ನದಿಯಲ್ಲಿ ಈಜು, ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ನೀರು ಪಾಲು

ಮೈಸೂರು: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಲ್ಫ್ರೆಡ್ ವಿಜಯ್(16) ಮತ್ತು ಹೇಮಂತ್(17) ಮೃತ ದುರ್ದೈವಿಗಳು. ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದರು. 45 ವಿದ್ಯಾರ್ಥಿಗಳು, ನಾಲ್ವರು ಉಪನ್ಯಾಸಕರು ಟಿ.ನರಸೀಪುರ ತಾಲೂಕಿನ ತಲಕಾಡು ಬಳಿಯ ನಿಸರ್ಗಧಾಮಕ್ಕೆ ಆಗಮಿಸಿದ್ದರು. ಅದರಲ್ಲಿ ಐವರು ವಿದ್ಯಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಂಬಿಗರ ನೆರವಿನಿಂದ […]

ನದಿಯಲ್ಲಿ ಈಜು, ಬೆಂಗಳೂರಿನ ವಿದ್ಯಾರ್ಥಿಗಳಿಬ್ಬರು ನೀರು ಪಾಲು
ಸಾಧು ಶ್ರೀನಾಥ್​

Updated on: Dec 10, 2019 | 5:29 PM

ಮೈಸೂರು: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಲ್ಫ್ರೆಡ್ ವಿಜಯ್(16) ಮತ್ತು ಹೇಮಂತ್(17) ಮೃತ ದುರ್ದೈವಿಗಳು.

ಬೆಂಗಳೂರಿನ ಹೆಬ್ಬಾಳದ ಪರಿಕ್ರಮ ಹ್ಯುಮಾನಿಟಿ ಫೌಂಡೇಶನ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸ ಕೈಗೊಂಡಿದ್ದರು. 45 ವಿದ್ಯಾರ್ಥಿಗಳು, ನಾಲ್ವರು ಉಪನ್ಯಾಸಕರು ಟಿ.ನರಸೀಪುರ ತಾಲೂಕಿನ ತಲಕಾಡು ಬಳಿಯ ನಿಸರ್ಗಧಾಮಕ್ಕೆ ಆಗಮಿಸಿದ್ದರು.

ಅದರಲ್ಲಿ ಐವರು ವಿದ್ಯಾರ್ಥಿಗಳು ಸ್ನಾನ ಮಾಡಲು ನದಿಗೆ ಇಳಿದಿದ್ದಾರೆ. ನದಿಯಲ್ಲಿ ಈಜಾಡುವ ವೇಳೆ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಅಂಬಿಗರ ನೆರವಿನಿಂದ ಉಳಿದ ಮೂವರು ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದ್ದಾರೆ. ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 1:07 pm, Tue, 10 December 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us