನ್ನವ ಅಂಶ ಪತ್ತೆಯಾಗಿತ್ತು. ಆದರೆ, ಇದೀಗ ಎಲ್ಲ ಕಡೆ ಸರಬರಾಜು ಆಗುತ್ತಿರುವ ಐವಿ ಫ್ಲೂಯಿಡ್​ಗಳೇ ಕಳಪೆ ಎಂಬ ವಿಚಾರ ಬಹಿರಂಗವಾಗುತ್ತಿದೆ. ಇದು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಮತ್ತೆರಡು ಐವಿ ಫ್ಲೂಯಿಡ್ ಬಳಕೆಗೆ ಯೋಗ್ಯವಲ್ಲ: ಆರೋಗ್ಯ ಇಲಾಖೆಗೆ ಕಳಪೆ ಗುಣಮಟ್ಟ ಔಷಧಿಯ ಆತಂಕ
ಸಾಂದರ್ಭಿಕ ಚಿತ್ರ
Vinay Kashappanavar
| Edited By: |

Updated on:Feb 06, 2025 | 9:19 AM

Share

ಬೆಂಗಳೂರು, ಫೆಬ್ರವರಿ 6: ಕರ್ನಾಟಕದಾದ್ಯಂತ ಬಾಣಂತಿಯರ ಸರಣಿ ಸಾವು ಸಂಭವಿಸಲು ಕಾರಣ ಏನು ಎಂದು ತಿಳಿಯಲು ಸರ್ಕಾರ ಮುಂದಾಗಿತ್ತು. ಅದಕ್ಕಾಗಿ ಡಾ. ಸವಿತಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ‌, ಸಾವಿಗೆ ಕಾರಣ ಏನು ಎಂದು ತಿಳಿಯಿರಿ ಎಂದು ಬಳ್ಳಾರಿಗೆ ಕಳುಹಿಸಲಾಗಿತ್ತು. ಬಳಿಕ ಗ್ಲೂಕೋಸ್‌ನಲ್ಲಿ ಸಮಸ್ಯೆ ಇರುವುದು ಗೊತ್ತಾಗಿತ್ತು. ಕಳಪೆ ಐವಿ ಫ್ಲೂಯಿಡ್ ಕಾರಣ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಇದೀಗ ಮತ್ತೆರಡು ಐವಿ ಫ್ಲೂಯಿಡ್ ಕೂಡಾ ಬಳಕೆಗೆ ಯೋಗ್ಯವಲ್ಲ ಎಂಬ ಅಂಶ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.

ಬಳ್ಳಾರಿಯಲ್ಲಿ ಬಳಸಿದ್ದ ಐವಿ ಫ್ಲೂಯಿಡ್‌ನ 3 ಬ್ಯಾಚ್‌ಗಳನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಅವುಗಳಲ್ಲಿ ಎರಡು ಬ್ಯಾಚ್ ಐವಿ ಫ್ಲೂಯಿಡ್‌ ಬಳಕೆಗೆ ಯೋಗ್ಯವಲ್ಲ ಎಂಬುದು ತಿಳಿದುಬಂದಿತ್ತು. ಅದರ ಬೆನ್ನಲ್ಲೇ ಇದೀಗ ಮತ್ತೆರಡು ಐವಿ ಫ್ಲೂಯಿಡ್ ಕೂಡಾ ಬಳಕೆಗೆ ಯೋಗ್ಯವಲ್ಲ ಎಂಬುದು ಬಹಿರಂಗವಾಗಿದೆ. ಪಶ್ಚಿಮ ಬಂಗಾಳ ಕಂಪನಿಯ ಉತ್ಪನ್ನಗಳು ಉತ್ತಮವಾಗಿಲ್ಲ ಎನ್ನುವಂತಾಗಿದೆ.

ಡೆಸ್ಟ್ರೋಸ್ ಹಾಗೂ ಇಂಜೆಕ್ಷನ್ ಕೂಡ ಅಸುರಕ್ಷಿತ

ಐವಿ ಫ್ಲೂಯಿಡ್ ಬಳಕೆಯಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ಜೀವಕ್ಕೆ ಕುತ್ತು ತರುತ್ತದೆ. ಡೆಸ್ಟ್ರೋಸ್ ಹಾಗೂ ಇಂಜೆಕ್ಷನ್ ಕೂಡ ಅಸುರಕ್ಷಿತ ಎಂಬ ಅಂಶ ಬಯಲಾಗಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಯಾವ ಐವಿ ಫ್ಲೂಯಿಡ್ ಬಳಸಬೇಕು ಎಂಬ ಬಗ್ಗೆ ಆರೋಗ್ಯ ಇಲಾಖೆಗೆ ಆತಂಕ ಶುರುವಾಗಿದೆ. ಐವಿ ಫ್ಲೂಯಿಡ್ ಅಸುರಕ್ಷಿತ ಎಂಬುದು ಸೆಂಟ್ರಲ್ ಡ್ರಗ್ಸ್ ಲ್ಯಾಬೋರೇಟರಿಯ ಪ್ರಯೋಗದಲ್ಲಿ ದೃಢಪಟ್ಟಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು

ಒಟ್ಟಿನಲ್ಲಿ ಐವಿ ಫ್ಲೂಯಿಡ್ ಈ ಹಿಂದೆಯೂ ಬಳಕೆಗೆ ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಬಳಿಕ ಕೇಂದ್ರದ ಲ್ಯಾಬ್‌ನಲ್ಲಿ ಪಾಸಿಟಿವ್ ಬಂದಿತ್ತು. ಇದೀಗ ಮತ್ತೆ ಫ್ಲೂಯಿಡ್‌ಗಳ ಮರು ಪರೀಕ್ಷೆ ಮಾಡಲಾಗ್ತಿದ್ದು, ಇನ್ನು ಯಾವೆಲ್ಲ ಔಷಧ ಸುರಕ್ಷಿತವಲ್ಲ ಎಂಬುದು ಗೊತ್ತಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Thu, 6 February 25

Follow Us
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
‘ದರ್ಶನ’ ಸಿನಿಮಾ ಮುಹೂರ್ತ: ತಬಲಾ ನಾಣಿ ಮಾತಿಗೆ ನಕ್ಕು ಸುಸ್ತಾದ ಜನ
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಬಾಗಲಕೋಟೆ ಬೈ ಎಲೆಕ್ಷನ್​​: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್​​?
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ