ಬೆಂಗಳೂರು: ತ್ರಿಬಲ್ ರೈಡಿಂಗ್​ ತಂದ ಆಪತ್ತು, ನಾಲ್ವರ ದುರ್ಮರಣ

ಕುಡಿದ ಅಮಲಿನಲ್ಲಿ ತ್ರಿಬಲ್​ ರೈಡಿಂಗ್​ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಕೋಟೆಯಲ್ಲಿ ನಡೆದರೆ, ಬಸವನಗುಡಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದಾನೆ.

ಬೆಂಗಳೂರು: ತ್ರಿಬಲ್ ರೈಡಿಂಗ್​ ತಂದ ಆಪತ್ತು, ನಾಲ್ವರ ದುರ್ಮರಣ
ಸಾಂದರ್ಭಿಕ ಚಿತ್ರ
Edited By:

Updated on: Dec 21, 2020 | 9:08 PM

ಬೆಂಗಳೂರು: ನಗರದಲ್ಲಿ ಕುಡಿದು ವೇಗವಾಗಿ ಗಾಡಿ ಚಲಾಯಿಸುವವರ ಸಂಖ್ಯೆಯೇನು ಕಡಿಮೆ ಇಲ್ಲ. ಇದಕ್ಕೆ ತಡೆ ಹಾಕಲು ಸಂಚಾರಿ ಪೊಲೀಸರು ಪ್ರಯತ್ನ ನಡೆಸುತ್ತಲೇ ಇದ್ದಾರೆ. ಈಗ ಕುಡಿದು ಗಾಡಿ ಚಲಾಯಿಸಿದ್ದಕ್ಕೆ ನಾಲ್ವರು ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಕುಡಿದ ಅಮಲಿನಲ್ಲಿ ತ್ರಿಬಲ್​ ರೈಡಿಂಗ್​ ಹೋಗುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹೊಸಕೋಟೆಯಲ್ಲಿ ನಡೆದರೆ, ಬಸವನಗುಡಿಯಲ್ಲಿ ನಡೆದ ಮತ್ತೊಂದು ಪ್ರಕರಣದಲ್ಲಿ ಓರ್ವ ಮೃತಪಟ್ಟಿದ್ದಾನೆ.

ಲವನೀತ್​ (23), ರಾಜೇಶ್​ (24) ಹಾಗೂ ಹರೀಶ್​ (24) ಗೆಳೆಯನ ಮನೆಯಲ್ಲಿ ನಡೆದ ಪಾರ್ಟಿ ಮುಗಿಸಿ ಬರುತ್ತಿದ್ದರು. ಮೂವರು ಸರಿಯಾಗಿ ಕುಡಿದಿದ್ದರು. ರಾಜೇಶ್​ ಸ್ಕೂಟಿ ಓಡಿಸುತ್ತಿದ್ದ. ಹೊಸಕೋಟೆ ಟೋಲ್​ ಬೂತ್​ ವೇಗವಾಗಿ ಬರುತ್ತಿದ್ದಾಗ ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಕ್​ಗೆ ಸ್ಕೂಟಿ ಗುದ್ದಿದೆ. ಹೆಲ್ಮೆಟ್​ ಧರಿಸದ ಕಾರಣ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಹೀಗಾಗಿ, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಡಿಯೂರು ವೃತ್ತದ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ಸ್ಪೋರ್ಟ್ಸ್​ ಬೈಕ್​ನಲ್ಲಿ ಮೂವರು ಪಾರ್ಟಿ ಮುಗಿಸಿ ಬರುತ್ತಿದ್ದರು. ಈ ವೇಳೆ ಕಾರನ್ನು ಓವರ್​ಟೇಕ್​ ಮಾಡಲು ಹೋದ ಯುವಕ ಪಕ್ಕದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್​ಗೆ ಗುದ್ದಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡ ಧೀರಜ್​ ಮೃತಪಟ್ಟಿದ್ದಾನೆ.

ದೆಹಲಿ ಚಲೋ ಮುಗಿಸಿಕೊಂಡು ಊರಿಗೆ ಮರಳುತ್ತಿದ್ದ ಇಬ್ಬರು ರೈತರು ಅಪಘಾತಕ್ಕೆ ಬಲಿ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us