ಕೊಡಗು ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ಮರಿಯಾನೆ ಸಾವು; ಮತ್ತೊಂದೆಡೆ ಕಾಡಾನೆ ಸಾವು

Wild elephants death: ಶ್ರೀಮಂಗಲ ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯಾಧಿಕಾರಿ ಮುಜೀಬ್ ಗಂಡಾನೆಯ ಶವಪರೀಕ್ಷೆ ನಡೆಸಿದ್ದಾರೆ. ಶವಪರೀಕ್ಷೆ ವರದಿ ಬಂದ ಮೇಲೆ ಗಂಡಾನೆಯ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು  ಶ್ರೀಮಂಗಲ ಆರ್​ಎಫ್​ಒ (Srimangala RFO) ವೀರೇಂದ್ರ ತಿಳಿಸಿದ್ದಾರೆ.  

ಕೊಡಗು ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ಮರಿಯಾನೆ ಸಾವು; ಮತ್ತೊಂದೆಡೆ ಕಾಡಾನೆ ಸಾವು
ಕೊಡಗು ಅರಣ್ಯ ಪ್ರದೇಶದಲ್ಲಿ ಹುಲಿ ದಾಳಿಗೆ ಮರಿಯಾನೆ ಸಾವು; ಮತ್ತೊಂದೆಡೆ ಕಾಡಾನೆ ಸಾವು
Follow us
| Updated By: ಸಾಧು ಶ್ರೀನಾಥ್​

Updated on:Jul 05, 2021 | 10:06 AM

ಮಡಿಕೇರಿ: ನಾಗರಹೊಳೆ ಉದ್ಯಾನವನ ವ್ಯಾಪ್ತಿಯಲ್ಲಿ ಘಟನೆ ಹುಲಿ ದಾಳಿಗೆ ಒಂದು ತಿಂಗಳ ಮರಿಯಾನೆ ಸಾವಿಗೀಡಾಗಿದೆ. ಇನ್ನು, ಪೊನ್ನಂಪೇಟೆ ತಾಲ್ಲೂಕಿನಲ್ಲಿ ಕಾಡಾನೆಗಳ ಕಾದಾಟದಲ್ಲಿ 14 ವರ್ಷದ ಗಂಡಾನೆ ಮೃತಪಟ್ಟಿದೆ. 

ಪ್ರತ್ಯೇಕ ಪ್ರಕರಣಗಳಲ್ಲಿ ಎರಡು ಕಾಡಾನೆಗಳು ಮೃತಪಟ್ಟಿವೆ. ಕೊಡಗು-ಮೈಸೂರು ಗಡಿಯ ನಾಗರಹೊಳೆ ವ್ಯಾಪ್ತಿಯಲ್ಲಿ (Nagarahole National Park ) ದಕ್ಷಿಣ ಕೊಡಗು ಭಾಗದಲ್ಲಿ ನಿಟ್ಟೂರು ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಹುಲಿ ದಾಳಿಗೆ ಒಂದು ತಿಂಗಳ ಮರಿಯಾನೆ (elephant calf) ಸಾವನ್ನಪ್ಪಿದೆ.

ಎಎಸ್​ಎಫ್ ಗೋಪಾಲ್​ ಮತ್ತು ಇತರೆ ಅರಣ್ಯ ಸಿಬ್ಬಂದಿಯು ಮರಿಯಾನೆ ದೇಹ ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹುಲಿ ದಾಳಿಯಿಂದಲೇ ಒಂದು ತಿಂಗಳ ಮರಿಯಾನೆ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.

ಪೊನ್ನಂಪೇಟೆ ತಾಲ್ಲೂಕಿನ ಪೂಜೆಕಲ್ಲು ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಲ್ಲಿ ಕಾಡಾನೆಗಳ ಕಾದಾಟದಲ್ಲಿ 14 ವರ್ಷದ ಗಂಡಾನೆ (male wild elephant) ಅಸುನೀಗಿದೆ ಎನ್ನಲಾಗಿದೆ. ಎರಡೂ ಸ್ಥಳಗಳಿಗೆ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.  ಪೂಜೆಕಲ್ಲು ವ್ಯಾಪ್ತಿಯಲ್ಲಿ ಕಲ್ಪನಾ ಎಂಬುವವರ ಖಾಸಗಿ ಎಸ್ಟೇಟ್​ಗೆ ಸಮೀಪ 14 ವರ್ಷದ ಗಂಡಾನೆ ಮೃತದೇಹ ಪತ್ತೆಯಾಗಿದೆ.

ಶ್ರೀಮಂಗಲ ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯಾಧಿಕಾರಿ ಮುಜೀಬ್ ಗಂಡಾನೆಯ ಶವಪರೀಕ್ಷೆ ನಡೆಸಿದ್ದಾರೆ. ಶವಪರೀಕ್ಷೆ ವರದಿ ಬಂದ ಮೇಲೆ ಗಂಡಾನೆಯ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ ಎಂದು  ಶ್ರೀಮಂಗಲ ಆರ್​ಎಫ್​ಒ (Srimangala RFO) ವೀರೇಂದ್ರ ತಿಳಿಸಿದ್ದಾರೆ.

(two wild elephants get killed near nagarahole park says Virendra Srimangala RFO)

ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಬಾಲಕ ಬಲಿ: ಅರಣ್ಯ ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

Published On - 10:03 am, Mon, 5 July 21

ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು