AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಮೆಎಣ್ಣೆ ಕೊರತೆ ಹಿನ್ನೆಲೆ ದೋಣಿಗಳಿಗೆ ಲಂಗರು ಹಾಕಿದ ಮೀನುಗಾರರು; ಸರ್ಕಾರಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆ

ಕರಾವಳಿಯಲ್ಲಿ ನಾಡದೋಣಿಗೆ ಪೂರೈಕೆಯಾಗುತ್ತಿರುವ ಸೀಮೆಎಣ್ಣೆ ಕಳೆದ ಮೂರು ತಿಂಗಳಿನಿಂದ ಮಾಯಾವಾಗಿದೆ. ಹೀಗಾಗಿ ಕರಾವಳಿಯ ಮೂರು ಜಿಲ್ಲೆಗಳಲ್ಲಿ ನಾಡದೋಣಿಗಳಿಗೆ ಲಂಗರು ಹಾಕಲಾಗಿದೆ. ಪರಿಣಾಮ ಮೀನುಗಾರಿಕೆಯನ್ನೇ ನೆಚ್ಚಿಕೊಂಡಿರುವ ಸಾವಿರಾರು ಕುಟುಂಬಗಳಿಗೆ ದಾರಿ ಕಾಣದಾಗಿದೆ.

ಸೀಮೆಎಣ್ಣೆ ಕೊರತೆ ಹಿನ್ನೆಲೆ ದೋಣಿಗಳಿಗೆ ಲಂಗರು ಹಾಕಿದ ಮೀನುಗಾರರು; ಸರ್ಕಾರಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆ
ಸೀಮೆಎಣ್ಣೆ ಕೊರತೆ ಹಿನ್ನೆಲೆ ಮೀನುಗಾರಿಕೆ ಸ್ಥಗಿತ
TV9 Web
| Edited By: |

Updated on:Nov 05, 2022 | 12:42 PM

Share

ಉಡುಪಿ: ಕರಾವಳಿ ಭಾಗದಲ್ಲಿ ಮೀನುಗಾರಿಕೆ ನಡೆಸುವ ಬಹುತೇಕ ದೋಣಿಗಳು ಸೀಮೆಎಣ್ಣೆ ಚಾಲಿತವಾಗಿವೆ. ದಕ್ಷಿಣ ಕನ್ನಡದ 1,345, ಉಡುಪಿ 4,896, ಉತ್ತರ ಕನ್ನಡ 1,789 ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಒಟ್ಟು 8,030 ಸೀಮೆಎಣ್ಣೆ ಚಾಲಿತ ದೋಣಿಗಳಿದ್ದು, ಮಾಸಿಕ 300 ಲೀಟರ್‌ನಂತೆ ವಾರ್ಷಿಕ 24,090 ಕೆ.ಎಲ್‌. ಸೀಮೆಎಣ್ಣೆ ಅಗತ್ಯವಿದೆ. ಒಂದು ದೋಣಿಯಲ್ಲಿ ಕನಿಷ್ಠ 6ರಂತೆ ಒಟ್ಟು 60,500 ನಾಡದೋಣಿ ಮೀನುಗಾರರಿದ್ದಾರೆ. ರಾಜ್ಯ ಸರಕಾರದ ಆದೇಶದಂತೆ ನಾಡದೋಣಿ ಮೀನುಗಾರರಿಗೆ ಆಗಸ್ಟ್‌ನಿಂದ ಸೀಮೆಎಣ್ಣೆ ಬಿಡುಗಡೆಯಾಗಬೇಕಿತ್ತಾದರೂ ಆಗಿಲ್ಲ. ಪ್ರಸ್ತುತ ಮೀನುಗಾರಿಕೆಗೆ ಉತ್ತಮ ಅವಕಾಶ ಇದ್ದರೂ ಸೀಮೆಎಣ್ಣೆ ಸಿಗದ ಕಾರಣ ಮೀನುಗಾರಿಕೆ ಸಾಧ್ಯವಾಗುತ್ತಿಲ್ಲ. ಬೇರೆ ಆದಾಯ ಇಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ ಎಂದು ಮೀನುಗಾರರು ಹೇಳುತ್ತಾರೆ.

2013ರಿಂದ ಸರಕಾರದ ಆದೇಶದಂತೆ ನಾಡದೋಣಿಗಳಿಗೆ ಮಾಸಿಕ 300 ಲೀಟರ್‌ನಂತೆ ಸೀಮೆಎಣ್ಣೆ ನೀಡಲಾಗುತ್ತದೆ. ಆ ಅವಧಿಯಲ್ಲಿ ರಾಜ್ಯದಲ್ಲಿ 4,514 ನಾಡದೋಣಿಗಳಿದ್ದವು. ಆ ಪ್ರಕಾರವೇ ಪ್ರಸ್ತುತ ದಿನದಲ್ಲೂ ಸೀಮೆಎಣ್ಣೆ ಬಿಡುಗಡೆಯಾಗುತ್ತದೆ. ಪ್ರಸ್ತುತ 8,030 ನಾಡ ದೋಣಿಗಳಿದ್ದರೂ ಸರಕಾರ ಸೀಮೆ ಎಣ್ಣೆ ಪೂರೈಕೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಸರಿಯಾಗಿ ಸೀಮೆಎಣ್ಣೆ ಪೂರೈಕೆ ಆಗದ ಮತ್ತು ಹೆಚ್ಚುವರಿ ಸೀಮೆಎಣ್ಣೆ ಪೂರೈಕೆಗೆ ಸರ್ಕಾರದ ಮೇಲೆ ಒತ್ತಡ ಹೇರಲು ಮೀನುಗಾರರು ಮುಂದಾಗಿದ್ದಾರೆ. ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ವತಿಯಿಂದ ಸೀಮೆಎಣ್ಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನ.7ರಂದು ರಾಜ್ಯ ಕರಾವಳಿಯ 3 ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳ ಎದುರು ಏಕಕಾಲದಲ್ಲಿ ಬೃಹತ್‌ ಪ್ರತಿಭಟನೆ ನಡೆಯಲಿದೆ. ಉಡುಪಿಯಲ್ಲಿ 20 ಸಾವಿರ ಮೀನುಗಾರರು ಸೇರಲಿದ್ದು, ಬೆಳಗ್ಗೆ 10ಕ್ಕೆ ಎಂಜಿಎಂ ಕಾಲೇಜು ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಮೂಲಕ ತೆರಳಿ ಹಕ್ಕೊತ್ತಾಯ ನಡೆಸಲಿದ್ದಾರೆ.

ಒಟ್ಟಾರೆಯಾಗಿ ರಾಜ್ಯದ ಕರಾವಳಿಯಲ್ಲಿರುವ 8,030 ದೋಣಿಗಳಿದ್ದು, ಎಲ್ಲದಕ್ಕೂ 300 ಲೀಟರ್‌ಗಳಂತೆ ಸೀಮೆಎಣ್ಣೆ ಒದಗಿಸುವಂತೆ ಕೋರಿ ಮೀನುಗಾರರು ಸರಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಮೀನುಗಾರರ ಮನವಿಗೆ ಸರಕಾರ ಶೀಘ್ರ ಸ್ಪಂದನೆ ನೀಡದಿದ್ದರೆ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಮೀನುಗಾರರು ನೀಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Sat, 5 November 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ