AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆರಡು ಐವಿ ಫ್ಲೂಯಿಡ್ ಬಳಕೆಗೆ ಯೋಗ್ಯವಲ್ಲ: ಆರೋಗ್ಯ ಇಲಾಖೆಗೆ ಕಳಪೆ ಗುಣಮಟ್ಟ ಔಷಧಿಯ ಆತಂಕ

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ ಗಂಭೀರ ಸ್ವರೂಪ ಪಡೆದ ಬೆನ್ನಲ್ಲೇ, ಬಾಣಂತಿಯರಿಗೆ ನೀಡಿದ್ದ ಗ್ಲೂಕೋಸ್‌ ಸರಿ ಇಲ್ಲ ಎನ್ನವ ಅಂಶ ಪತ್ತೆಯಾಗಿತ್ತು. ಆದರೆ, ಇದೀಗ ಎಲ್ಲ ಕಡೆ ಸರಬರಾಜು ಆಗುತ್ತಿರುವ ಐವಿ ಫ್ಲೂಯಿಡ್​ಗಳೇ ಕಳಪೆ ಎಂಬ ವಿಚಾರ ಬಹಿರಂಗವಾಗುತ್ತಿದೆ. ಇದು ಮತ್ತಷ್ಟು ಆತಂಕ ಸೃಷ್ಟಿಸಿದೆ.

ಮತ್ತೆರಡು ಐವಿ ಫ್ಲೂಯಿಡ್ ಬಳಕೆಗೆ ಯೋಗ್ಯವಲ್ಲ: ಆರೋಗ್ಯ ಇಲಾಖೆಗೆ ಕಳಪೆ ಗುಣಮಟ್ಟ ಔಷಧಿಯ ಆತಂಕ
ಸಾಂದರ್ಭಿಕ ಚಿತ್ರ
Vinay Kashappanavar
| Updated By: Ganapathi Sharma|

Updated on:Feb 06, 2025 | 9:19 AM

Share

ಬೆಂಗಳೂರು, ಫೆಬ್ರವರಿ 6: ಕರ್ನಾಟಕದಾದ್ಯಂತ ಬಾಣಂತಿಯರ ಸರಣಿ ಸಾವು ಸಂಭವಿಸಲು ಕಾರಣ ಏನು ಎಂದು ತಿಳಿಯಲು ಸರ್ಕಾರ ಮುಂದಾಗಿತ್ತು. ಅದಕ್ಕಾಗಿ ಡಾ. ಸವಿತಾ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ‌, ಸಾವಿಗೆ ಕಾರಣ ಏನು ಎಂದು ತಿಳಿಯಿರಿ ಎಂದು ಬಳ್ಳಾರಿಗೆ ಕಳುಹಿಸಲಾಗಿತ್ತು. ಬಳಿಕ ಗ್ಲೂಕೋಸ್‌ನಲ್ಲಿ ಸಮಸ್ಯೆ ಇರುವುದು ಗೊತ್ತಾಗಿತ್ತು. ಕಳಪೆ ಐವಿ ಫ್ಲೂಯಿಡ್ ಕಾರಣ ಎಂದು ಸಮಿತಿಯು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಆದರೆ, ಇದೀಗ ಮತ್ತೆರಡು ಐವಿ ಫ್ಲೂಯಿಡ್ ಕೂಡಾ ಬಳಕೆಗೆ ಯೋಗ್ಯವಲ್ಲ ಎಂಬ ಅಂಶ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.

ಬಳ್ಳಾರಿಯಲ್ಲಿ ಬಳಸಿದ್ದ ಐವಿ ಫ್ಲೂಯಿಡ್‌ನ 3 ಬ್ಯಾಚ್‌ಗಳನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಅವುಗಳಲ್ಲಿ ಎರಡು ಬ್ಯಾಚ್ ಐವಿ ಫ್ಲೂಯಿಡ್‌ ಬಳಕೆಗೆ ಯೋಗ್ಯವಲ್ಲ ಎಂಬುದು ತಿಳಿದುಬಂದಿತ್ತು. ಅದರ ಬೆನ್ನಲ್ಲೇ ಇದೀಗ ಮತ್ತೆರಡು ಐವಿ ಫ್ಲೂಯಿಡ್ ಕೂಡಾ ಬಳಕೆಗೆ ಯೋಗ್ಯವಲ್ಲ ಎಂಬುದು ಬಹಿರಂಗವಾಗಿದೆ. ಪಶ್ಚಿಮ ಬಂಗಾಳ ಕಂಪನಿಯ ಉತ್ಪನ್ನಗಳು ಉತ್ತಮವಾಗಿಲ್ಲ ಎನ್ನುವಂತಾಗಿದೆ.

ಡೆಸ್ಟ್ರೋಸ್ ಹಾಗೂ ಇಂಜೆಕ್ಷನ್ ಕೂಡ ಅಸುರಕ್ಷಿತ

ಐವಿ ಫ್ಲೂಯಿಡ್ ಬಳಕೆಯಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ಜೀವಕ್ಕೆ ಕುತ್ತು ತರುತ್ತದೆ. ಡೆಸ್ಟ್ರೋಸ್ ಹಾಗೂ ಇಂಜೆಕ್ಷನ್ ಕೂಡ ಅಸುರಕ್ಷಿತ ಎಂಬ ಅಂಶ ಬಯಲಾಗಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಯಾವ ಐವಿ ಫ್ಲೂಯಿಡ್ ಬಳಸಬೇಕು ಎಂಬ ಬಗ್ಗೆ ಆರೋಗ್ಯ ಇಲಾಖೆಗೆ ಆತಂಕ ಶುರುವಾಗಿದೆ. ಐವಿ ಫ್ಲೂಯಿಡ್ ಅಸುರಕ್ಷಿತ ಎಂಬುದು ಸೆಂಟ್ರಲ್ ಡ್ರಗ್ಸ್ ಲ್ಯಾಬೋರೇಟರಿಯ ಪ್ರಯೋಗದಲ್ಲಿ ದೃಢಪಟ್ಟಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಆಸ್ಪತ್ರೆಗಳಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೆ 8 ತಿಂಗಳ ಗರ್ಭಿಣಿ ಸಾವು

ಒಟ್ಟಿನಲ್ಲಿ ಐವಿ ಫ್ಲೂಯಿಡ್ ಈ ಹಿಂದೆಯೂ ಬಳಕೆಗೆ ಯೋಗ್ಯವಲ್ಲ ಎಂದು ವರದಿ ಬಂದಿತ್ತು. ಬಳಿಕ ಕೇಂದ್ರದ ಲ್ಯಾಬ್‌ನಲ್ಲಿ ಪಾಸಿಟಿವ್ ಬಂದಿತ್ತು. ಇದೀಗ ಮತ್ತೆ ಫ್ಲೂಯಿಡ್‌ಗಳ ಮರು ಪರೀಕ್ಷೆ ಮಾಡಲಾಗ್ತಿದ್ದು, ಇನ್ನು ಯಾವೆಲ್ಲ ಔಷಧ ಸುರಕ್ಷಿತವಲ್ಲ ಎಂಬುದು ಗೊತ್ತಾಗಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:17 am, Thu, 6 February 25

ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ