AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವು: ಸಿಎಂ ನೋಡಲು ಬಂದು ಶಾಕ್​ ಹೊಡೆಸಿಕೊಂಡ ಯುವಕ

ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯರನ್ನು ನೋಡಲು ಹೋಗಿ ಯುವಕನೋರ್ವ ಶಾಕ್​ ಹೊಡೆಸಿಕೊಂಡಿರುವಂತಹ ಘಟನೆ ನಡೆದಿದೆ. ಗಾಯಗೊಂಡ ಯುವಕನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ದೇಗುಲ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವು: ಸಿಎಂ ನೋಡಲು ಬಂದು ಶಾಕ್​ ಹೊಡೆಸಿಕೊಂಡ ಯುವಕ
ದೇಗುಲ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವು: ಸಿಎಂ ನೋಡಲು ಬಂದು ಶಾಕ್​ ಹೊಡೆಸಿಕೊಂಡ ಯುವಕ
Sahadev Mane
| Edited By: |

Updated on: Aug 05, 2024 | 10:54 PM

Share

ಚಿಕ್ಕೋಡಿ, ಆಗಸ್ಟ್​ 5: ಸಿಎಂ ಸಿದ್ದರಾಮಯ್ಯರನ್ನು ನೋಡಲು ಹೋಗಿ ಯುವಕ (b0y) ವಿದ್ಯುತ್ ಶಾಕ್ (Electric shock) ಹೊಡೆಸಿಕೊಂಡಿರುವಂತಹ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದಲ್ಲಿ ನಡೆದಿದೆ. ಮಹೇಶ್ ಹುಣ್ಣರಗಿ (22) ಯುವಕನಿಗೆ ವಿದ್ಯುತ್ ತಗುಲಿ ಗಂಭೀರ ಗಾಯಗೊಂಡಿದ್ದಾರೆ. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆಂದು ಸಿಎಂ  ಸಿದ್ದರಾಮಯ್ಯ ಜುಗೂಳ ಗ್ರಾಮಕ್ಕೆ ಭೇಟಿ ವೇಳೆ ಅವಘಡ ಸಂಭವಿಸಿದೆ.

ಮುಖ್ಯಮಂತ್ರಿ ನೋಡಲು ಯುವಕ ಮಹೇಶ್ ಮೇಲ್ಛಾವಣಿ ಮೇಲೆ ಹತ್ತಿದ್ದಾನೆ. ಈ ವೇಳೆ ವಿದ್ಯುತ್ ತಗುಲಿ ಮುಖ ಮತ್ತು ಕೈಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹೇಶ್​ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರ ಸಾವು

ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ದೇವಸ್ಥಾನ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಮಹಿಳೆಯರಿಬ್ಬರು ಸಾವನ್ನಪ್ಪಿದ್ದಾರೆ. ಕಲಾವತಿ ಬೀದರವಾಡಿ(37), ಸವಿತಾ ಒಂಟಿ(36) ಮೃತರು. ವಾಲ್ಮೀಕಿ ದೇವಸ್ಥಾನ ಸ್ವಚ್ಛಗೊಳಿಸಿ ಶೆಟರ್ ಎಳೆಯುವಾಗ ದುರಂತ ಸಂಭವಿಸಿದೆ.

ಇದನ್ನೂ ಓದಿ: ನರ್ಸಿಂಗ್​ ವಿದ್ಯಾರ್ಥಿನಿ ಆತ್ಮಹತ್ಯೆ: ಸಾಯುವ ಮುನ್ನ ತಾಯಿಗೆ ಕರೆ ಮಾಡಿ ಹೇಳಿದ್ದೇನು ಗೊತ್ತಾ?

ಮೃತ ಕಲಾವತಿ ಪತಿ ಮಾರುತಿ ಬೀದರವಾಡಿಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವಪತ್ತೆ: ಆತ್ಮಹತ್ಯೆ ಶಂಕೆ

ಚಿತ್ರದುರ್ಗ: ಕವಾಡಿಗರಹಟ್ಟಿ ಬಡಾವಣೆ ಬಳಿಯ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈವರೆಗೆ ಮೃತ ವ್ಯಕ್ತಿಯ ಗುರುತು ಪತ್ತೆ ಆಗಿಲ್ಲ. ರೈಲ್ವೆ ಇಲಾಖೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೀನುಗಾರಿಕೆಗೆ ತೆರಳಿದ್ದ ಬೋಟ್​ನಲ್ಲಿ ಬೆಂಕಿ ಅವಘಡ 

ಮಂಗಳೂರು: ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್​ನಲ್ಲಿ ಬೆಂಕಿ ಅವಘಡ ಸಂಭವಿಸಿರುವಂತಹ ಘಟನೆ ನಡೆದಿದೆ. ಸಮುದ್ರದ ಮಧ್ಯದಲ್ಲಿ ಮೀನುಗಾರಿಕೆ ಬೋಟ್ ಹೊತ್ತಿಉರಿದೆ. ಹುಸೇನ್ ಎಂಬುವರ ಸಫವಿ ಹೆಸರಿನ ಬೋಟ್ ಬೆಂಕಿಗಾಹುತಿ ಆಗಿದ್ದು, ಬೋಟ್​ನಲ್ಲಿದ್ದ 10 ಮೀನುಗಾರರನ್ನ ರಕ್ಷಿಸಲಾಗಿದೆ. ದಕ್ಕೆಯಿಂದ 88 ನಾಟಿಕಲ್ ಮೈಲ್ ದೂರದಲ್ಲಿ ಬೋಟ್ ಮುಳುಗಡೆ ಆಗಿದ್ದು, ಸುಮಾರು 1 ಕೋಟಿ ರೂಪಾಯಿ ನಷ್ಟವಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್