AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲ್ಯಾಕ್ ಫಂಗಸ್ ಆಯ್ತು, ಈಗ ವೈಟ್ ಫಂಗಸ್ ಆತಂಕ; ಬೆಳಗಾವಿಯಲ್ಲಿ 2 ಪ್ರಕರಣ ಪತ್ತೆ

ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್‌ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್‌ಒ ಡಾ.ಎಸ್.ವಿ‌.ಮುನ್ಯಾಳ್ ಹೇಳಿಕೆ ನೀಡಿದ್ದಾರೆ.

ಬ್ಲ್ಯಾಕ್ ಫಂಗಸ್ ಆಯ್ತು, ಈಗ ವೈಟ್ ಫಂಗಸ್ ಆತಂಕ; ಬೆಳಗಾವಿಯಲ್ಲಿ 2 ಪ್ರಕರಣ ಪತ್ತೆ
ವೈಟ್​ ಫಂಗಸ್
preethi shettigar
|

Updated on: May 26, 2021 | 8:12 AM

Share

ಬೆಳಗಾವಿ: ಕೊರೊನಾ ಎರಡನೇ ಅಲೆ ಹೆಚ್ಚಾಯಿತು ಎನ್ನುವಾಗಲೇ, ಬ್ಲ್ಯಾಕ್ ಫಂಗಸ್ ಶುರುವಾಗಿದ್ದು, ಚಿಕಿತ್ಸೆ ಸಿಗದೆ ಈಗಾಗಲೇ ಜನರು ಸಾವಿಗೀಡಾಗಿದ್ದಾರೆ. ಇನ್ನೇನು ಈ ಸಮಸ್ಯೆ ನಿವಾರಣೆಗೆ ಆರೋಗ್ಯ ಇಲಾಖೆ ಮುಂದಾಗಿದ್ದು, ಈಗ ಇನ್ನೊಂದು ಸೋಂಕು ಕಾಣಿಸಿಕೊಂಡಿದೆ. ಅದುವೇ ವೈಟ್ ಫಂಗಸ್. ಬೇರೆ ರಾಜ್ಯಗಳಲ್ಲಿ ಕಾಣಿಸಿಕೊಂಡಿದೆ ಎನ್ನುತ್ತಿರುವಾಗ ಕುಂದಾನಗರಿ ಬೆಳಗಾವಿಯಲ್ಲಿಯೂ ವೈಟ್ ಫಂಗಸ್ ಕಾಣಿಸಿಕೊಂಡಿದ್ದು, ಸದ್ಯ ಎಲ್ಲರಲ್ಲಿ ಆತಂಕ ಸೃಷ್ಟಿಯಾಗಿದೆ.

ಬೆಳಗಾವಿಯಲ್ಲಿ 2 ವೈಟ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಬಯಾಪ್ಸಿ, ಪೊಟ್ಯಾಸಿಯಮ್‌ ಹೈಡ್ರಾಕ್ಸೈಡ್ ತಪಾಸಣೆಗೆ ಕಳಿಸಿದ್ದೇವೆ ಎಂದು ಡಿಹೆಚ್‌ಒ ಡಾ.ಎಸ್.ವಿ‌.ಮುನ್ಯಾಳ್ ಹೇಳಿಕೆ ನೀಡಿದ್ದಾರೆ.

ಬಳಿಕ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಬಗ್ಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ 9 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಎಲ್ಲರಿಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಸಾವನ್ನಪ್ಪಿದ್ದಾರೆ. ಕೊವಿಡ್ ಚಿಕಿತ್ಸೆ ಉಪಚಾರದ ಅಡ್ಡ ಪರಿಣಾಮಗಳಲ್ಲಿ ಬ್ಲ್ಯಾಕ್ ಫಂಗಸ್ ಕೂಡ ಒಂದು. ಒಂದೇ ಮಾಸ್ಕ್ ಎರಡು ಮೂರು ದಿನ ಬಳಸಿದರೆ ಅದೂ ಫಂಗಸ್‌ಗೆ ಕಾರಣವಾಗುತ್ತದೆ ಎಂದು ಬೆಳಗಾವಿಯಲ್ಲಿ ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್ ತಿಳಿಸಿದ್ದಾರೆ.

ಮಧುಮೇಹಿಗಳಲ್ಲಿ ಹೆಚ್ಚಾಗಿ ಬ್ಲ್ಯಾಕ್ ಫಂಗಸ್ ಸಹ ಪತ್ತೆಯಾಗುತ್ತಿದೆ. ಗೋಕಾಕ್, ಅಥಣಿಯ ಇಬ್ಬರು ಬ್ಲ್ಯಾಕ್ ಫಂಗಸ್‌ನಿಂದ ಸಾವನ್ನಪ್ಪಿದ್ದಾರೆ. ಉಳಿದ 7 ರೋಗಿಗಳಿಗೆ ಆಯಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಹೆಚ್‌ಒ ಡಾ.ಎಸ್.ವಿ.ಮುನ್ಯಾಳ್ ಹೇಳಿದ್ದಾರೆ.

ಇದನ್ನೂ ಓದಿ:

Yellow Fungus: ಬ್ಲ್ಯಾಕ್, ವೈಟ್ ಫಂಗಸ್ ಬಳಿಕ ಯೆಲ್ಲೋ ಫಂಗಸ್ ಪತ್ತೆ; ರೋಗ ಲಕ್ಷಣ ಹಾಗೂ ಇತರ ಮಾಹಿತಿ ಇಲ್ಲಿದೆ

ಕರ್ನಾಟಕದಲ್ಲಿ ಮೊದಲ ಬಾರಿಗೆ ವೈಟ್ ಫಂಗಸ್ ಪತ್ತೆ? ಆರೋಗ್ಯ ಅಧಿಕಾರಿಗಳಿಂದ ಸ್ಪಷ್ಟನೆ ಬಾಕಿ

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?