AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಜನೇಯನ ದರ್ಶನಕ್ಕೆ ಬಂದು.. 20 ಸಾವಿರದ ಮೊಬೈಲ್ ಕದ್ದೊಯ್ದ ಖತರ್ನಾಕ್​ ಕಳ್ಳಿಯರು

ದೇವರ ದರ್ಶನಕ್ಕೆಂದು ಬಂದ ಕಳ್ಳಿಯರಿಬ್ಬರು 20 ಸಾವಿರದ ಮೊಬೈಲ್ ಕದ್ದೊಯ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಳಸಿಗೇರಿಯ ಆಂಜನೇಯ ದೇಗುಲದಲ್ಲಿ ನಡೆದಿದೆ. ದೇವನಾಳ ಗ್ರಾಮದ ಗಿರೀಶ್ ಎಂಬುವವರಿಗೆ ಸೇರಿದ ಮೊಬೈಲ್‌ನ ಈ ಖತರ್ನಾಕ್​ ಲೆಡೀಸ್​ ಕದ್ದಿದ್ದಾರೆ.

ಆಂಜನೇಯನ ದರ್ಶನಕ್ಕೆ ಬಂದು.. 20 ಸಾವಿರದ ಮೊಬೈಲ್ ಕದ್ದೊಯ್ದ ಖತರ್ನಾಕ್​ ಕಳ್ಳಿಯರು
20 ಸಾವಿರದ ಮೊಬೈಲ್ ಕದ್ದೊಯ್ದ ಖತರ್ನಾಕ್​ ಕಳ್ಳಿಯರು
KUSHAL V
|

Updated on: Feb 27, 2021 | 11:54 PM

Share

ದೇವರ ದರ್ಶನಕ್ಕೆಂದು ಬಂದ ಕಳ್ಳಿಯರಿಬ್ಬರು 20 ಸಾವಿರದ ಮೊಬೈಲ್ ಕದ್ದೊಯ್ದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಳಸಿಗೇರಿಯ ಆಂಜನೇಯ ದೇಗುಲದಲ್ಲಿ ನಡೆದಿದೆ. ದೇವನಾಳ ಗ್ರಾಮದ ಗಿರೀಶ್ ಎಂಬುವವರಿಗೆ ಸೇರಿದ ಮೊಬೈಲ್‌ನ ಈ ಖತರ್ನಾಕ್​ ಲೆಡೀಸ್​ ಕದ್ದಿದ್ದಾರೆ. ಗಿರೀಶ್​ ಹುಡುಗನೊಬ್ಬನ ಕೈಗೆ ಮೊಬೈಲ್ ಕೊಟ್ಟು ದೇವರ ದರ್ಶನಕ್ಕೆ ತೆರಳಿದ್ರು. ಈ ವೇಳೆ, ಬಾಲಕನ ಕೈಯಲ್ಲಿದ್ದ ಮೊಬೈಲ್ ಕದ್ದು ಕಳ್ಳಿಯರಿಬ್ಬರು ಪರಾರಿಯಾಗಿದ್ದಾರೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

BGK TEMPLE MOBILE THEFT LEAD

20 ಸಾವಿರದ ಮೊಬೈಲ್ ಕದ್ದೊಯ್ದ ಖತರ್ನಾಕ್​ ಕಳ್ಳಿಯರು

108 ಆಂಬುಲೆನ್ಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ 108 ಆಂಬುಲೆನ್ಸ್​ನಲ್ಲೇ ಗರ್ಭಿಣಿಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ನಡಿದಿದೆ. ಕಂದಗಲ್-ಇಳಕಲ್ ಮಾರ್ಗ ಮಧ್ಯೆ ಗರ್ಭಿಣಿ ಮಗುವಿಗೆ ಜನ್ಮನೀಡಿದ್ದಾರೆ.

ಕಂದಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಳಕಲ್ ಸರ್ಕಾರಿ ಆಸ್ಪತ್ರೆಗೆ 108 ಆಂಬುಲೆನ್ಸ್​ನಲ್ಲಿ ಹೊರಟಿದ್ದ ನಿಂಗಮ್ಮಗೆ ಮಾರ್ಗ ಮಧ್ಯೆ ಹೆರಿಗೆ ಬೇನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಸಿಬ್ಬಂದಿ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಬಳಿಕ ನಿಂಗಮ್ಮ ಮತ್ತು ಮಗು ಆರೋಗ್ಯವಾಗಿದ್ದಾರೆ. ಸದ್ಯ, ತಾಯಿ ಮಗುವನ್ನು ಇಳಕಲ್ ಆಸ್ಪತ್ರೆಗೆ ದಾಖಲಿಸಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.

BGK DELIVERY 1

108 ಆಂಬುಲೆನ್ಸ್​ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ

ಕೋಣನೂರು, ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ ಕಿರು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೋಣನೂರು, ಚುಂಚನಹಳ್ಳಿಯಲ್ಲಿ ನಡೆದಿದೆ. ಅರಣ್ಯ ಪ್ರದೇಶದ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಅಗ್ನಿ ಅವಘಡದಿಂದ ಹತ್ತಾರು ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ.

ಬಾವಿಯಲ್ಲಿ ಸಂಗ್ರಹಿಸಿದ್ದ ಜಿಲೆಟಿನ್, ಡಿಟೋನೇಟರ್ ಜಪ್ತಿ ಬಾವಿಯಲ್ಲಿ ಸಂಗ್ರಹಿಸಿದ್ದ ಜಿಲೆಟಿನ್, ಡಿಟೋನೇಟರ್ ಜಪ್ತಿ ಮಾಡಲಾಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದಲ್ಲಿ ವರದಿಯಾಗಿದೆ. ಗೋಕಾಕ್ ತಾಲೂಕಿನ ಘಟಪ್ರಭಾ ನಿವಾಸಿ ಶಾಂತಿಲಾಲ್‌ ಮತ್ತು ವಿಜಯಪುರ ಜಿಲ್ಲೆ ಬಸವನಬಾಗೇವಾಡಿಯ ತ್ಯಾಗರಾಜ್ ಬಂಧಿತ ಆರೋಪಿಗಳು.

ಇಬ್ಬರನ್ನು ಬಂಧಿಸಿ ಜಿಲೆಟಿನ್ ಹಾಗೂ ಡಿಟೋನೇಟರ್ ಜಪ್ತಿ ಮಾಡಲಾಗಿದೆ. ಹತ್ತರವಾಟದ ಕಲ್ಲಪ್ಪ ಸೂಜಿ ಎಂಬುವವರ ಬಾವಿಯಲ್ಲಿ ಇವೆಲ್ಲಾ ಪತ್ತೆಯಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BGM GELATIN SEIZURE 3

ಬಾವಿಯಲ್ಲಿ ಸಂಗ್ರಹಿಸಿದ್ದ ಜಿಲೆಟಿನ್, ಡಿಟೋನೇಟರ್ ಜಪ್ತಿ

ಲಾರಿಗೆ ಬೈಕ್ ಡಿಕ್ಕಿ: ಇಬ್ಬರ ಸಾವು ಸುಲ್ತಾನಪುರ ಕ್ರಾಸ್ ಬಳಿ ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸುಲ್ತಾನಪುರ ಕ್ರಾಸ್​ನಲ್ಲಿ ನಡಿದಿದೆ. ವಿಠಲಾಪುರದ ರಾಜಶೇಖರ(20), ಜಗದೀಶ್​(21) ಮೃತ ದುರ್ದೈವಿಗಳು. ಭೀಕರ ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕುಡುತಿನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BLY ACCIDENT 4

ಅಪಘಾತದ ಭೀಕರ ದೃಶ್ಯ

ಇದನ್ನೂ ಓದಿ: ಅಂತೂ 4 ದಶಕಗಳ ಕಗ್ಗಂಟು ಬಗೆಹರಿಯಿತು.. ಹೊಸ ಅವತಾರದಲ್ಲಿ ಕಾಣಸಿಗಲಿದೆ ಸುಪ್ರಸಿದ್ಧ ಅಗಸ್ತ್ಯ ತೀರ್ಥ!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!