AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ವಾರದಲ್ಲಿ ಎರಡೆರೆಡು ಕೊಲೆ: ಬೆಂಗಳೂರಿನ ನಟೋರಿಯಸ್ ಕೊಲೆಗಾರನ ಹಿನ್ನೆಲೆ ಭಯಾನಕ

ಬೆಂಗಳೂರಿನಲ್ಲಿ ನಟೋರಿಯಸ್ ಕೊಲೆಗಾರನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದಾನೆ. ವೃತ್ತಿ ಪರ ಕ್ರಿಮಿನಲ್ ಹಿನ್ನಲೆ ಹೊಂದಿದ್ದಾನೆ. ಈ ಹಿಂದೆ ಲೈಂಗಿಕ ದೌರ್ಜನ್ಯ, ದರೋಡೆ ಸಂಚು ಸೇರಿದಂತೆ ಆತನ ವಿರುದ್ಧ ಸುಬ್ರಮಣ್ಯಪುರ, ಬನಶಂಕರಿ ಠಾಣೆಗಳಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿವೆ. ಸದ್ಯ ವಿಚಾರಣೆ ಮಾಡಿದ ಪೊಲೀಸರು ದಂಗಾಗಿದ್ದಾರೆ.

ಒಂದೇ ವಾರದಲ್ಲಿ ಎರಡೆರೆಡು ಕೊಲೆ: ಬೆಂಗಳೂರಿನ ನಟೋರಿಯಸ್ ಕೊಲೆಗಾರನ ಹಿನ್ನೆಲೆ ಭಯಾನಕ
ಒಂದೇ ವಾರದಲ್ಲಿ ಎರಡೆರೆಡು ಕೊಲೆ: ಬೆಂಗಳೂರಿನ ನಟೋರಿಯಸ್ ಕೊಲೆಗಾರನ ಹಿನ್ನೆಲೆ ಭಯಾನಕ
Follow us
Jagadisha B
| Updated By: ಗಂಗಾಧರ​ ಬ. ಸಾಬೋಜಿ

Updated on: May 27, 2024 | 3:07 PM

ಬೆಂಗಳೂರು, ಮೇ 27: ಮೇ 12ರಂದು ಕುಡಿದ ಮತ್ತಿನಲ್ಲಿ ಜಯನಗರದ 7ನೇ ಬಡಾವಣೆ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ (murder) ಮಾಡಿದ್ದ ಆರೋಪಿ ಗಿರೀಶ್​ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಆತನನ್ನು ವಿಚಾರಣೆ ಮಾಡಿದ ಪೊಲೀಸರೇ ಇದೀಗ ಒಂದು ಕ್ಷಣ ದಂಗಾಗಿದ್ದಾರೆ. ಏಕೆಂದರೆ ಆತನ ಹಿನ್ನೆಲೆಯೇ ಭಯಾನಕವಾಗಿದೆ. ವೃತ್ತಿ ಪರ ಕ್ರಿಮಿನಲ್ ಹಿನ್ನಲೆ ಹೊಂದಿರುವ ಬಂಧಿತ ಆರೋಪಿ ಗಿರೀಶ್​ ಒಂದೇ ವಾರದಲ್ಲಿ ಎರಡೆರೆಡು ಕೊಲೆ ಮಾಡಿದ್ದಾನೆ.

ಈ ಹಿಂದೆ ಲೈಂಗಿಕ ದೌರ್ಜನ್ಯ, ದರೋಡೆ ಸಂಚು ಸೇರಿದಂತೆ ನಾಲ್ಕು ಪ್ರಕರಣಗಳು ಸುಬ್ರಮಣ್ಯಪುರ, ಬನಶಂಕರಿ ಠಾಣೆಗಳಲ್ಲಿ ಈತನ ವಿರುದ್ಧ ದಾಖಲಾಗಿತ್ತು. ಜೈಲು ವಾಸ ಅನುಭವಿಸಿ ಬಂದಿದ್ದ ಬಂಧಿತ ಆರೋಪಿ ಗಿರೀಶ್​​, 2020ರಲ್ಲಿ 10 ತಿಂಗಳ ಜೈಲು ವಾಸ ಅನುಭವಿಸಿದ್ದ. ಆ ಬಳಿಕ ಹೋಟೆಲ್​​​ನಲ್ಲಿ ಸಹಾಯಕನಾಗಿ ಮತ್ತು ಜೊತೆಗೆ ಗಾರೆ ಕೆಲಸ ಕೂಡ ಮಾಡಿಕೊಂಡಿದ್ದ.

ಇದನ್ನೂ ಓದಿ: ಕುಡಿದು ಬಂದು ರಸ್ತೆ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸುತ್ತಿದ್ದ ಕಿಲ್ಲರ್‌ ಅಂದರ್‌!

ಈ ನಡುವೆ ಸುಲಭವಾಗಿ ಹಣ ಮಾಡುವ ಉದ್ದೇಶದಿಂದ ಕಳ್ಳತನ ಶುರು ಮಾಡಿದ್ದ. ಗೆಳೆಯ ಸುರೇಶ್ ಎಂಬಾತನ ಜೊತೆಗೂಡಿ ಕಳ್ಳತನಕ್ಕೆ ಇಳಿದಿದ್ದರು. ರಾತ್ರಿ ವೇಳೆ ರಸ್ತೆಯಲ್ಲಿ ಮಲಗುವವರೇ ಇವರ ಟಾರ್ಗೆಟ್​. ರಸ್ತೆಯಲ್ಲಿ ಮಲಗಿದ್ದವರ ವಸ್ತುಗಳನ್ನು ಇಬ್ಬರು ಕಳ್ಳತನ ಮಾಡುತ್ತಿದ್ದರು. ಸಿಟಿ ಮಾರ್ಕೆಟ್ ಹಾಗೂ ಮೆಜೆಸ್ಟಿಕ್ ಸುತ್ತಮುತ್ತ ಒಂಟಿಯಾಗಿದ್ದವರನ್ನು ಬೆದರಿಸಿ ಸುಲಿಗೆ ಮಾಡುತಿದ್ದರು.

ಇದನ್ನೂ ಓದಿ: ಭಜನಾ ಮಂಡಳಿಗೆ ಸೇರಿಸಿಕೊಳ್ಳದಿದ್ದಕ್ಕೆ ಆಕ್ರೋಶ: ಚಾಕುವಿನಿಂದ ಇರಿದು ಹಲ್ಲೆ, ಆರೋಪಿ ವಶಕ್ಕೆ

ಕದ್ದ ಮೊಬೈಲ್​ ವಿಚಾರವಾಗಿ ಮೇ.18ರಂದು ಸಿಟಿ ಮಾರ್ಕೆಟ್​​ನಲ್ಲಿ ಇಬ್ಬರು ಜಗಳ ಮಾಡಿದ್ದಾರೆ. ಈ ವೇಳೆ ಸುರೇಶ್​ನ ಮೇಲೆ ಗಿರೀಶ್​ನಿಂದ ಹಲ್ಲೆ ಮಾಡಲಾಗಿದೆ. ಬಳಿಕ ತಲೆ ಮೇಲೆ ಕಲ್ಲು ಹಾಕಿ ಹತ್ಯೆಗೈದಿದ್ದಾನೆ. ಇದಕ್ಕೂ ಕೆಲ ದಿನಗಳ ಹಿಂದೆ ಗಿರೀಶ್​ ಮತ್ತೊಂದು ಕೊಲೆ ಮಾಡಿದ್ದ. ಸಿಗರೇಟ್ ಕೊಡದೇ ಇದ್ದ ಕಾರಣಕ್ಕೆ ಕೊಲೆ ಮಾಡಿದ್ದ. ಮೇ 12ರಂದು ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಸದ್ಯ ಈ ಸಂಬಂಧ ಬನಶಂಕರಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಪುರಿ ಜಗನ್ನಾಥ ದೇವಾಲಯದ ರಥಯಾತ್ರೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನ ಭಾಗಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?