AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲ್ಯಾಕ್ ಫಂಗಸ್ ಆಯ್ತು, ಈಗ ವೈಟ್ ಫಂಗಸ್ ಆತಂಕ; ಬೆಳಗಾವಿಯಲ್ಲಿ 2 ಪ್ರಕರಣ ಪತ್ತೆ

ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್‌ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್‌ಒ ಡಾ.ಎಸ್.ವಿ‌.ಮುನ್ಯಾಳ್ ಹೇಳಿಕೆ ನೀಡಿದ್ದಾರೆ.

ಬ್ಲ್ಯಾಕ್ ಫಂಗಸ್ ಆಯ್ತು, ಈಗ ವೈಟ್ ಫಂಗಸ್ ಆತಂಕ; ಬೆಳಗಾವಿಯಲ್ಲಿ 2 ಪ್ರಕರಣ ಪತ್ತೆ
ವೈಟ್​ ಫಂಗಸ್
preethi shettigar
|

Updated on: May 26, 2021 | 8:12 AM

Share

ಬೆಳಗಾವಿ: ಕೊರೊನಾ ಎರಡನೇ ಅಲೆ ಹೆಚ್ಚಾಯಿತು ಎನ್ನುವಾಗಲೇ, ಬ್ಲ್ಯಾಕ್ ಫಂಗಸ್ ಶುರುವಾಗಿದ್ದು, ಚಿಕಿತ್ಸೆ ಸಿಗದೆ ಈಗಾಗಲೇ ಜನರು ಸಾವಿಗೀಡಾಗಿದ್ದಾರೆ. ಇನ್ನೇನು ಈ ಸಮಸ್ಯೆ ನಿವಾರಣೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು, ಈಗ ಇನ್ನೊಂದು ಸೋಂಕು ಕಾಣಿಸಿಕೊಂಡಿದೆ. ಅದುವೇ ವೈಟ್ ಫಂಗಸ್. ಬೇರೆ ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ ಎನ್ನುತ್ತಿರುವಾಗ ಕುಂದಾನಗರಿ ಬೆಳಗಾವಿಯಲ್ಲಿಯೂ ವೈಟ್ ಫಂಗಸ್ ಕಾಣಿಸಿಕೊಂಡಿದ್ದು, ಸದ್ಯ ಎಲ್ಲರಲ್ಲಿ ಆತಂಕ ಸೃಷ್ಟಿಯಾಗಿದೆ.

ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್‌ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್‌ಒ ಡಾ.ಎಸ್.ವಿ‌.ಮುನ್ಯಾಳ್ ಹೇಳಿಕೆ ನೀಡಿದ್ದಾರೆ.

ಬಳಿಕ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಬಗ್ಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಎಲ್ಲರಿಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಸಾವನ್ನಪ್ಪಿದ್ದಾರೆ. ಕೊವಿಡ್ ಚಿಕಿತ್ಸೆ ಉಪಚಾರದ ಅಡ್ಡ ಪರಿಣಾಮಗಳಲ್ಲಿ ಬ್ಲ್ಯಾಕ್ ಫಂಗಸ್ ಕೂಡ ಒಂದು. ಒಂದೇ ಮಾಸ್ಕ್ ಎರಡು ಮೂರು ದಿನ ಬಳಸಿದರೆ ಅದೂ ಫಂಗಸ್‌ಗೆ ಕಾರಣವಾಗುತ್ತದೆ ಎಂದು ಬೆಳಗಾವಿಯಲ್ಲಿ ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್ ತಿಳಿಸಿದ್ದಾರೆ.

ಮಧುಮೇಹಿಗಳಲ್ಲಿ ಹೆಚ್ಚಾಗಿ ಬ್ಲ್ಯಾಕ್ ಫಂಗಸ್ ಸಹ ಪತ್ತೆಯಾಗುತ್ತಿದೆ. ಗೋಕಾಕ್, ಅಥಣಿಯ ಇಬ್ಬರು ಬ್ಲ್ಯಾಕ್ ಫಂಗಸ್‌ನಿಂದ ಸಾವನ್ನಪ್ಪಿದ್ದಾರೆ. ಉಳಿದ 7 ರೋಗಿಗಳಿಗೆ ಆಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್ ಹೇಳಿದ್ದಾರೆ.

ಇದನ್ನೂ ಓದಿ:

Yellow Fungus: ಬ್ಲ್ಯಾಕ್, ವೈಟ್ ಫಂಗಸ್ ಬಳಿಕ ಯೆಲ್ಲೋ ಫಂಗಸ್ ಪತ್ತೆ; ರೋಗ ಲಕ್ಷಣ ಹಾಗೂ ಇತರ ಮಾಹಿತಿ ಇಲ್ಲಿದೆ

ಕರ್ನಾಟಕದಲ್ಲಿ ಮೊದಲ ಬಾರಿಗೆ ವೈಟ್ ಫಂಗಸ್ ಪತ್ತೆ? ಆರೋಗ್ಯ ಅಧಿಕಾರಿಗಳಿಂದ ಸ್ಪಷ್ಟನೆ ಬಾಕಿ

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?