
ಕೊಡಗು: ಗೂಡ್ಸ್ ವಾಹನ ಹಾಗೂ ಓಮ್ನಿ ಕಾರಿನ ನಡುವೆ ನಡೆದ ಭೀಕರ ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ಘಟನೆ ನಡೆದಿದೆ.
ಮೃತರು ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದವರಾಗಿದ್ದು, ಹರೀಶ್ ಹಾಗೂ ಸುಬ್ರಮಣಿ ಎಂಬುವವರು ಘಟನೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಅಪಘಾತದ ದೃಶ್ಯ
ಅಪಘಾತದ ರಭಸಕ್ಕೆ ಓಮ್ನಿ ಕಾರು ಪುಡಿಪುಡಿಯಾಗಿದ್ದು, ಮೃತ ವ್ಯಕ್ತಿ ಹರೀಶ್ ಓಮ್ನಿ ಚಾಲಕನೆಂದು ತಿಳಿದುಬಂದಿದೆ. ಈ ಕುರಿತು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದು ASI ಆಗಬೇಕಿದ್ದ ಹೆಡ್ ಕಾನ್ಸ್ಟೇಬಲ್ ಅಪಘಾತದಲ್ಲಿ ಸಾವು, ಈಡೇರಲಿಲ್ಲ ಅವರ 25 ವರ್ಷದ ಕನಸು
Published On - 10:58 am, Fri, 4 December 20