Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ ಜಿಲ್ಲಾಧಿಕಾರಿಯ ಕೃಷಿ ಆಸಕ್ತಿ; ಮನೆಯ ಪಕ್ಕದಲ್ಲೇ ತರಕಾರಿ ಬೆಳೆದು ಇತರರಿಗೆ ಮಾದರಿಯಾದ ಜಿ. ಜಗದೀಶ್

ಮನೆಯ ಸುತ್ತಲಿನ ಗಿಡ ಮರಗಳ ತರಗಲೆಗಳನ್ನು ಬಳಸಿ, ಸಾವಯವ ಗೊಬ್ಬರ ತಯಾರಿಸಿದ್ದು, ಪೂರ್ತಿ ತರಕಾರಿ ಕೃಷಿಯನ್ನು ಸಾವಯವ ‌ರೀತಿಯಲ್ಲಿ ಮಾಡುತ್ತಿದ್ದಾರೆ ಎನ್ನುವುದು ಮತ್ತೊಂದು ವಿಶೇಷ.

ಉಡುಪಿ ಜಿಲ್ಲಾಧಿಕಾರಿಯ ಕೃಷಿ ಆಸಕ್ತಿ; ಮನೆಯ ಪಕ್ಕದಲ್ಲೇ ತರಕಾರಿ ಬೆಳೆದು ಇತರರಿಗೆ ಮಾದರಿಯಾದ ಜಿ. ಜಗದೀಶ್
ಕೃಷಿ ಕಾರ್ಯದಲ್ಲಿ ತೊಡಗಿರುವ ಉಡುಪಿ ಜಿಲ್ಲಾಧಿಕಾರಿ
Follow us
preethi shettigar
| Updated By: ganapathi bhat

Updated on: Mar 28, 2021 | 10:05 PM

ಉಡುಪಿ: ವೃತ್ತಿಯಲ್ಲಿ ಜಿಲ್ಲಾಧಿಕಾರಿಯಾಗಿದ್ದರು, ಪ್ರವೃತ್ತಿಯಾಗಿ ಕೃಷಿ ಮಾಡುವುದರಲ್ಲಿ ಮುಂದಾಗಿರುವ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯ ಉತ್ಸಾಹ ನಿಜಕ್ಕೂ ಇತರರಿಗೆ ಮಾದರಿ. ತಾನೋರ್ವ ಐಎಎಸ್ ಅಧಿಕಾರಿ ಎಂದು ಹಮ್ಮು ಬಿಮ್ಮಿಲ್ಲದೇ ತನ್ನ ಬಂಗ್ಲೆಯ ಸುತ್ತಲೂ ಸಾವಯವ ತರಕಾರಿ ಕೃಷಿ ಮಡುತ್ತಿದ್ದಾರೆ ಕೃಷ್ಣನೂರಿನ ಜಿಲ್ಲಾಧಿಕಾರಿಗಳು.

ಒಬ್ಬ ರೈತ ಯಾವ ರೀತಿ ಕೃಷಿ ಕೆಲಸದಲ್ಲಿ ನಿರತರಾಗಿರುತ್ತಾರೋ ಹಾಗೇ ಟಿ ಶರ್ಟ್ ಧರಿಸಿ, ಲುಂಗಿ ಕಟ್ಕೊಂಡು, ತರಕಾರಿ ಗಿಡದ ಮಧ್ಯೆ ಕಳೆ ಕೀಳುತ್ತಾ, ನೀರು ಹಾಯಿಸುತ್ತಾ ಇರುವ ಈ ವ್ಯಕ್ತಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಜಿ. ಜಗದೀಶ್. ಕಚೇರಿಯ ಒತ್ತಡದ ಕೆಲಸದ ನಡುವೆಯೇ ತರಕಾರಿ ಕೃಷಿ ಮಾಡುವುದು ಎಂದರೆ ಇವರಿಗೆ ಪಂಚ ಪ್ರಾಣ.

ಹೀಗಾಗಿ ತಮ್ಮ ಬಂಗ್ಲೆ ಸುತ್ತಲೂ ಇವರು ಹೂವಿನ ಗಿಡಗಳ ಮಧ್ಯೆಯೇ ತೊಂಡೆ, ಬೆಂಡೆ, ಟೊಮೆಟೊ, ಬಸಲೆ, ಮಟ್ಟು ಗುಳ್ಳ ಹೀಗೆ ನಾನಾ ತರಕಾರಿಗಳನ್ನು ಬೆಳೆಯುತ್ತಿದ್ದಾರೆ. ಮನೆಯ ಸುತ್ತಲಿನ ಗಿಡ ಮರಗಳ ತರಗಲೆಗಳನ್ನು ಬಳಸಿ, ಸಾವಯವ ಗೊಬ್ಬರ ತಯಾರಿಸಿದ್ದು, ಪೂರ್ತಿ ತರಕಾರಿ ಕೃಷಿಯನ್ನು ಸಾವಯವ ‌ರೀತಿಯಲ್ಲಿ ಮಾಡುತ್ತಿದ್ದಾರೆ ಎನ್ನುವುದು ಮತ್ತೊಂದು ವಿಶೇಷ.

DC AGRICULTURE

ಗೀಡಗಳಿಗೆ ನೀರು ಹಾಕುತ್ತಿರುವ ಜಿಲ್ಲಾಧಿಕಾರಿ ಜಿ. ಜಗದೀಶ್

ಕೃಷಿ ಕುಟುಂಬದಿಂದ ಬಂದ ಇವರು ಶಾಲಾ ದಿನಗಳಲ್ಲಿ ಕೃಷಿ ಕೆಲಸಗಳನ್ನು ಮುಗಿಸಿ ಶಾಲೆಗೆ ತೆರಳುತ್ತಿದ್ದರಂತೆ. ಹೀಗಾಗಿ ಬಾಲ್ಯದಿಂದಲೂ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರಿಗೆ ಕೃಷಿ ಎಂದರೆ ಇಷ್ಟ. ಉಡುಪಿಗೆ ಬಂದಾಗಿನಿಂದ ಬಂಗ್ಲೆ ಸುತ್ತ ತರಕಾರಿ ಕೃಷಿ ಮಾಡುತ್ತಿರುವ ಇವರು, ಮಾವು, ಚಿಕ್ಕು, ಹಲಸು ಹೀಗೆ ಹಲವು ಹಣ್ಣಿನ ಗಿಡಗಳನ್ನು ನೆಟ್ಟಿದ್ದಾರೆ. ಇಷ್ಟೇ ಅಲ್ಲದೇ ಎರಡು ಜೇನುಗೂಡುಗಳನ್ನು ಇಟ್ಟು ಜೇನು ಕೃಷಿಯನ್ನು ಮಾಡುತ್ತಿದ್ದಾರೆ. ಬೆಳಗ್ಗಿನ ಸಮಯದಲ್ಲಿ ಕೃಷಿ ಕಾರ್ಯದಲ್ಲಿ ಜಿಲ್ಲಾಧಿಕಾರಿ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ.

DC AGRICULTURE

ಬೆಂಡೆ ಗೀಡ

ಒತ್ತಡದ ಕೆಲಸದ ರಿಲ್ಯಾಕ್ಸ್​ಗೆ ಇದು ಸಹಕಾರಿ. ಜೊತೆಗೆ ಮನೆಗೆ ಬೇಕಾದ ಪೌಷ್ಟಿಕಾಂಶ ತರಕಾರಿ ಇಲ್ಲೇ ಸಿಕ್ಕಂತಾಗುತ್ತದೆ. ಮಾರುಕಟ್ಟೆಯಲ್ಲಿ ಸಿಗುವ ಕಲಬೆರಕೆ ಜೇನು ಸೇವನೆ ಬದಲು ನಾವೇ ತಯಾರಿಸಿದ ಜೇನು ಉತ್ತಮ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

DC AGRICULTURE

ಡಿಸಿ ಮನೆಯ ಪಕ್ಕದಲ್ಲಿಯೇ ತರಕಾರಿ ಬೆಳೆದಿದ್ದಾರೆ

ಒಟ್ಟಿನಲ್ಲಿ ಹಳ್ಳಿ ಮಂದಿಯೇ ಕೃಷಿಯಿಂದ ವಿಮುಖರಾಗಿ ಪಟ್ಟಣ ಸೇರುವ ಈ ಕಾಲಘಟ್ಟದಲ್ಲಿ ಡಿಸಿಯವರ ಕೃಷಿ ಪ್ರೀತಿ ಮೆಚ್ಚುವಂತದ್ದು. ವೈಟ್ ಕಾಲರ್ ಕೆಲಸ ಬೇಕು ಎಂದು ಕೃಷಿಯನ್ನು ಕೀಳಾಗಿ ಕಾಣುವವರಿಗೆ ಜಿಲ್ಲಾಧಿಕಾರಿಯ ಈ ಕಾರ್ಯ ನಿಜಕ್ಕೂ ಮಾದರಿಯಾಗಲಿದೆ.

ಇದನ್ನೂ ಓದಿ:

ಪರಿಸರ ಕಾಳಜಿಯಿಂದ ಇತರರಿಗೆ ಮಾದರಿಯಾದ ವಿಜಯಪುರದ ಯುವಕರು

Mann Ki Baat: ಜೇನುಕೃಷಿಯನ್ನು ಆದಾಯದ ಮಾರ್ಗವಾಗಿ ರೈತರು ಸದುಪಯೋಗಪಡಿಸಿಕೊಳ್ಳಬೇಕು; ಮನ್ ಕಿ ಬಾತ್​ನಲ್ಲಿ ಪ್ರಧಾನಿ ಮೋದಿ ಕರೆ

ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ