AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಮೈಸೂರಿನ ಫುಟ್​ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ ಹೈಕೋರ್ಟ್

ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲಿನ ದಾಳಿಗೆ ಪ್ರತಿಭಟನೆ ನಡೆಸಲು ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಇದರಂತೆ ಒಂದು ಲಕ್ಷ ರೂಪಾಯಿ ಬಾಂಡ್, ಶಾಂತಿಯುತ ಪ್ರತಿಭಟನೆ, ಮತ್ತು ಚಿತ್ರೀಕರಣ ಕಡ್ಡಾಯ. ಸರ್ಕಾರ ಕಾನೂನು ಸುವ್ಯವಸ್ಥೆಗೆ ಭಂಗ ಎಂದು ವಾದಿಸಿದರೆ, ಅರ್ಜಿದಾರರು ಶಾಂತಿಯುತ ಪ್ರತಿಭಟನೆಯ ಭರವಸೆ ನೀಡಿದರು.

ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ: ಮೈಸೂರಿನ ಫುಟ್​ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದ ಹೈಕೋರ್ಟ್
ಹೈಕೋರ್ಟ್
Ramesha M
| Updated By: Ganapathi Sharma|

Updated on: Feb 24, 2025 | 1:43 PM

Share

ಮೈಸೂರು, ಫೆಬ್ರವರಿ 24: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣ ಸಂಬಂಧ ಮೈಸೂರಿನ ಫುಟ್​ಬಾಲ್ ಮೈದಾನದಲ್ಲಿ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಪ್ರತಿಭಟನೆಗೆ ಅವಕಾಶ ಕೋರಿ ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿ ಪೊಲೀಸರಿಗೆ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಮಿತಿಯು ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಪ್ರತಿಭಟನೆಗೆ ಅವಕಾಶ ನೀಡುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದೆ. ಜತೆಗೆ, 1 ಲಕ್ಷ ರೂಪಾಯಿ ಬಾಂಡ್ ನೀಡಲು ಆಯೋಜಕರಿಗೆ ನಿರ್ದೇಶನ ನೀಡಿದೆ.

ಹೈಕೋರ್ಟ್ ಷರತ್ತುಗಳೇನು?

1 ಲಕ್ಷ ರೂಪಾಯಿ ಬಾಂಡ್ ನೀಡಬೇಕು. ಪ್ರತಿಭಟನೆ ಶಾಂತಿಯುತವಾಗಿರಬೇಕು ಹಾಗೂ ಸಂಪೂರ್ಣ ಚಿತ್ರೀಕರಣ ಮಾಡಬೇಕು. ಶಾಂತಿಭಂಗವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಬಾರದು. ಅಹಿತಕರ ಘಟನೆಯಾದರೆ ಅರ್ಜಿದಾರರನ್ನೇ ಹೊಣೆ ಮಾಡಲಾಗುತ್ತದೆ ಎಂದು ಹೈಕೋರ್ಟ್ ಹೇಳಿದೆ.

ಸಂಜೆ 3.30 ರಿಂದ ಪ್ರತಿಭಟನೆ ನಡೆಸಲು ಅವಕಾಶ ನೀಡಲು ಸೂಚನೆ ಮೈಸೂರಿನ ಪೊಲೀಸ್ ಆಯುಕ್ತರಿಗೆ ನ್ಯಾ.ಆರ್. ದೇವದಾಸ್ ಅವರಿದ್ದ ಪೀಠ ಸೂಚನೆ ನೀಡಿದೆ.

ಸರ್ಕಾರದ ಪರ ವಕೀಲರ ವಾದ ಏನು?

ಪ್ರತಿಭಟನೆಗೆ ಅವಕಾಶ ನೀಡಿದರೆ ಕಾನೂನು ಸುವ್ಯವಸ್ಥೆಗೆ ಸಮಸ್ಯೆಯಾಗಬಹುದು. 8 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ, 9 ಮಂದಿ ಪೊಲೀಸರಿಗೆ ಗಾಯವಾಗಿದೆ. ಬೇರೆ ಸಂಘಟನೆಗಳು ಧರಣಿ ನಡೆಸಲು ಅನುಮತಿ ಕೋರಿದ್ದರು, ನೀಡಿಲ್ಲ. ಸೂಕ್ಷ್ಮತೆ ಪರಿಗಣಿಸಿ ಪ್ರತಿಭಟನೆ ನಿರ್ಬಂಧಿಸಿ ನಿಷೇಧಾಜ್ಞೆ ಹೇರಲಾಗಿದೆ ಎಂದು ಸರ್ಕಾರದ ಪರ ಹೆಚ್ಚುವರಿ ಎಜಿ ಭಾನು ಪ್ರಕಾಶ್ ಹೈಕೋರ್ಟ್​​ಗೆ ತಿಳಿಸಿದರು. ಜತೆಗೆ, ಫುಟ್​ಬಾಲ್ ಮೈದಾನ, ಮಹಾರಾಜ ಕಾಲೇಜ್ ಗ್ರೌಂಡ್​ನಲ್ಲಿ‌ ಅವಕಾಶ ನೀಡಬಹುದು, ಆದರೆ 300ಕ್ಕಿಂತ ಹೆಚ್ಚಿನ ಜನರಿಗೆ ಅವಕಾಶ ನೀಡದಂತೆ ಮನವಿ ಮಾಡಿದರು.

ಅರ್ಜಿದಾರರ ವಾದವೇನು?

ರಾಷ್ಟ್ರೀಯ ಸುರಕ್ಷಾ ಜನಾಂದೋಲನ ಸಮಿತಿಯ ರಿಟ್ ಅರ್ಜಿ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಪ್ರತಿಭಟನೆಗೆ ಅನುಮತಿ ನೀಡಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಏನಾದರೂ ಅಹಿತಕರ ಘಟನೆ ನಡೆದರೆ ಯಾರು ಹೊಣೆ? ರಸ್ತೆ ಬಿಟ್ಟು ಬೇರೆ ಮೈದಾನದಲ್ಲಿ ಪ್ರತಿಭಟನೆ ನಡೆಸಿದರೆ ಪರಿಗಣಿಸುವುದಾಗಿ ತಿಳಿಸಿತು.

ಇದನ್ನೂ ಓದಿ: ಹೈಕಮಾಂಡ್ ಏಟಿಗೆ ರೆಬೆಲ್ ಯತ್ನಾಳ್ ಸೈಲೆಂಟ್: ಮೈಸೂರು ಚಲೋ ಮೂಲಕ ಬಿವೈ ವಿಜಯೇಂದ್ರ ಶಕ್ತಿ ಪ್ರದರ್ಶನ

ನಂತರ ಸೂಕ್ತ ಸ್ಥಳ ತಿಳಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ವಿಚಾರಣೆಯನ್ನು ಕೆಲಕಾಲ ಮುಂದೂಡಿತು. ನಂತರ ಸರ್ಕಾರದ ಪರ ವಕೀಲರ ವಾದ ಆಲಿಸಿ, ಪ್ರತಿಭಟನೆಗೆ ಷರತ್ತುಬದ್ಧ ಅನುಮತಿ ನೀಡಿತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ